Categories: Chikkamagaluru

ಅಜ್ಜಿಗೆ ಬೆಂಬಲ ನೀಡಿದಂತೆ ರಾಹುಲ್‌ಗೂ ನೀಡಿ ; ಪ್ರಿಯಾಂಕಾ ಗಾಂಧಿ

ಚಿಕ್ಕಮಗಳೂರು: ಜಿಲ್ಲೆಯ ಜನರೊಂದಿಗಿನ ಒಡನಾಟವನ್ನು ಸ್ಮರಿಸುವ ಮೂಲಕ ಭಾವನಾತ್ಮಕವಾಗಿ ಮತಯಾಚನೆಗೆ ಯತ್ನಿಸಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ, ತಮ್ಮ ಅಜ್ಜಿ ಮತ್ತು ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರಂತೆಯೇ ಈಗ ಕುಟುಂಬಕ್ಕಾಗಿ ನಾವು ಹೋರಾಟ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ ಎಂದು ಹೇಳಿದರು.

ತಮ್ಮ ಸಹೋದರ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ಸಂಸತ್ತಿನಿಂದ ಅನರ್ಹಗೊಳಿಸಿರುವುದನ್ನು ಉಲ್ಲೇಖಿಸಿದ ಪ್ರಿಯಾಂಕಾ, ಸುಮಾರು 45 ವರ್ಷಗಳ ಹಿಂದೆ ಇಂದಿರಾಗಾಂಧಿ ಅವರು ಅನುಭವಿಸಿದ ಘಟನೆಯೇ ಇಂದು ಮರುಕಳಿಸಿದೆ. ಆಗ ಇಂದಿರಾ ಗಾಂಧಿಯವರ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಲಾಗಿತ್ತು. ನಾವೀಗ ದೇವರು ಮತ್ತು ಜನರ ಆಶೀರ್ವಾದದಿಂದ ಸತ್ಯಕ್ಕಾಗಿ ಹೋರಾಡುತ್ತಿದ್ದು, ಜಯಶಾಲಿಯಾಗುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು.

‘ನಾನು ಶಾರದಾ ದೇವಿಗೆ (ಶೃಂಗೇರಿ ಶಾರದಾಂಬೆ) ಪ್ರಾರ್ಥನೆ ಸಲ್ಲಿಸಿದ ನಂತರ ಬರುತ್ತಿದ್ದೇನೆ. ಅಲ್ಲಿ ನಾನು ಶಂಕರಾಚಾರ್ಯರನ್ನು (ಈಗಿನ ಮಠಾಧೀಶರು) ಭೇಟಿಯಾದೆ. ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರು ಇಲ್ಲಿಂದ ಸ್ಪರ್ಧಿಸಿದ್ದಾರೋ ಅಥವಾ ಇಲ್ಲವೋ ಎಂದು ಪ್ರಶ್ನಿಸಿದರು. ಹೌದು, ಚಿಕ್ಕಮಗಳೂರಿನಿಂದ ಸ್ಪರ್ಧಿಸಿದ್ದರು ಎಂದು ಹೇಳಿದೆ. ಅವರು ನನ್ನನ್ನು ಆಶೀರ್ವದಿಸಿದರು. ನಾನು ನನ್ನ ಸಹೋದರನಿಗೂ ಆಶೀರ್ವಾದವನ್ನು ಕೋರಿದೆ ಎಂದು ಶೃಂಗೇರಿಯ ದೇವಸ್ಥಾನಕ್ಕೆ ಭೇಟಿ ನೀಡಿದ ನಂತರ ಪ್ರಿಯಾಂಕಾ ಗಾಂಧಿ ಹೇಳಿದರು.

