ಚಿಕ್ಕಮಗಳೂರು: ದತ್ತಜಯಂತಿ ಹಿನ್ನೆಲೆಯಲ್ಲಿ ಶ್ರೀಗುರುದತ್ತಾತ್ರೇಯ ಬಾಬಾಬುಡನ್ ದರ್ಗಾಕ್ಕೆ ಸಂಬಂಧಿಸಿದಂತೆ ಶ್ರೀರಾಮಸೇನೆ ರಾಜ್ಯಾಧ್ಯಕ್ಷ ಗಂಗಾಧರ್ ಕುಲಕರ್ಣಿ, ಪ್ರಚೋದನಕಾರಿ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ (Social media) ಹರಿಬಿಟ್ಟಿದ್ದು, ಈ ಹಿನ್ನೆಲೆಯಲ್ಲಿ ಶ್ರೀರಾಮಸೇನೆ ರಾಜ್ಯಾಧ್ಯಕ್ಷ ಹಾಗೂ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ (Pramod Muthalik) ಮುತಾಲಿಕ್ ಅವರಿಗೆ ಡಿ.23ರಿಂದ ಜ.5ರ ವರೆಗೆ ಜಿಲ್ಲಾ ಪ್ರವೇಶ ನಿರ್ಬಂಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಶ್ರೀರಾಮಸೇನೆಯ ರಾಜ್ಯಾಧ್ಯಕ್ಷ ಗಂಗಾಧರ ಮಹಾಬಲರಾವ್ ಕುಲಕರ್ಣಿ ಅವರು ಇತ್ತೀಚೆಗೆ ಬಾಬಾಬುಡನ್ ದರ್ಗಾಕ್ಕೆ ಸಂಬಂಧಿಸಿದಂತೆ ತಮ್ಮ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದು, ಈ ವಿಡಿಯೋದಲ್ಲಿ ಬಾಬಾ ಬುಡನ್ಗಿರಿ ದರ್ಗಾ ಇರುವುದು ದತ್ತಪೀಠದಲ್ಲಿ ಅಲ್ಲ, ಅದು ಚಿಕ್ಕಮಗಳೂರು ತಾಲೂಕಿನ ಜಾಗರ ಹೋಬಳಿ ನಾಗೇನಹಳ್ಳಿ ಗ್ರಾಮದ ಸ.ನಂ.57ರಲ್ಲಿದೆ. ಇಲ್ಲಿ ಬಾಬಾಬುಡನ್ ಎಂಬ ದತ್ತತ್ರೇಯ ಸ್ವಾಮಿಯ ಭಕ್ತ ಹಿಂದೆ ಇದ್ದ. ಮುಸ್ಲಿಂ ಸಮುದಾಯದ ಜನರು ದತ್ತಪೀಠದಲ್ಲಿ ಉರೂಸ್ ಮಾಡುತ್ತಾರೆ. ನಾವು ನಾಗೇನಹಳ್ಳಿ ಯಲ್ಲಿ ದತ್ತಜಯಂತಿ ಮಾಡಿದರೇ ತಪ್ಪೇನು?, ಡಿ.26ಕ್ಕೆ ನಾಗೇನಹಳ್ಳಿಯಲ್ಲಿ ದತ್ತಜಯಂತಿಯನ್ನು ಅದ್ದೂರಿಯಾಗಿ ಆಚರಿಸಲಾಗುವುದು. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬರಬೇಕೆಂದು ಈ ವಿಡಿಯೋದಲ್ಲಿ ಹೇಳಿಕೆ ನೀಡಿದ್ದರು.
ಈ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ಜಿಲ್ಲಾಡಳಿತಕ್ಕೆ ವರದಿ ಸಲ್ಲಿಸಿದ್ದು, ದತ್ತಜಯಂತಿ ಸಂದರ್ಭ ಶ್ರೀರಾಮಸೇನೆ ರಾಜ್ಯಾಧ್ಯಕ್ಷ ಗಂಗಾಧರ ಕುಲಕರ್ಣಿ ಅವರು ಪ್ರಚೋದನಕಾರಿ ಹೇಳಿಕೆ ನೀಡಿರುವುದರಿಂದ ಜಿಲ್ಲೆಯ ಕೋಮು ಸೂಕ್ಷ್ಮ ಪ್ರದೇಶಗಳಲ್ಲಿ ಎರಡು ಸಮುದಾಯದವರ ಶಾಂತಿಭಂಗ ಉಂಟಾಗುವ ಸಾಧ್ಯತೆಯನ್ನು ವರದಿಯಲ್ಲಿ ಉಲ್ಲೇಖಿಸಿದ್ದರು.
ಈ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ಸಾರ್ವಜನಿಕರ ಶಾಂತಿಭಂಗ ಆಗುವುದನ್ನು ತಡೆ ಯುವ ಉದ್ದೇಶದಿಂದ ಗಂಗಾಧರ ಕುಲಕರ್ಣಿ ಹಾಗೂ ಪ್ರಮೋದ್ ಮುತಾಲಿಕ್ ಅವರಿಗೆ ಡಿ.23ರಿಂದ ಜ.5ರ ವರೆಗೆ ಚಿಕ್ಕಮಗಳೂರು ಜಿಲ್ಲಾ ಪ್ರವೇಶ ನಿರ್ಬಂಧಿಸಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶಿಸಿದ್ದಾರೆ.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…