ಶ್ರೀ ರಂಭಾಪುರಿ ಜಗದ್ಗುರುಗಳ ಏ. ತಿಂಗಳ ಪ್ರವಾಸದ ವಿವರ

ಎನ್.ಆರ್.ಪುರ : ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳವರ ಎಪ್ರಿಲ್ ತಿಂಗಳ ಪ್ರವಾಸ ಕಾರ್ಯಕ್ರಮ ಈ ಕೆಳಗಿನಂತಿದೆ.

ದಿನಾಂಕ 1ರಂದು ಬೈಲಹೊಂಗಲ ತಾಲೂಕು ವಣ್ಣೂರು ಗ್ರಾಮದಲ್ಲಿ ಶ್ರೀ ವೀರಭದ್ರೇಶ್ವರ ಜಾತ್ರಾ ಮಹೋತ್ಸವ ಸಮಾರಂಭ, 2ರಂದು ತೀರ್ಥಹಳ್ಳಿ ತಾಲೂಕು ಕವಲೇದುರ್ಗ ಮಠದಲ್ಲಿ ಇಷ್ಟಲಿಂಗ ಮಹಾಪೂಜಾ, 3ರಂದು ರಾಣೆಬೆನ್ನೂರು ತಾಲೂಕು ಲಿಂಗದಹಳ್ಳಿಯಲ್ಲಿ ಇಷ್ಟಲಿಂಗ ಮಹಾಪೂಜಾ, 4ರಂದು ಅಜ್ಜಂಪುರ ತಾಲೂಕು ಗೌರಾಪುರದಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಸಮಾರಂಭ, 5ರಂದು ಹೊನ್ನಾಳಿ ತಾಲೂಕು ಕುಳಗಟ್ಟಿಯಲ್ಲಿ ಇಷ್ಟಲಿಂಗ ಮಹಾಪೂಜಾ, 6ರಂದು ಕಡೂರು ತಾಲೂಕು ಹೊಗರೆಖಾನ್ ಗ್ರಾಮದಲ್ಲಿ ಶ್ರೀ ಸಿದ್ದೇಶ್ವರ ಕ್ಷೇತ್ರದಲ್ಲಿ ಮಂಡಲ ಪೂಜಾ ಸಮಾರಂಭ, 7ರಂದು ಚಿಕ್ಕಮಗಳೂರು ತಾಲೂಕು ಮುತ್ತಿನಪುರದ ಶ್ರೀ ವೀರಭದ್ರೇಶ್ವರ ಕ್ಷೇತ್ರದಲ್ಲಿ ಮಂಡಲ ಪೂಜಾ ಸಮಾರಂಭದ ಸಾನ್ನಿಧ್ಯ ವಹಿಸುವರು. ಹುಬ್ಬಳ್ಳಿ ತಾಲೂಕ ತಿರುಮಲಕೊಪ್ಪದ ಶ್ರೀ ಜಗದ್ಗುರು ರೇಣುಕ ಧರ್ಮ ನಿವಾಸದಲ್ಲಿ 8 ರಂದು ಧರ್ಮ ಜಾಗೃತಿ ಸಮಾರಂಭ 9 ರಂದು ಶ್ರೀ ಜಗದ್ಗುರು ಪಂಚಾಚಾರ್ಯ ಯುಗಮಾನೋತ್ಸವ ಹಾಗೂ ಶ್ರೀ ಜಗದ್ಗುರು ರೇಣುಕಾಚಾರ್ಯರ ರಥೋತ್ಸವ ಸಮಾರಂಭ, 10 ರಂದು ಹುಬ್ಬಳ್ಳಿಯಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಸಮಾರಂಭ, 11 ಹಾಗೂ 12 ರಂದು ಧಾರವಾಡ ತಾಲೂಕು ಅಮ್ಮಿನಭಾವಿಯಲ್ಲಿ ಧರ್ಮ ಸಮಾರಂಭದ ಸಾನ್ನಿಧ್ಯ ವಹಿಸುವರು ಹಾಗೂ ನೂತನ ರಥೋತ್ಸವಕ್ಕೆ ಚಾಲನೆ ನೀಡುವರು.

