ರಾಜರಾಜೇಶ್ವರಿ ಅಲಂಕಾರದಲ್ಲಿ ಕಂಗೊಳಿಸಿದ ಶೃಂಗೇರಿ ಶಾರದಾಂಬೆ

ಶೃಂಗೇರಿ: ಶರನ್ನವರಾತ್ರಿ ಪ್ರಯುಕ್ತ ಶಾರದಾ ಮಠದಲ್ಲಿ ಭಾನುವಾರ ಶಾರದಾಂಬೆಗೆ ರಾಜರಾಜೇಶ್ವರಿ ಅಲಂಕಾರ ಮಾಡಲಾಯಿತು. ಪಾಶ, ಅಂಕುಶ, ಪುಷ್ಪಬಾಣ ಮತ್ತು ಬಿಲ್ಲು ಧರಿಸಿ ಕರುಣಪೂರಿತ ದೃಷ್ಟಿಯೊಂದಿಗೆ ಸರ್ವಾಲಂಕಾರ ಭೂಷಿತೆ ಶಾರದೆಯ ನೋಡಿ ಭಕ್ತರು ಧನ್ಯರಾದರು.

ಉಭಯ ಗುರುಗಳಾದ ಭಾರತೀತೀರ್ಥ ಸ್ವಾಮೀಜಿ ಮತ್ತು ವಿಧುಶೇಖರ ಭಾರತೀ ಸ್ವಾಮೀಜಿ ಅವರಿಂದ ವಿಶೇಷ ಪೂಜೆ, ಪಾರಾಯಣ, ಜಪ, ಕುಮಾರಿ ಪೂಜೆ, ಸುವಾಸಿನಿ ಪೂಜೆ ಮುಂತಾದ ಧಾರ್ಮಿಕ ಕಾರ್ಯಗಳು ನಡೆದವು.

ಚಂದ್ರಶೇಖರಭಾರತೀ ಸಭಾಂಗಣದಲ್ಲಿ ಸಂಜೆ ಬೆಂಗಳೂರಿನ ಜ್ಞಾನೋದಯ ಶಾಲೆಯ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಶಾರದಾ ಮಠದಲ್ಲಿ ಸಂಜೆ 6 ಗಂಟೆಗೆ ನಡೆದ ಬೀದಿ ಉತ್ಸವದಲ್ಲಿ ಬೇಗಾರು ಗ್ರಾಮ ಮತ್ತಿತರ ಕಡೆಯ ಜನರು ಭಾಗವಹಿಸಿ ಪುಳಕಗೊಂಡರು. ಬಿದರಗೋಡು ರಾಮದೇವಸ್ಥಾನ, ಬೇಗಾರು ಗಣಪತಿ ಅಂಜನೇಯ ದೇವಸ್ಥಾನ, ಕೋಟೆ ಸೋಮೇಶ್ವರ ದೇವಾಲಯ, ಹರಾವರಿ ಮತ್ತು ಹಗ್ಗುರಡಿ ಮಲ್ಲಿಕಾರ್ಜುನ ದೇವಸ್ಥಾನ, ಅಸನಬಾಳು ಗುತ್ಯಮ್ಮ ಮುಂತಾದ ದೇವಾಲಯಗಳ ಪದಾಧಿಕಾರಿಗಳು, ಕುಲಾಲ ಸಂಘ ಮತ್ತು ಮೊಗವೀರ ಸಮಾಜ, ರಾಜ್ಯ ಸರ್ಕಾರ ನೌಕರರ ಸಂಘ, ನಿವೃತ್ತ ನೌಕರರ ಸಂಘ, ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂಘ-ಸಂಸ್ಥೆಗಳು, ಶಾಲಾ-ಕಾಲೇಜುಗಳ ಪದಾಧಿಕಾರಿಗಳು ಮತ್ತು ವಿವಿಧ ಸಂಘ ಸಂಸ್ಥೆಯ ಪ್ರತಿನಿಧಿಗಳು ಭಾಗವಹಿಸಿದ್ದರು.

