ಎನ್.ಆರ್.ಪುರ: ಬದುಕಿನ ಜಂಜಾಟದಲ್ಲಿ ಸದಾ ಮುಳುಗಿರುವವರಿಗೆ ಸಂಗೀತ ಸಂತೋಷ ಸಮಾಧಾನ ನೀಡುವ ಸಂಜೀವಿನಿಯಾಗಿದೆ ಎಂದು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.
ಅವರು ಇತ್ತಿಚೆಗೆ ಶ್ರೀ ರಂಭಾಪುರಿ ಪೀಠದಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಹಾಗೂ ಕ್ಷೇತ್ರನಾಥ ವೀರಭದ್ರಸ್ವಾಮಿ ಮಹಾರಥೋತ್ಸವದ ಅಂಗವಾಗಿ ಜರುಗಿದ ಸಂಗೀತ ಸೌರಭ ಹಾಗೂ ಸಂಗೀತ ದಿಗ್ಗಜರಿಗೆ ಸತ್ಕಾರ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡುತ್ತಿದ್ದರು.
ಗದಗಿನ ಪಂ.ಡಾ|| ರಾಜಗುರು ಗುರುಸ್ವಾಮಿ ಕಲಕೇರಿ ಹಾಗೂ ಧಾರವಾಡದ ಪಂ. ಡಾ|| ಎಮ್.ವೆಂಕಟೇಶ ಕುಮಾರ್ ಇವರಿಗೆ ವಿಶೇಷ ಸತ್ಕಾರ ಹಾಗೂ ಗೌರವ ಗುರುರಕ್ಷೆ ನೀಡಿದ ನಂತರ ಮಾತನಾಡಿದ ಅವರು ಪ್ರತಿ ವರುಷದ ಜಯಂತಿ ಜಾತ್ರಾ ಮಹೋತ್ಸವ ಸಂದರ್ಭದಲ್ಲಿ ಉಭಯ ಸಂಗೀತ ದಿಗ್ಗಜರು ಎರಡು ಗಂಟೆಗಳ ವಿಶೇಷ ಸಂಗೀತ ನಡೆಸಿಕೊಡುವುದಾದರೆ ಅದಕ್ಕೆ ಅವಕಾಶ ಕಲ್ಪಿಸುವುದಾಗಿ ತಿಳಿಸಿದರು.
ಇದೇ ಸಂದರ್ಭದಲ್ಲಿ ಪಂ. ಡಾ|| ಎಮ್.ವೆಂಕಟೇಶ ಕುಮಾರ್ ಅವರು ಬಸಂತ ರಾಗ, ದೃತ ತಾಳದಲ್ಲಿ ಪಶುಪತೇ ಗಿರಿಜಾಪತಿ, ಹಾನಗಲ್ ಕುಮಾರಸ್ವಾಮಿಗಳಿಂದ ವಿರಚಿತ ಸುಶಾಂತ ಗುರುವರೇಣ್ಯ ರೇಣುಕಾರ್ಯಭೋ ಗೀತೆಯನ್ನು ಭೀಮಪಲಾಸ ರಾಗ ಜಪ್ ತಾಳದಲ್ಲಿ ನಂತರ ಗದಗಿನ ಕವಿ ಪುಟ್ಟರಾಜ ಗವಾಯಿಗಳಿಂದ ವಿರಚಿತ ವೀರಶೈವದ ಜಗದ್ಗುರು ಪಂಚಾಚಾರ್ಯರ ನಮಿಸುವೆನು ಹಾಡನ್ನು ರಾಗೇಶ್ರೀ ರಾಗ ಕೇರವ ತಾಳದಲ್ಲಿ ಅಮೋಘವಾಗಿ ಪ್ರಸ್ತುತಪಡಿಸಿ ಜನಮನ ಸೂರೆಗೊಂಡರು. ನಂತರ ಪಂ. ಡಾ|| ರಾಜಗುರು ಗುರುಸ್ವಾಮಿ ಕಲಕೇರಿ ಅವರು ಮಲತ್ರಯಗಳನು ತೊಲಗಿಸುವಂಥ ಜಾಣ್ಮೆಯುಳ್ಳವನೇ ವೀರಶೈವನು ಅಲ್ಲಮಪ್ರಭುಗಳ ವಚನವನ್ನು ಜೋಗ ರಾಗ ತೀನತಾಳದಲ್ಲಿ ಹಾಗೂ ತಮ್ಮ ಸ್ವರಚಿತ ಕವನ ಅಂದಿಂದು ಕಂದದಾ ಮುಂದೆಂದು ನಂದದಾ ಪಂಚ ಪೀಠಾಧೀಶರ ಬೆಳಕು ಗೀತೆಯನ್ನು ಚಾಂದ ರಾಗದಲ್ಲಿ ದಾದ್ರಾ ತಾಳದಲ್ಲಿ ಪ್ರಸ್ತುತಪಡಿಸಿ ಶ್ರೋತೃಗಳ ಮನಸ್ಸಿಗೆ ಮುದ ನೀಡಿದರು. ಗದಗಿನ ಶರಣಯ್ಯನವರು ತಬಲಾ, ಪಂ.ಬಸವರಾಜ ಹಿರೇಮಠ ಹರ್ಮೋನಿಯಂ ಸಾಥ್ ನೀಡಿದರು.
