ಎನ್.ಆರ್.ಪುರ : ಬಾಳೆಹೊನ್ನೂರು ಶ್ರೀಮದ್ ರಂಭಾಪುರಿ ಜಗದ್ಗುರು ಪ್ರಸನ್ನ ರೇಣುಕ ಡಾ.ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರ ಮೇ ತಿಂಗಳ ಪ್ರವಾಸ ಕಾರ್ಯಕ್ರಮ ಈ ಕೆಳಗಿನಂತಿದೆ.
ಮೇ 1ರಂದು ಹಾಸನ ಜಿಲ್ಲೆ ಅರಸೀಕೆರೆ ತಾಲೂಕ ಬಾಣಾವರದಲ್ಲಿ ಶ್ರೀ ಬಾಣೇಶ್ವರ ದೇವಸ್ಥಾನ ಉದ್ಘಾಟನೆ, 2ರಂದು ಚಿಕ್ಕಮಗಳೂರು ಜಿಲ್ಲೆ ಬೇರುಗಂಡಿ ಬೃಹನ್ಮಠದಲ್ಲಿ ಶ್ರೀ ಸಿದ್ಧೇಶ್ವರ ದೇವಸ್ಥಾನದ ಕಳಸಾರೋಹಣ ಹಾಗೂ ರೇಣುಕ ಮಹಾಂತ ಶ್ರೀಗಳ ಪಟ್ಟಾಧಿಕಾರದ ದ್ವಾದಶ ವರ್ಧಂತಿ ಸಮಾರಂಭ, 3ರಂದು ಹುಬ್ಬಳ್ಳಿಯಲ್ಲಿ ಆರ್.ಎಂ. ಹಿರೇಮಠರ ಅಮೃತ ಮಹೋತ್ಸವ ಸಮಾರಂಭ, 4ರಂದು ಬೆಂಗಳೂರಿನಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಸಮಾರಂಭದ ಸಾನ್ನಿಧ್ಯ ವಹಿಸುವರು.
ಮೇ 10ರಂದು ದಾವಣಗೆರೆ ಜಿಲ್ಲೆ ಹರಿಹರ ತಾಲೂಕ ಮಲೇಬೆನ್ನೂರು ಶ್ರೀ ವೀರಭದ್ರೇಶ್ವರ ದೇವಸ್ಥಾನದಲ್ಲಿ ಇಷ್ಟಲಿಂಗ ಮಹಾಪೂಜಾ, 12ರಂದು ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕ ನಾಗರನವಿಲೆಯಲ್ಲಿ ಇಷ್ಟಲಿಂಗ ಮಹಾಪೂಜಾ ಹಾಗೂ ಧರ್ಮ ಸಮಾರಂಭ ನಡೆಸುವರು.
15ರಂದು ಕಲಬುರ್ಗಿ ಜಿಲ್ಲೆ ಶ್ರೀನಿವಾಸ ಸರಡಗಿಯಲ್ಲಿ ಶ್ರೀ ರೇವಣಸಿದ್ಧೇಶ್ವರ ಶ್ರೀಗಳ ಷಷ್ಟಬ್ಧಿ ಸಮಾರಂಭ, 16ರಂದು ಬೆಳಿಗ್ಗೆ 11 ಗಂಟೆಗೆ ಬೀದರ ನಗರದಲ್ಲಿ ಶಾಲಾ ಸಮಾರಂಭ, ಸಂಜೆ 5 ಗಂಟೆಗೆ ಮಹಾರಾಷ್ಟ್ರ ರಾಜ್ಯ ಉದ್ಗೀರದಲ್ಲಿ ಶ್ರೀ ಹಾವಲಿಂಗೇಶ್ವರ ಗದ್ದುಗೆ ಕಳಸಾರೋಹಣ ಸಮಾರಂಭ, 17ರಂದು ಕಲಬುರ್ಗಿ ಜಿಲ್ಲೆ ಕಾಳಗಿಯಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಸಮಾರಂಭ, 19ರಂದು ಚಿಕ್ಕಮಗಳೂರು ಜಿಲ್ಲೆ ಅಜ್ಜಂಪುರ ತಾಲೂಕ ಗೊಂಡೇದಹಳ್ಳಿ ಗ್ರಾಮದಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಸಮಾರಂಭದ ಸಾನ್ನಿಧ್ಯ ವಹಿಸುವರು.