ವಿಧುಶೇಖರಭಾರತೀ ಸ್ವಾಮೀಜಿ ಸಾಂಪ್ರದಾಯಿಕ ಕಿರೀಟ, ಆಭರಣ ಧರಿಸಿ ಭಾಗವಹಿಸಿದರು. ಬಂಗಾರದ ರಥದಲ್ಲಿ ಮೇಲಿನ ಸಿಂಹಾಸನದಲ್ಲಿ ಶಾರದೆಯ ಉತ್ಸವ ಮೂರ್ತಿ ಇಡಲಾಗಿತ್ತು. ವೇದ–ವಾದ್ಯ ಫೋಷ, ಛತ್ರ ಚಾಮರದೊಂದಿಗೆ ಒಳ ಪ್ರಾಂಗಣದಲ್ಲಿ 3 ಸುತ್ತು ಉತ್ಸವ ನಡೆಯಿತು. ಗುರುಗಳು ಸಿಂಹಾಸನದಲ್ಲಿ ಆಸೀನರಾದರು. ಸಪ್ತಶತಿ ಪಾರಾಯಣದ ಅಧ್ಯಯನ, ಅಮ್ಮನವರಿಗೆ ಮಂಗಳಾರತಿ, 4 ವೇದಗಳ ಪಾರಾಯಣ, ಪಂಚಾಂಗ ಶ್ರವಣ, ಸಂಗೀತ ಸೇವೆ ನೆರವೇರಿತು. ಉತ್ತರ ನೀರಾಜನದೊಂದಿಗೆ ದರ್ಬಾರು ಮುಕ್ತಾಯಗೊಂಡಿತು.

Malnad Times

Share
Published by
Malnad Times

Recent Posts

Arecanut Today Price | ಮೇ 5ರ ಅಡಿಕೆ ರೇಟ್

ತೀರ್ಥಹಳ್ಳಿ: ಮೇ 5 ಭಾನುವಾರ ನಡೆದ ತೀರ್ಥಹಳ್ಳಿ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.

15 hours ago

ಕಾಂಗ್ರೆಸ್ ಮೀಸಲಾತಿ ಜಾರಿಗೊಳಿಸಿದ್ದರಿಂದ ಕೆಳ ವರ್ಗದವರಿಗೂ ಸರ್ಕಾರಿ ಉದ್ಯೋಗ ಲಭಿಸಿದೆ ; ಬೇಳೂರು ಗೋಪಾಲಕೃಷ್ಣ

ಹೊಸನಗರ : ಕಾಂಗ್ರೆಸ್ ಪಕ್ಷದೇಶದ ಪ್ರಗತಿಯಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಮೀಸಲಾತಿ ಜಾರಿಗೊಳಿಸಿದ ಪರಿಣಾಮ ಇಂದು ಕೆಳಜಾತಿಯವರು ಸರ್ಕಾರಿ ಉದ್ಯೋಗ…

16 hours ago

ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪನವರಿಂದ ಭರ್ಜರಿ ರೋಡ್ ಷೋ

ರಿಪ್ಪನ್‌ಪೇಟೆ : ನಾಡಿದ್ದು ಮೇ 7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಚುನಾವಣೆಯ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪನವರು ಇಂದು ಭರ್ಜರಿ…

16 hours ago

ಪೆನ್‌ಡ್ರೈವ್ ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷದ ಹಸ್ತಕ್ಷೇಪವಿಲ್ಲ ; ಸುಧೀರ್‌ಕುಮಾರ್ ಮುರೊಳ್ಳಿ ಸ್ಪಷ್ಟನೆ

ಹೊಸನಗರ : ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿರುವ ಹಾಸನದ ಪ್ರಜ್ವಲ್ ರೇವಣ್ಣ ಅವರ ಪ್ರಕರಣ ಅತ್ಯಂತ ಹೇಯವಾದದ್ದು. ಹೆಣ್ಣು ಮಕ್ಕಳ ಮಾನಹಾನಿಯಾಗುವಂತಹ…

18 hours ago

ಕಾಡಾನೆ ದಾಳಿಯಿಂದ ಮೃತಪಟ್ಟ ತಿಮ್ಮಪ್ಪ ನಿವಾಸಕ್ಕೆ ಬಿವೈಆರ್ ಭೇಟಿ, ಕುಟುಂಬಸ್ಥರಿಗೆ ಸಾಂತ್ವನ

ರಿಪ್ಪನ್‌ಪೇಟೆ : ಅರಸಾಳು ಗ್ರಾಪಂ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ಕಾಡಾನೆ ದಾಳಿಗೆ ತುತ್ತಾಗಿದ್ದ ಮೃತಪಟ್ಟ ತಿಮ್ಮಪ್ಪ ನಿವಾಸಕ್ಕೆ…

21 hours ago

Shivamogga | ನಗರದಲ್ಲಿ ಗಮನ ಸೆಳೆದ ಮತದಾನ ಜಾಗೃತಿ ‘ಮ್ಯಾರಾಥಾನ್’

ಶಿವಮೊಗ್ಗ : ನಮ್ಮನ್ನು ಯಾರು ಆಳಬೇಕೆಂಬ ತೀರ್ಮಾನ ಮತದಾರರ ಕೈಯಲಿದೆ. ಆದ್ದರಿಂದ ಎಲ್ಲ ಮತದಾರರು ತಪ್ಪದೇ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿ…

22 hours ago