ಸಿಡಿಲು ಬಡಿದು ರೈತ ಸಾವು !

ಸಿಡಿಲು ಬಡಿದು ರೈತ ಸಾವು !

ಎನ್‌.ಆರ್. ಪುರ : ತಾಲೂಕಿನಲ್ಲಿ ಇಂದು ಭಾರೀ ಪ್ರಮಾಣದಲ್ಲಿ ಮಳೆ ಸುರಿದಿದೆ. ಮಳೆ ಜೊತೆಗೆ ಗುಡುಗು ಸಿಡಿಲು ಕೂಡ ಸಂಭವಿಸಿದೆ.

ತೋಟಕ್ಕೆ ಹೋಗಿದ್ದ ರೈತನಿಗೆ ಸಿಡಿಲು ಬಡಿದು ಮೃತಪಟ್ಟಿದ್ದು ಮೃತನನ್ನು ಅರಳಿಕೊಪ್ಪದ ಶಂಕರ್ (48) ಎಂದು ಗುರುತಿಸಲಾಗಿದೆ.

ಸಂಜೆಯಿಂದ ಗುಡುಗು ಮಿಂಚು ಸಹಿತ ಧಾರಾಕಾರವಾಗಿ ಎನ್ ಆರ್ ಪುರ ತಾಲೂಕಿನಲ್ಲಿ ಮಳೆ ಸುರಿದಿದೆ. ಶೃಂಗೇರಿ, ಎನ್‌.ಆರ್ ಪುರ, ಬಾಳೆಹೊನ್ನೂರು ಭಾಗದಲ್ಲೂ ನಿನ್ನೆ ಮಳೆಯಾಗಿದ್ದರೆ, ಕೊಪ್ಪದಲ್ಲಿ ಇಂದು ಸಾಧಾರಣ ಮಳೆಯಾಗಿದೆ. ಇತ್ತ ಬಯಲು ಭಾಗದ ತರೀಕೆರೆ ಪಟ್ಟಣದಲ್ಲಿ ಇಂದು ಉತ್ತಮ ಮಳೆಯಾಗಿದೆ. ರಸ್ತೆಗಳ ಮೇಲೆ ನೀರು ಹರಿದಿದೆ.

ರೈತಾಪಿ ವರ್ಗದಲ್ಲಿ ಸಂತಸ:

ಚಿಕ್ಕಮಗಳೂರು ನಗರ ಸೇರಿದಂತೆ ಕೆಲವಡೆ ಸಾಧಾರಣ ಮಳೆಯಾಗಿದ್ದರೆ, ತರೀಕೆರೆ, ಆಲ್ದೂರು ಇತರೆಡೆಗಳಲ್ಲಿ ಉತ್ತಮ ಪ್ರಮಾಣದ ಮಳೆ ಸುರಿದಿದೆ. ರೈತರ ಭರವಸೆಯ ಮಳೆಯಾದ ರೇವತಿ ಕೊನೆಗೂ ಕರುಣೆ ತೋರಿದ್ದು, ಬಿಸಿಲ ಧಗೆಗೆ ಹೈರಾಣಾಗಿದ್ದ ಜನತೆಗೆ ಸಮಾಧಾನ ಉಂಟು ಮಾಡಿದೆ.

ಚಿಕ್ಕಮಗಳೂರು ನಗರದಲ್ಲಿ ಮಧ್ಯಾಹ್ನ ಜೋರಾಗಿ ಆರಂಭವಾದ ಮಳೆ ಭರವಸೆ ಮೂಡಿಸಿತ್ತಾದರೂ ಕೆಲವೇ ಕ್ಷಣದಲ್ಲಿ ಬಿರುಸು ಕಳೆದುಕೊಂಡಿತು. ಆದರೆ ಸಂಜೆ ವರೆಗೂ ತುಂತುರು ಹನಿ ಹಾಕುತ್ತಾ ಇಡೀ ವಾತಾವರಣವನ್ನು ತಣ್ಣಗಾಗಿಸಿತು. ಹಲವಾರು ತಿಂಗಳುಗಳಿಂದ ಬಿಸಿಲ ಬೇಗೆಗೆ ಸೊರಗಿದ್ದ ಜನರು ಅಂತೂ ವರುಣ ಕಣ್ಣು ತೆರೆದ ಎಂದು ನಿಟ್ಟುಸಿರು ಬಿಟ್ಟರು.

ಚಿಕ್ಕಮಗಳೂರಿನ ಅರೆಮಲೆನಾಡು ಭಾಗ ಕಳಸಾಪುರ ಸೇರಿದಂತೆ ಮಲ್ಲೇನಹಳ್ಳಿ, ಖಾಂಡ್ಯ ಹಾಗೂ ಮುತ್ತೋಡಿ ಅರಣ್ಯ ಭಾಗದಲ್ಲೂ ಮಳೆಯಾಗಿರುವುದು ಸಂತಸ ಮೂಡಿಸಿದೆ.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

4 days ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

4 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

4 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

4 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

4 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

4 days ago