23ರಂದು ಬಾಳೆಹೊನ್ನೂರು ಶ್ರೀ ಜಗದ್ಗುರು ರಂಭಾಪುರಿ ಪೀಠದಲ್ಲಿ ಪೌರ್ಣಿಮೆಯ ನಿಮಿತ್ಯ ವಾಸ್ತವ್ಯವಿದ್ದು ಭಕ್ತಾದಿಗಳಿಗೆ ದರ್ಶನಾಶೀವಾದ ನೀಡುವರು. 27ರಂದು ಶಿರಸಿ ಮತ್ತು ಸೊರಬ ತಾಲೂಕಿನಲ್ಲಿ ಇಷ್ಟಲಿಂಗ ಪೂಜೆ ನೆರವೇರಿಸುವರು.
ರಂಭಾಪುರಿ ಜಗದ್ಗುರುಗಳವರ ಈ ಮೇಲಿನ ಎಲ್ಲ ಕಾರ್ಯಕ್ರಮಗಳ ಲಾಭವನ್ನು ಸಮಸ್ತ ಜನತೆ ಪಡೆಯಬೇಕೆಂದು ಶ್ರೀಪೀಠದ ವಾರ್ತಾ ಸಂಯೋಜನಾಧಿಕಾರಿ ಸಿ.ಎಚ್. ಬಾಳನಗೌಡ್ರ ವಿನಂತಿಸಿದ್ದಾರೆ.
ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ಸುಳಿಗಾಳಿ ಸೃಷ್ಟಿಯಾಗಿರುವ ಕಾರಣ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಬಿರುಗಾಳಿ…
ಶಿವಮೊಗ್ಗ : ಮಂಗಳವಾರ ನಡೆಯುವ ಲೋಕಸಭಾ ಚುನಾವಣೆಗೆ ಸಕಲ ಸಿದ್ದತೆಗಳು ನಡೆದಿದ್ದು, ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳು ಇಂದು ಮತಗಟ್ಟೆಗಳಿಗೆ ಅಗತ್ಯವಾದ…
ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವು ! ಎನ್.ಆರ್.ಪುರ : ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಶಿವಮೊಗ್ಗ :ನಾಳೆ ನಡೆಯಲಿರುವ ಲೋಕಸಭೆ ಚುನಾವಣೆ ಮತದಾನಕ್ಕೆ ಸಕಲ ಸಿದ್ಧತೆ ಪೂರ್ಣಗೊಂಡಿದ್ದು, ಇಂದು ನಿಗದಿಪಡಿಸಲಾದ ಮತಗಟ್ಟೆಗಳಿಗೆ ಅಧಿಕಾರಿಗಳು, ಸಿಬ್ಬಂದಿಗಳು ಮತಯಂತ್ರ…
ತೀರ್ಥಹಳ್ಳಿ: ಮೇ 5 ಭಾನುವಾರ ನಡೆದ ತೀರ್ಥಹಳ್ಳಿ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.
ಹೊಸನಗರ : ಕಾಂಗ್ರೆಸ್ ಪಕ್ಷದೇಶದ ಪ್ರಗತಿಯಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಮೀಸಲಾತಿ ಜಾರಿಗೊಳಿಸಿದ ಪರಿಣಾಮ ಇಂದು ಕೆಳಜಾತಿಯವರು ಸರ್ಕಾರಿ ಉದ್ಯೋಗ…