ಚಿಕ್ಕಮಗಳೂರು: ಮೊದಲ ಬಾರಿಗೆ ಜಿಲ್ಲೆಗೆ ಆಗಮಿಸಿದ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಪರ ಕಾರ್ಯಕರ್ತರ ಸಭೆ ನಡೆಯುವ ಸಮಯದಲ್ಲಿ ಪಕ್ಷದ ಮುಖಂಡರ ನಡುವಿನ ಮುಸುಕಿನ ಗುದ್ದಾಟ ಸಾರ್ವಜನಿಕವಾಗಿ ಬಟಾ ಬಯಲಾಗಿದೆ.
ಮಾಜಿ ಎಂಎಲ್ಸಿ ಗಾಯತ್ರಿ ಶಾಂತೇಗೌಡ ವೇದಿಕೆಯಲ್ಲಿ ಕೂರದೆ ಕಾರ್ಯಕರ್ತರ ಸಾಲಿನಲ್ಲಿ ಕುಳಿತುಕೊಂಡಿದ್ದರು. ಪಕ್ಷದ ಯಾವುದೇ ಕಾರ್ಯಕ್ರಮಕ್ಕೆ ತಮ್ಮನ್ನು ನಿರ್ಲಕ್ಷ್ಯಿಸಲಾಗುತ್ತಿದೆ ಇಂದು ಬೆಳಿಗ್ಗೆ ನಡೆದ ಪತ್ರಿಕಾಗೋಷ್ಠಿಗೆ ಸಹಾ ಕರೆದಿಲ್ಲ ಎಂದು ಬೇಸರಗೊಂಡು ಮುನಿಸಿಕೊಂಡು ವೇದಿಕೆ ಹತ್ತದೆ ಕುಳಿತಿದ್ದರು. ಈ ವೇಳೆ ಶಾಸಕ ಎಚ್.ಡಿ ತಮ್ಮಯ್ಯ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಂಶುಮಂತ್ ಎಷ್ಟೇ ಪ್ರಯತ್ನ ಮಾಡಿದರೂ ಗಾಯತ್ರಿ ಶಾಂತೇಗೌಡ ವೇದಿಕೆಗೆ ಬರಲಿಲ್ಲ ಈ ವೇಳೆ ಖುದ್ದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ ಜಾರ್ಜ್ ತಾವೇ ಅವರ ಬಳಿ ಹೋಗಿ ಕರೆದುಕೊಂಡು ಬರಬೇಕಾಯಿತು. ಆದರೆ ಗಾಯತ್ರಿ ಮುನಿಸಿಗೆ ಬೇರೆಯದ್ದೆ ಕಾರಣ ಇದೆ ಎಂದು ಹೇಳಲಾಗುತ್ತಿದೆ.
ಲೋಕಸಭೆ ಚುನಾವಣೆ ವೇಳೆ ಈ ರೀತಿಯ ಬೆಳವಣಿಗೆ ಪಕ್ಷಕ್ಕೆ ಮುಜುಗರ ಉಂಟು ಮಾಡಿದ್ದು ಒಂದೆಡೆಯಾದರೆ ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ಮಾತ್ರ ಸ್ಪಷ್ಟವಾಗಿ ಗೋಚರಿಸುತ್ತಿದೆ.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…