ಶೃಂಗೇರಿ : ಶರನ್ನವರಾತ್ರಿಯ ಐದನೇ ದಿನವಾದ ಬುಧವಾರ ಶೃಂಗೇರಿ ಶಾರದಾ ಮಠದ ಶಾರದೆಯು ಆದಿಶಕ್ತಿಯ ಕೈಯಲ್ಲಿ ಶಕ್ತ್ಯಾಯುಧವನ್ನು ಧರಿಸಿ, ನವಿಲನ್ನೇರಿದ ಮಯೂರ ವಾಹನಾಲಂಕಾರದಲ್ಲಿ ಕಂಗೊಳಿಸಿದಳು.
ಮಧ್ಯಾಹ್ನ ಉಭಯ ಗುರುಗಳಾದ ಭಾರತಿತೀರ್ಥ ಸ್ವಾಮೀಜಿ ಮತ್ತು ವಿಧುಶೇಖರಭಾರತಿ ಸ್ವಾಮೀಜಿ ಶಾರದಾಂಬೆಗೆ ವಿಶೇಷ ಪೂಜೆ ಸಲ್ಲಿಸಿದರು.
ಶರನ್ನವರಾತ್ರಿ ಪ್ರಯುಕ್ತ ಋಗ್ವೇದ, ಯಜುರ್ವೇದ, ಸಾಮವೇದ, ಅಥರ್ವಣ ವೇದಗಳ ಪಾರಾಯಣ, ಮಾಧವೀಯ ಶಂಕರ ದಿಗ್ವಿಜಯ, ಸೂತ ಸಂಹಿತೆ, ಭುವನೇಶ್ವರಿ ಜಪ, ಕುಮಾರಿ ಹಾಗೂ ಸುಹಾಸಿನಿ ಪೂಜೆ ಮುಂತಾದ ಧಾರ್ಮಿಕ ಕಾರ್ಯಕ್ರಮಗಳು ನಡೆದವು.
ಬೀದಿ ಉತ್ಸವ:
ಶಾರದಾ ಮಠದಲ್ಲಿ ಸಂಜೆ 6 ಗಂಟೆಗೆ ನಡೆದ ಬೀದಿ ಉತ್ಸವದಲ್ಲಿ ಮೆಣಸೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭಕ್ತರು ಭಾಗವಹಿಸಿದರು. ಸಾಂಸ್ಕೃತಿ ಕಾರ್ಯಕ್ರಮದ ಅಂಗವಾಗಿ ಬೆಂಗಳೂರಿನ ವಿದ್ಯಾರಾಜ ಮತ್ತು ವೃಂದದವರ ಹಾಡುಗಾರಿಕೆ ನಡೆಯಿತು.
ದರ್ಬಾರು:
ಶಾರದಾ ಮಠದ ಸಂಪ್ರದಾಯಕ್ಕೆ ಅನುಸಾರವಾಗಿ ಮಠದ ಕಿರಿಯ ಗುರುಗಳಾದ ವಿಧುಶೇಖರಭಾರತಿ ಸ್ವಾಮೀಜಿಯವರು ಕಿರೀಟ, ಆಭರಣಗಳನ್ನು ಧರಿಸಿ ಚಂದ್ರಮೌಳೇಶ್ವರ ದೇವಾಲಯದಿಂದ ಶಾರದಾಮ್ಮನವರ ದೇವಾಲಯದ ವರೆಗೆ ನಡೆದ ಉತ್ಸವದಲ್ಲಿ ಭಾಗವಹಿಸಿದರು.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…