ಏ. 13ರಂದು ಹುಬ್ಬಳ್ಳಿ ತಾಲೂಕು ಹಳ್ಳಿಯಾಳದಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯರ ರಥೋತ್ಸವ ಹಾಗೂ ಧರ್ಮ ಸಮಾರಂಭ, 14 ರಂದು ಹಾವೇರಿ ತಾಲೂಕು ನೆಗಳೂರಿನಲ್ಲಿ ಕಳಸಾರೋಹಣ ಮತ್ತು ಸಾಮೂಹಿಕ ವಿವಾಹ ಸಮಾರಂಭ, 15 ರಂದು ಕಲಘಟಗಿ ತಾಲೂಕು ಸಂಗೇದೇವರಕೊಪ್ಪದಲ್ಲಿ ನೂತನ ದೇವಾಲಯ ಉದ್ಘಾಟನಾ ಸಮಾರಂಭ, 16 ರಂದು ಕಲಘಟಗಿ ತಾಲೂಕು ಬೇಗೂರು ಗ್ರಾಮದಲ್ಲಿ ಗ್ರಾಮದೇವಿ ಪ್ರತಿಷ್ಠಾಪನಾ ಸಮಾರಂಭ, 17 ರಂದು ಚಡಚಣ ತಾಲೂಕು ಏಳಗಿ ಪಿ.ಎಸ್. ಗ್ರಾಮದಲ್ಲಿ ಶ್ರೀ ವೀರಭದ್ರಸ್ವಾಮಿ ಮಹಾದ್ವಾರ ಉದ್ಘಾಟನಾ ಸಮಾರಂಭ, 18 ರಂದು ಅಫಜಲಪುರ ತಾಲೂಕು ಕರಜಗಿಯಲ್ಲಿ ಶ್ರೀ ಮಲ್ಲಿಕಾರ್ಜುನ ದೇವಸ್ಥಾನ ಕಳಸಾರೋಹಣ, 19ರಂದು ಚಿತ್ತಾಪುರ ತಾಲೂಕು ಶ್ರೀ ಸಿದ್ಧೇಶ್ವರ ಜ್ಞಾನಧಾಮದಲ್ಲಿ ಧರ್ಮ ಸಮಾರಂಭ 23ರಂದು ಬಾಳೆಹೊನ್ನೂರು ಶ್ರೀ ಜಗದ್ಗುರು ರಂಭಾಪುರಿ ಮಹಾಪೀಠದಲ್ಲಿ ಪೌರ್ಣಿಮೆಯ ನಿಮಿತ್ಯ ವಾಸ್ತವ್ಯ ಮಾಡಿ ಭಕ್ತಾದಿಗಳಿಗೆ ದರ್ಶನ ಆಶೀರ್ವಾದ ನೀಡುವರು.

ಏ. 29ರಂದು ಕುಂದಗೋಳ ತಾಲೂಕು ಪಶುಪತಿಹಾಳದಲ್ಲಿ ಧರ್ಮ ಜಾಗೃತಿ ಸಮಾರಂಭದ ಸಾನ್ನಿಧ್ಯ ವಹಿಸುವರು. ಆಸಕ್ತರು ಕಾರ್ಯಕ್ರಮದ ಲಾಭವನ್ನು ಪಡೆದುಕೊಳ್ಳುವಂತೆ ಶ್ರೀ ಪೀಠದ ವಾರ್ತಾ ಸಂಯೋಜನಾಧಿಕಾರಿ ಸಿ.ಎಚ್.ಬಾಳನಗೌಡ್ರ ತಿಳಿಸಿದ್ದಾರೆ.

Malnad Times

Share
Published by
Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

17 hours ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

21 hours ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

21 hours ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

24 hours ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

1 day ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

1 day ago