ಎಡೆಯೂರು ರೇಣುಕ ಶಿವಾಚಾರ್ಯರು, ಮುಕ್ತಿಮಂದಿರದ ವಿಮಲ ರೇಣುಕ ಮುಕ್ತಿಮುನಿ ಶಿವಾಚಾರ್ಯರು ಸೇರಿದಂತೆ ವಿವಿಧ ಮಠಾಧೀಶರು ಸಮಾರಂಭದಲ್ಲಿ ಉಪಸ್ಥಿತರಿದ್ದರು.
ಹಂಪಸಾಗರದ ಶಿವಲಿಂಗ ರುದ್ರಮುನಿ ಶಿವಾಚಾರ್ಯರು ಪ್ರಾಸ್ತಾವಿಕ ಮಾತನಾಡಿದರು. ಗದಗಿನ ಗಾನಭೂಷಣ ವೀರೇಶ ಕಿತ್ತೂರ ಪ್ರಾರ್ಥನೆ ಹಾಡಿದರು. ಡಾ|| ಗುರುಪಾದಯ್ಯ ಸಾಲಿಮಠ ನಿರೂಪಿಸಿದರು.
ಎನ್.ಆರ್.ಪುರ : ಬಾಳೆಹೊನ್ನೂರು ಶ್ರೀಮದ್ ರಂಭಾಪುರಿ ಜಗದ್ಗುರು ಪ್ರಸನ್ನ ರೇಣುಕ ಡಾ.ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರ ಮೇ ತಿಂಗಳ ಪ್ರವಾಸ…
ತೀರ್ಥಹಳ್ಳಿ : ಏ. 28 ಭಾನುವಾರ ಗುರುವಾರ ನಡೆದ ತೀರ್ಥಹಳ್ಳಿ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.
ಹೊಸನಗರ: ಭಾರತ ದೇಶದ ಪ್ರಜೆಗಳಾದ ನಾವು ಕಡ್ಡಾಯವಾಗಿ ಮತದಾನದಲ್ಲಿ ಭಾಗವಹಿಸಿ ಮತದಾನ ಮಾಡಬೇಕು. ಮತದಾನ ಮಾಡುವುದು ಪ್ರತಿಯೊಬ್ಬ ದೇಶದ ಪ್ರಜೆಯ…
ಹೊಸನಗರ: ತಾಲ್ಲೂಕಿನ ನಗರ ಹೋಬಳಿಯ ಯಡೂರು ಗ್ರಾಪಂ ವ್ಯಾಪ್ತಿಯ ಕವರಿಯ ಮಾಗಲು ಗ್ರಾಮ ಮೂಲಭೂತ ಸೌಲಭ್ಯದಿಂಸಸಹ ದ ವಂಚಿತವಾಗಿದೆ ಎಂದು…
ಚಿಕ್ಕಮಗಳೂರು: ಜಿಲ್ಲೆಯಲ್ಲಿ ಶುಕ್ರವಾರ ನಡೆದ ಲೋಕಸಭಾ ಚುನಾವಣೆಯಲ್ಲಿ ಶೇ.75.02 ರಷ್ಟು ಮತದಾನ ನಡೆದಿದೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ಬಾರಿ…
ಶಿವಮೊಗ್ಗ : ಏ.30ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಶಿವಮೊಗ್ಗ ಆಗಮಿಸಲಿದ್ದು ರಾಷ್ಟ್ರೀಯತೆಯ ಬಗ್ಗೆ ಕಾರ್ಯಕರ್ತರಲ್ಲಿ ಹುಮ್ಮಸ್ಸು…