Chikkamagaluru | ಇಂದು ಜಿಲ್ಲಾ ಜಾನಪದ ಸಮ್ಮೇಳನ

ಚಿಕ್ಕಮಗಳೂರು: ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾ ಘಟಕದಿಂದ ಶುಕ್ರವಾರ ನಡೆಯಲಿರುವ ನಾಲ್ಕನೇ ಜಿಲ್ಲಾ ಜಾನಪದ ಸಮ್ಮೇಳನಕ್ಕೆ ಭರದ ಸಿದ್ಧತೆ ಸಾಗಿದ್ದು, ನಗರದ ಕುವೆಂಪು ಕಲಾಮಂದಿರ ಸರ್ವಾಲಂಕೃತಗೊಂಡು ಸಜ್ಜಾಗಿ ನಿಂತಿದೆ.

ಬಸ್ ನಿಲ್ದಾಣದ ಮುಂಭಾಗದಿಂದಲೇ ಸಮ್ಮೇಳನದ ಪೋಸ್ಟರ್‌ಗಳು, ಬ್ಯಾನರ್‌ಗಳು ರಾರಾಜಿಸುತ್ತಿದ್ದು, ಕಲಾಮಂದಿರಕ್ಕೆ ಸಾಗುವ ಹಾದಿ ತಳಿರು ತೋರಣಗಳಿಂದ ಸಿಂಗಾರಗೊಂಡು ಕಂಗೊಳಿಸುತ್ತಿದೆ.

ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ನಿಲ್ದಾಣದ ಪಕ್ಕ ಕಲಾಮಂದಿರಕ್ಕೆ ಸಾಗುವ ದಾರಿಯಲ್ಲಿ ಹಿರಿಯ ಜಾನಪದ ತಜ್ಞ ಡಾ. ಎಚ್.ಎಲ್.ನಾಗೇಗೌಡ ಮಹಾದ್ವಾರವನ್ನು ನಿರ್ಮಿಸಲಾಗಿದೆ. ಸಮ್ಮೇಳನ ನಡೆಯಲಿ ರುವ ಕಲಾಮಂದಿರದಲ್ಲಿ ಜಾನಪದ ಕೋಗಿಲೆ ಕೆ.ಆರ್.ಲಿಂಗಪ್ಪ ವೇದಿಕೆ ನಿರ್ಮಾಣ ಮಾಡಲಾಗಿದೆ.

ಮಾಧ್ಯಮಗಳಿಗೆ ಮಾಹಿತಿ ನೀಡಿದ ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾಧ್ಯಕ್ಷ ಜಿ.ಬಿ.ಸುರೇಶ್ ನಾಡಿನ ಸಮ್ಮೇಳನಕ್ಕೆ ಜಿಲ್ಲೆಯ ಎಲ್ಲಾ ತಾಲೂಕುಗಳಿಂದ 1,500ಕ್ಕೂ ಹೆಚ್ಚು ಜನ ಆಗಮಿಸುವ ನಿರೀಕ್ಷೆ ಇದ್ದು, ಅತಿಥಿಗಳಿಗೆ ಜಾನಪದ ಸೊಗಡಿನ ಊಟದ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಶುಕ್ರವಾರ ಬೆಳಗ್ಗೆ ನಗರದ ತಾಲೂಕು ಕಚೇರಿ ಆವರಣದಿಂದ ಕಲಾಮಂದಿರದವರೆಗೆ ನಡೆಯಲಿರುವ ಸಮ್ಮೇಳನಾಧ್ಯಕ್ಷರ ಮೆರವಣಿಗೆಗೆ ಬೆಳಿಗ್ಗೆ 9 ಗಂಟೆಗೆ ಶಾಸಕ ಎಚ್.ಡಿ.ತಮ್ಮಯ್ಯ ಚಾಲನೆ ನೀಡಲಿದ್ದಾರೆ ಎಂದರು.

10:30ಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಅವರು ಕಲಾಮಂದಿರದಲ್ಲಿ ನಾಲ್ಕನೇ ಜಿಲ್ಲಾ ಜಾನಪದ ಸಮ್ಮೇಳನವನ್ನು ಉದ್ಘಾಟಿಸಲಿದ್ದು, ಹಿರಿಯ ಭಜನಾ ಕಲಾವಿದ ಸಮ್ಮೇಳನ ಅಧ್ಯಕ್ಷ ಬೆಳವಾಡಿ ಪರಮೇಶ್ವ ರಪ್ಪ ಸರ್ವಾಧ್ಯಕ್ಷತೆ ವಹಿಸಲಿದ್ದಾರೆ ಎಂದು ಹೇಳಿದರು.


ಬೆಳಗಿನಿಂದ ಸಂಜೆವರೆಗೆ ವಿವಿಧ ಜಾನಪದ ಗೋಷ್ಠಿಗಳು, ಜಾನಪದ ವಸ್ತು ಪ್ರದರ್ಶನ, ಜಾನಪದ ಗಾಯನ, ನೃತ್ಯ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ ಎಂದು ಹೇಳಿದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

3 days ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

3 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

3 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

4 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

4 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

4 days ago