Categories: Ajjampura

BJP ಟಿಕೆಟ್ ನನಗೆ ಬೇಕೆಂದು BSNL ಟವರ್ ಏರಿದ್ದಾನೆ ಇಲ್ಲೊಬ್ಬ ಭೂಪ !

ಅಜ್ಜಂಪುರ : ವಿಧಾನಸಭೆ ಚುನಾವಣೆ ರಂಗೇರಿದೆ. ಭರಪೂರ ನಾಮಪತ್ರಗಳು ಸಲ್ಲಿಕೆಯಾಗುತ್ತಿವೆ. ಮತ್ತೊಂದು ಕಡೆ ಟಿಕೆಟ್ ವಂಚಿತರು ಬಂಡಾಯದ ಬಾವುಟ ಹಾರಿಸುತ್ತಿದ್ದರೇ, ಇಲ್ಲೊಬ್ಬ ಭೂಪ ಬಿಜೆಪಿ ಟಿಕೆಟ್ ನನಗೆ ಬೇಕೆಂದು ಬಿಎಸ್‌ಎನ್‌ಎಲ್ ಮೊಬೈಲ್ ಟವರ್ ಏರಿ ಹಠ ಹಿಡಿದಿರುವ ಘಟನೆ ಜಿಲ್ಲೆಯ ಅಜ್ಜಂಪುರ ತಾಲೂಕಿನಲ್ಲಿ ನಡೆದಿದೆ.

ತಾಲೂಕಿನ ಶಿವನಿ ಆರ್.ಎಸ್.ಗ್ರಾಮದಲ್ಲಿ ಘಟನೆ ನಡೆದಿದ್ದು, ಶಿವನಿ ಆರ್.ಎಸ್. ಗ್ರಾಮದ ರಂಗಪ್ಪ ಎಂದು ಗುರುತಿಸಲಾಗಿದೆ. ಅಜ್ಜಂಪುರ ತರೀಕೆರೆ ವಿಧಾನಸಭಾ ವ್ಯಾಪ್ತಿಗೆ ಒಳಪಟ್ಟಿದ್ದು, ಬಿಜೆಪಿಯಿಂದ ಈಗಾಗಲೇ ಡಿ.ಎಸ್.ಸುರೇಶ್ ಕಣಕ್ಕಿಳಿದಿದ್ದಾರೆ. ಈ ನಡುವೆ ರಂಗಪ್ಪ, ನನಗೆ ಬಿಜೆಪಿ ಟಿಕೆಟ್ ಬೇಕೇ ಬೇಕು ಅಂತ ಪಟ್ಟು ಹಿಡಿದು ಮೊಬೈಲ್ ಟವರ್ ಏರಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಆಗಮಿಸಿ ರಂಗಪ್ಪನನ್ನು ಮನವೊಲಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ.

ರಂಗಪ್ಪ ಕಳೆದ 15 ವರ್ಷಗಳಿಂದ ಬಿಜೆಪಿ ಕಾರ್ಯಕರ್ತನಾಗಿದ್ದು ಟಿಕೆಟ್‌ಗಾಗಿ ಹಠ ಹಿಡಿದು ಟವರ್ ಏರಿದ್ದು ಪೊಲೀಸರು ಮನವೊಲಿಸಿ ಕೆಳಗಿಳಿಸಿದ್ದಾರೆ.

Malnad Times

Recent Posts

ಚುನಾವಣಾ ಬಹಿಷ್ಕಾರದಿಂದ ಹಿಂದೆ ಸರಿದ ಈಚಲುಕೊಪ್ಪ, ಕಾಪೇರಮನೆ ಗ್ರಾಮಸ್ಥರು

ಹೊಸನಗರ: ತಾಲ್ಲೂಕಿನ ಪುರಪ್ಪೆಮನೆ ಗ್ರಾಪಂ ವ್ಯಾಪ್ತಿಯ ವ್ಯಾಪ್ತಿ ಹಲುಸಾಲೆ - ಮಳವಳ್ಳಿ, ಕಾಪೇರಮನೆ ಗ್ರಾಮದ ಗ್ರಾಮಸ್ಥರು ಸಾಗರ-ಹೊಸನಗರದ ಮಧ್ಯ ಭಾಗದಲ್ಲಿದ್ದು…

