ಶ್ರೀ ರಂಭಾಪುರಿ ಜಗದ್ಗುರುಗಳ ಏ. ತಿಂಗಳ ಪ್ರವಾಸದ ವಿವರ
ಎನ್.ಆರ್.ಪುರ : ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳವರ ಎಪ್ರಿಲ್ ತಿಂಗಳ ಪ್ರವಾಸ ಕಾರ್ಯಕ್ರಮ ಈ ಕೆಳಗಿನಂತಿದೆ.
ದಿನಾಂಕ 1ರಂದು ಬೈಲಹೊಂಗಲ ತಾಲೂಕು ವಣ್ಣೂರು ಗ್ರಾಮದಲ್ಲಿ ಶ್ರೀ ವೀರಭದ್ರೇಶ್ವರ ಜಾತ್ರಾ ಮಹೋತ್ಸವ ಸಮಾರಂಭ, 2ರಂದು ತೀರ್ಥಹಳ್ಳಿ ತಾಲೂಕು ಕವಲೇದುರ್ಗ ಮಠದಲ್ಲಿ ಇಷ್ಟಲಿಂಗ ಮಹಾಪೂಜಾ, 3ರಂದು ರಾಣೆಬೆನ್ನೂರು ತಾಲೂಕು ಲಿಂಗದಹಳ್ಳಿಯಲ್ಲಿ ಇಷ್ಟಲಿಂಗ ಮಹಾಪೂಜಾ, 4ರಂದು ಅಜ್ಜಂಪುರ ತಾಲೂಕು ಗೌರಾಪುರದಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಸಮಾರಂಭ, 5ರಂದು ಹೊನ್ನಾಳಿ ತಾಲೂಕು ಕುಳಗಟ್ಟಿಯಲ್ಲಿ ಇಷ್ಟಲಿಂಗ ಮಹಾಪೂಜಾ, 6ರಂದು ಕಡೂರು ತಾಲೂಕು ಹೊಗರೆಖಾನ್ ಗ್ರಾಮದಲ್ಲಿ ಶ್ರೀ ಸಿದ್ದೇಶ್ವರ ಕ್ಷೇತ್ರದಲ್ಲಿ ಮಂಡಲ ಪೂಜಾ ಸಮಾರಂಭ, 7ರಂದು ಚಿಕ್ಕಮಗಳೂರು ತಾಲೂಕು ಮುತ್ತಿನಪುರದ ಶ್ರೀ ವೀರಭದ್ರೇಶ್ವರ ಕ್ಷೇತ್ರದಲ್ಲಿ ಮಂಡಲ ಪೂಜಾ ಸಮಾರಂಭದ ಸಾನ್ನಿಧ್ಯ ವಹಿಸುವರು. ಹುಬ್ಬಳ್ಳಿ ತಾಲೂಕ ತಿರುಮಲಕೊಪ್ಪದ ಶ್ರೀ ಜಗದ್ಗುರು ರೇಣುಕ ಧರ್ಮ ನಿವಾಸದಲ್ಲಿ 8 ರಂದು ಧರ್ಮ ಜಾಗೃತಿ ಸಮಾರಂಭ 9 ರಂದು ಶ್ರೀ ಜಗದ್ಗುರು ಪಂಚಾಚಾರ್ಯ ಯುಗಮಾನೋತ್ಸವ ಹಾಗೂ ಶ್ರೀ ಜಗದ್ಗುರು ರೇಣುಕಾಚಾರ್ಯರ ರಥೋತ್ಸವ ಸಮಾರಂಭ, 10 ರಂದು ಹುಬ್ಬಳ್ಳಿಯಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಸಮಾರಂಭ, 11 ಹಾಗೂ 12 ರಂದು ಧಾರವಾಡ ತಾಲೂಕು ಅಮ್ಮಿನಭಾವಿಯಲ್ಲಿ ಧರ್ಮ ಸಮಾರಂಭದ ಸಾನ್ನಿಧ್ಯ ವಹಿಸುವರು ಹಾಗೂ ನೂತನ ರಥೋತ್ಸವಕ್ಕೆ ಚಾಲನೆ ನೀಡುವರು.
