Chikkamagaluru | ದತ್ತ ಜಯಂತಿ ಹಿನ್ನೆಲೆ ಪ್ರಮುಖ ರಸ್ತೆಗಳಲ್ಲಿ ವಾಹನಗಳ ನಿಲುಗಡೆ, ಸಂಚಾರ ನಿಷೇಧ – ಭಾರಿ ವಾಹನಗಳ ಸಂಚಾರಕ್ಕೆ ಬದಲಿಗೆ ಮಾರ್ಗ ; ಮೀನಾ ನಾಗರಾಜ್

ಚಿಕ್ಕಮಗಳೂರು: ದತ್ತ ಮಾಲಾ ಅಭಿಯಾನ 2023 ನವೆಂಬರ್ 5 ರಂದು ಚಿಕ್ಕಮಗಳೂರು ನಗರದಲ್ಲಿ ಶೋಭಾಯಾತ್ರೆ ಮೆರವಣಿಗೆ ಇರುವುದರಿಂದ ಮೆರವಣಿಗೆಯಲ್ಲಿ ಅಧಿಕ ಸಂಖ್ಯೆಯಲ್ಲಿ ದತ್ತ ಮಾಲಾಧಾರಿಗಳು/ದತ್ತ ಭಕ್ತರು ಭಾಗವಹಿಸುತ್ತಿದ್ದು, ಶೋಭಾಯಾತ್ರೆ ಮೆರವಣಿಗೆ ಚಿಕ್ಕಮಗಳೂರು ನಗರದ ಬಸವನಹಳ್ಳಿ ಮುಖ್ಯ ರಸ್ತೆಯ ಶಂಕರಮಠದಿಂದ ಪ್ರಾರಂಭವಾಗಿ ಬಸವನಹಳ್ಳಿ ಮುಖ್ಯ ರಸ್ತೆ, ಹನುಮಂತಪ್ಪ ವೃತ್ತ, ಎಂ.ಜಿ. ರಸ್ತೆ ಮುಖಾಂತರ ಅಜಾದ್ಪಾರ್ಕ್ ವೃತ್ತದ ವರೆಗೆ ನಡೆಯಲಿದೆ.


ನವೆಂಬರ್ 05 ರಂದು ಬೆಳಿಗ್ಗೆ 6 ಗಂಟೆಯಿಂದ ಸಂಜೆ 5 ಗಂಟೆ ವರೆಗೆ ಬಸವನಹಳ್ಳಿ ಮುಖ್ಯ ರಸ್ತೆ, (ಕೆ ಇ ಬಿ ಈದ್ಗಾ ಸರ್ಕಲ್‌ನಿಂದ ಹನುಮಂತಪ್ಪ ವೃತ್ತದವರೆಗೆ ) ಎಂ.ಜಿ. ರಸ್ತೆ (ಹನುಮಂತಪ್ಪ ವೃತ್ತದಿಂದ ಅಜಾದ್ ಪಾರ್ಕ್ ವೃತ್ತದವರೆಗೆ) ವಾಹನಗಳ ನಿಲುಗಡೆಯನ್ನು ನಿಷೇಧಿಸಲಾಗಿದ್ದು ಈ ಮಾರ್ಗದಲ್ಲಿ ಸಂಚರಿಸುವ ಸಾರ್ವಜನಿಕ ವಾಹನಗಳು ಬಸವನಹಳ್ಳಿ ಮುಖ್ಯ ರಸ್ತೆಯಲ್ಲಿ ಸಾಗುವ ಸಾರ್ವಜನಿಕ ವಾಹನಗಳಿಗೆ ರತ್ನಗಿರಿ ರಸ್ತೆ (ಆರ್.ಜಿ. ರಸ್ತೆ) ಯಲ್ಲಿ ಸಂಚರಿಸುವುದು. ಎಂ.ಜಿ. ರಸ್ತೆಯಲ್ಲಿ ಸಾಗುವ ಸಾರ್ವಜನಿಕ ವಾಹನಗಳು ಐ.ಜಿ. ರಸ್ತೆ ಮತ್ತು ಅಂಬೇಡ್ಕರ್ ರಸ್ತೆ (ಮಾರ್ಕೆಟ್ ರಸ್ತೆಯಲ್ಲಿ) ಸಂಚರಿಸಲು ಅವಕಾಶ ನೀಡಲಾಗಿದೆ.


ಚಿಕ್ಕಮಗಳೂರು ನಗರದಲ್ಲಿ ಕೆ.ಎಂ. ರಸ್ತೆ ಮುಖಾಂತರ ಸಂಚರಿಸುವ ಭಾರಿ ವಾಹನಗಳು ಕಡೂರು ಕಡೆಯಿಂದ ಮೂಡಿಗೆರೆ ಕಡೆಗೆ ಹೋಗುವ ಭಾರಿ ವಾಹನಗಳು ಎಐಟಿ ಸರ್ಕಲ್, ಬೈಪಾಸ್, ಪೈ ಸರ್ಕಲ್, ಹಿರೇಮಗಳೂರು, ಕೈಗಾರಿಕಾ ಪ್ರದೇಶ, ರಾಂಪುರ ಮೂಲಕ ಸಂಚರಿಸುವುದು.
ಮೂಡಿಗೆರೆ ಕಡೆಯಿಂದ ಕಡೂರು ಕಡೆಗೆ ಹೋಗುವ ಭಾರಿ ವಾಹನಗಳು ರಾಂಪುರ, ಕೈಗಾರಿಕಾ ಪ್ರದೇಶ, ಹಿರೇಮಗಳೂರು, ಪೈ ಸರ್ಕಲ್, ಬೈಪಾಸ್, ಎಐಟಿ ಸರ್ಕಲ್ ಮೂಲಕ ಸಂಚರಿಸುವಂತೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ತಿಳಿಸಿದ್ದಾರೆ.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

1 day ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

1 day ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

2 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

2 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

2 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

2 days ago