1 hour ago

ಆನೆ ದಾಳಿಯಿಂದ ಮೃತಪಟ್ಟ ರೈತನ ಕುಟುಂಬಕ್ಕೆ ತಕ್ಷಣ ₹ 15 ಲಕ್ಷ ಪರಿಹಾರ ನೀಡಿ ; ಹರತಾಳು ಹಾಲಪ್ಪ ಆಗ್ರಹ

ಹೊಸನಗರ: ಶುಕ್ರವಾರ ಬೆಳಿಗ್ಗೆ ದರಗೆಲೆ ತರಲು ಕಾಡಿಗೆ ತೆರಳಿದ ರೈತ ತಿಮ್ಮಪ್ಪ ಎಂಬ ವ್ಯಕ್ತಿಯ ಮೇಲೆ ಆನೆ ದಾಳಿ ಮಾಡಿದ್ದು…

3 hours ago

ಶಿವಮೊಗ್ಗ ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್‌ಕುಮಾರ್ ಪರ ರೋಡ್ ಷೋ | ಬಡವರ ಕಲ್ಯಾಣಕ್ಕೆ ಬಿಜೆಪಿ ಕೊಡುಗೆ ಶೂನ್ಯ ; ಪ್ರದೀಪ್ ಈಶ್ವರ್

ಶಿವಮೊಗ್ಗ: ರಾಜ್ಯದ ಬಡವರ ಕಲ್ಯಾಣಕ್ಕೆ ಬಿಜೆಪಿ ಕೊಡುಗೆ ಶೂನ್ಯ. ಆದ್ದರಿಂದ ಕ್ಷೇತ್ರದ ಹಿತ ಕಾಯಲು ಗೀತಕ್ಕಗೆ ಮತ ನೀಡಿ, ಆಶೀರ್ವದಿಸಿ…

3 hours ago

ಬಂಗಾರಪ್ಪರ ಋಣ ತೀರಿಸಲು ಗೀತಾಗೆ ಮತ ನೀಡಿ ; ಮಧು ಬಂಗಾರಪ್ಪ

ಸೊರಬ : ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರು ಬಡವರ ಪರವಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದರು. ಅವರ ಋಣವನ್ನು…

6 hours ago

ನೈರುತ್ಯ ಶಿಕ್ಷಕರ, ನೈರುತ್ಯ ಪದವೀಧರರ ಕ್ಷೇತ್ರಗಳಿಗೆ ಜೂ. 03 ರಂದು ಚುನಾವಣೆ | ಮತದಾರರ ಪಟ್ಟಿಗೆ ಹೆಸರು ನೊಂದಾಯಿಸಲು ಮೇ 6 ಕಡೆಯ ದಿನ

ಚಿಕ್ಕಮಗಳೂರು : ಕರ್ನಾಟಕ ವಿಧಾನ ಪರಿಷತ್ತಿನ ನೈರುತ್ಯ ಪದವೀಧರರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರಗಳಿಗೆ ಜೂನ್ 03 ರಂದು…

18 hours ago

ಆನೆ ದಾಳಿಯಿಂದ ಮೃತನಾದ ರೈತನ ಕುಟುಂಬಕ್ಕೆ 24 ಗಂಟೆಯೊಳಗೆ ಪರಿಹಾರ ನೀಡದಿದ್ದಲ್ಲಿ ಸರ್ಕಾರಕ್ಕೆ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಹಾಲಪ್ಪ

ರಿಪ್ಪನ್‌ಪೇಟೆ: ಇಂದು ಬೆಳಗ್ಗೆ ದರಗೆಲೆ ತರಲು ಕಾಡಿಗೆ ತೆರಳಿದ್ದ ರೈತ ತಿಮ್ಮಪ್ಬ ಎಂಬ ರೈತ ಆನೆ ದಾಳಿಗೆ ಬಲಿಯಾಗಿದ್ದು ಮೃತ…

19 hours ago