ಏ. 13ರಂದು ಹುಬ್ಬಳ್ಳಿ ತಾಲೂಕು ಹಳ್ಳಿಯಾಳದಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯರ ರಥೋತ್ಸವ ಹಾಗೂ ಧರ್ಮ ಸಮಾರಂಭ, 14 ರಂದು ಹಾವೇರಿ ತಾಲೂಕು ನೆಗಳೂರಿನಲ್ಲಿ ಕಳಸಾರೋಹಣ ಮತ್ತು ಸಾಮೂಹಿಕ ವಿವಾಹ ಸಮಾರಂಭ, 15 ರಂದು ಕಲಘಟಗಿ ತಾಲೂಕು ಸಂಗೇದೇವರಕೊಪ್ಪದಲ್ಲಿ ನೂತನ ದೇವಾಲಯ ಉದ್ಘಾಟನಾ ಸಮಾರಂಭ, 16 ರಂದು ಕಲಘಟಗಿ ತಾಲೂಕು ಬೇಗೂರು ಗ್ರಾಮದಲ್ಲಿ ಗ್ರಾಮದೇವಿ ಪ್ರತಿಷ್ಠಾಪನಾ ಸಮಾರಂಭ, 17 ರಂದು ಚಡಚಣ ತಾಲೂಕು ಏಳಗಿ ಪಿ.ಎಸ್. ಗ್ರಾಮದಲ್ಲಿ ಶ್ರೀ ವೀರಭದ್ರಸ್ವಾಮಿ ಮಹಾದ್ವಾರ ಉದ್ಘಾಟನಾ ಸಮಾರಂಭ, 18 ರಂದು ಅಫಜಲಪುರ ತಾಲೂಕು ಕರಜಗಿಯಲ್ಲಿ ಶ್ರೀ ಮಲ್ಲಿಕಾರ್ಜುನ ದೇವಸ್ಥಾನ ಕಳಸಾರೋಹಣ, 19ರಂದು ಚಿತ್ತಾಪುರ ತಾಲೂಕು ಶ್ರೀ ಸಿದ್ಧೇಶ್ವರ ಜ್ಞಾನಧಾಮದಲ್ಲಿ ಧರ್ಮ ಸಮಾರಂಭ 23ರಂದು ಬಾಳೆಹೊನ್ನೂರು ಶ್ರೀ ಜಗದ್ಗುರು ರಂಭಾಪುರಿ ಮಹಾಪೀಠದಲ್ಲಿ ಪೌರ್ಣಿಮೆಯ ನಿಮಿತ್ಯ ವಾಸ್ತವ್ಯ ಮಾಡಿ ಭಕ್ತಾದಿಗಳಿಗೆ ದರ್ಶನ ಆಶೀರ್ವಾದ ನೀಡುವರು.
ಏ. 29ರಂದು ಕುಂದಗೋಳ ತಾಲೂಕು ಪಶುಪತಿಹಾಳದಲ್ಲಿ ಧರ್ಮ ಜಾಗೃತಿ ಸಮಾರಂಭದ ಸಾನ್ನಿಧ್ಯ ವಹಿಸುವರು. ಆಸಕ್ತರು ಕಾರ್ಯಕ್ರಮದ ಲಾಭವನ್ನು ಪಡೆದುಕೊಳ್ಳುವಂತೆ ಶ್ರೀ ಪೀಠದ ವಾರ್ತಾ ಸಂಯೋಜನಾಧಿಕಾರಿ ಸಿ.ಎಚ್.ಬಾಳನಗೌಡ್ರ ತಿಳಿಸಿದ್ದಾರೆ.