ಶ್ರೀ ರಂಭಾಪುರಿ ಜಗದ್ಗುರುಗಳ ಮಾರ್ಚ್ ತಿಂಗಳ ಪ್ರವಾಸ ಕಾರ್ಯಕ್ರಮ

ಎನ್.ಆರ್.ಪುರ : ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳವರ ಮಾರ್ಚ 2024ನೇ ಮಾಹೆಯ ಪ್ರವಾಸ ಕಾರ್ಯಕ್ರಮ ಈ ಕೆಳಗಿನಂತಿದೆ.

ಮಾ. 1ರಂದು ಸವದತ್ತಿ ತಾಲೂಕು ಹರಳಕಟ್ಟಿಯಲ್ಲಿ ಲಿಂ. ಶ್ರೀ ಸಂಗಮೇಶ್ವರ ಅಜ್ಜನವರ ಪುಣ್ಯ ಸ್ಮರಣೋತ್ಸವ, 2ರಂದು ಸವದತ್ತಿ ತಾಲೂಕು ಹೂಲಿ ಸಾಂಬಯ್ಯನವರ ಮಠದಲ್ಲಿ ಲಿಂ. ಶ್ರೀ ಸಂಗಮೇಶ್ವರ ಅಜ್ಜನವರ ಲಿಂಗಾಂಗ ಸಾಮರಸ್ಯ ಸಮಾರಂಭ, 4ರಂದು ಹುಬ್ಬಳ್ಳಿ ತಾಲೂಕ ಹಳ್ಳಿಯಾಳದಲ್ಲಿ ಶ್ರೀ ನಂದಿಬಸವೇಶ್ವರ ಮೂರ್ತಿ ಪ್ರತಿಷ್ಠಾಪನಾ ಸಮಾರಂಭದ ಸಾನ್ನಿಧ್ಯ ವಹಿಸುವರು.

ದಿನಾಂಕ 5ರಂದು ಹರಿಹರ ತಾಲೂಕು ಮಲೇಬೆನ್ನೂರು ಗ್ರಾಮದಲ್ಲಿ ಶ್ರೀ ಬೀರಲಿಂಗೇಶ್ವರ ದೇವಸ್ಥಾನದಲ್ಲಿ ಇಷ್ಟಲಿಂಗ ಮಹಾಪೂಜಾ ಸಮಾರಂಭ, 6 ಮತ್ತು 7ರಂದು ಮುದ್ದೇಬಿಹಾಳ ತಾಲೂಕು ಕುಂಟೋಜಿಯಲ್ಲಿ ಪುರ ಪ್ರವೇಶ ಮತ್ತು ಹಿರೇಮಠದ ನೂತನ ಶ್ರೀಗಳವರ ಗುರು ಪಟ್ಟಾಧಿಕಾರ ಸಮಾರಂಭದಲ್ಲಿ ಪಾಲ್ಗೊಳ್ಳುವರು.

ಮಾ. 8ರಂದು ಬೆಳಿಗ್ಗೆ 9.30ಕ್ಕೆ ವಿಜಯಪುರ ಜಿಲ್ಲೆ ಹೊರ್ತಿ ಕ್ಷೇತ್ರದಲ್ಲಿ ಇಷ್ಟಲಿಂಗ ಮಹಾಪೂಜಾ-ಸಮಾರಂಭ, ಸಂಜೆ 6ಕ್ಕೆ ದಕ್ಷಿಣ ಸೊಲ್ಲಾಪುರ ತಾಲೂಕ ಮಾಳಕವಠೆ ಗ್ರಾಮದಲ್ಲಿ ಉತ್ಸವ ಮತ್ತು ಮಹಾಶಿವರಾತ್ರಿ ಸಮಾರಂಭ, 9ರಂದು ಆಳಂದ ತಾಲೂಕ ಚಲಗೇರಾದಲ್ಲಿ ಧರ್ಮ ಜಾಗೃತಿ ಸಮಾರಂಭ, 10ರಂದು ಲಕ್ಷ್ಮೇಶ್ವರ ತಾಲೂಕು ಮುಕ್ತಿಮಂದಿರ ಕ್ಷೇತ್ರದಲ್ಲಿ ಶಿವರಾತ್ರಿ ಜಾತ್ರಾ ಮಹೋತ್ಸವ ಸಮಾರಂಭದ ಸಾನ್ನಿಧ್ಯ ವಹಿಸಿ 14ರಂದು ಜಗಳೂರು ತಾಲೂಕು ಕೊಡದಗುಡ್ಡ ಕ್ಷೇತ್ರದಲ್ಲಿ ಯಾತ್ರಿ ನಿವಾಸ ಉದ್ಘಾಟನೆ ಮಾಡುವರು.

ಮಾ. 20ರಿಂದ 26ರ ವರೆಗೆ ಬಾಳೆಹೊನ್ನೂರು ಶ್ರೀ ಜಗದ್ಗುರು ರಂಭಾಪುರಿ ಮಹಾಪೀಠದಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಹಾಗೂ ಕ್ಷೇತ್ರನಾಥ ಶ್ರೀ ವೀರಭದ್ರಸ್ವಾಮಿ ಮಹಾ ರಥೋತ್ಸವ ಅಂಗವಾಗಿ ವಿವಿಧ ಧರ್ಮ ಸಮಾರಂಭಗಳ ಸಾನ್ನಿಧ್ಯ ವಹಿಸುವರು.

29ರಂದು ಸಕಲೇಶಪುರ ತಾಲೂಕು ಎಸಳೂರಿನಲ್ಲಿ ಲಿಂ. ಶ್ರೀ ಚನ್ನಮಲ್ಲಿಕಾರ್ಜುನ ಶ್ರೀಗಳ ಪುಣ್ಯ ಸ್ಮರಣೋತ್ಸವ ಹಾಗೂ ಇಷ್ಟಲಿಂಗ ಮಹಾಪೂಜಾ, 30ರಂದು ಸೊರಬ ತಾಲೂಕು ದುಗ್ಲಿಯಲ್ಲಿ ಜಾತ್ರಾ ಮಹೋತ್ಸವ ಸಮಾರಂಭ ಹಾಗೂ 31ರಂದು ಸೊರಬ ತಾಲೂಕು ಶಾಂತಪುರಮಠದಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಸಮಾರಂಭದ ಸಾನ್ನಿಧ್ಯ ವಹಿಸುವರು.

ಆಸಕ್ತರು ಶ್ರೀ ರಂಭಾಪುರಿ ಜಗದ್ಗುರುಗಳವರ ಕಾರ್ಯಕ್ರಮಗಳ ಲಾಭವನ್ನು ಪಡೆಯಬೇಕಾಗಿ ಶ್ರೀ ಪೀಠದ ವಾರ್ತಾ ಸಂಯೋಜನಾಧಿಕಾರಿ ಸಿ.ಎಚ್.ಬಾಳನಗೌಡ್ರ ತಿಳಿಸಿದ್ದಾರೆ.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

3 days ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

3 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

3 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

3 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

3 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

4 days ago