ಕಾಂಗ್ರೆಸ್ ಆಯೋಜಿಸಿದ್ದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ‘ನನ್ನ ತಂದೆ (ದಿವಂಗತ ಮಾಜಿ ಪ್ರಧಾನಿ ರಾಜೀವ್ ಗಾಂಧಿ) ಕೂಡ ಇಲ್ಲಿಗೆ ಬಂದಿದ್ದರು, ಇಂದಿರಾ ಜಿ ಕೂಡ ಇಲ್ಲಿಗೆ ಬಂದಿದ್ದರು ಮತ್ತು ಯಾವಾಗ ಅವರು ಇಲ್ಲಿಗೆ ಬಂದಿದ್ದರೋ ಆಗ ಅವರಿಗೆ ಹೋರಾಟದ ಸಮಯವಾಗಿತ್ತು ಎಂದು ಮಠಾಧೀಶರು ನನಗೆ ಹೇಳಿದರು ಎಂದರು. ‘ಅಂದಿನಂತೆ ಇಂದು ಕೂಡ ನನ್ನ ಕುಟುಂಬಕ್ಕೆ ಹೋರಾಟ ಮಾಡಬೇಕಾದ ಸಮಯ ಇದಾಗಿದೆ. 1978ರಲ್ಲಿ ಇಂದಿರಾಜಿ ಈ ನೆಲಕ್ಕೆ ಬಂದಿದ್ದಾಗ, ಆ ದಿನವೂ ಹೀಗೆ ಮಳೆ ಸುರಿಯುತ್ತಿತ್ತು. ಮಳೆಯು ಶುಭ ಶಕುನವಾಗಿರುವುದರಿಂದ ಇದು ದೇವರ ಆಶೀರ್ವಾದ ಎಂದು ನಾನು ನಂಬುತ್ತೇನೆ. ಆದ್ದರಿಂದ, ಇದು ನನಗೆ ಭಾವನಾತ್ಮಕ ಕ್ಷಣವಾಗಿದೆ. ನಾನು ಕೂಡ ನಿಮ್ಮ ಮುಂದೆ ವೇದಿಕೆಯಲ್ಲಿ, ಅದೇ ಮೈದಾನದಲ್ಲಿ ಮತ್ತು ಅಂತಹುದೇ ವಾತಾವರಣದಲ್ಲಿ ನಿಂತಿದ್ದೇನೆ’ ಎಂದು ಅವರು ಹೇಳಿದರು.

1975 ರಿಂದ 1977ರ ತುರ್ತು ಪರಿಸ್ಥಿತಿ ಹೇರಿಕೆ ನಂತರ ಉತ್ತರ ಪ್ರದೇಶದ ರಾಯ್ ಬರೇಲಿ ಕ್ಷೇತ್ರದಿಂದ ಜನತಾ ಪಕ್ಷದ ರಾಜ್ ನಾರಾಯಣ್ ಅವರೆದುರು ಸೋತ ಒಂದು ವರ್ಷದ ನಂತರ 1978 ರಲ್ಲಿ ಇಂದಿರಾ ಗಾಂಧಿ ಅವರು ಚಿಕ್ಕಮಗಳೂರು ಕ್ಷೇತ್ರದಿಂದ ಲೋಕಸಭೆಯ ಉಪಚುನಾವಣೆಯಲ್ಲಿ ಸ್ಪರ್ಧಿಸಲು ನಿರ್ಧರಿಸಿದ್ದರು. ನಂತರ ಅವರ ನಿಷ್ಠಾವಂತರಲ್ಲಿ ಒಬ್ಬರೆಂದು ಪರಿಗಣಿಸಲ್ಪಟ್ಟ ಡಿಬಿ ಚಂದ್ರೇಗೌಡ (ನಂತರದ ವರ್ಷಗಳಲ್ಲಿ ಬಿಜೆಪಿ ಸೇರಿದವರು) ಅವರಿಗೆ ತಮ್ಮ ಕ್ಷೇತ್ರವನ್ನು ಬಿಟ್ಟುಕೊಟ್ಟಿದ್ದರು. ಇಂದಿರಾ ಅವರು ಮಾಜಿ ಕಾಂಗ್ರೆಸ್ ಮುಖ್ಯಮಂತ್ರಿ ಮತ್ತು ಜನತಾ ಪಕ್ಷದ ಅಭ್ಯರ್ಥಿ ವೀರೇಂದ್ರ ಪಾಟೀಲ್ ಅವರನ್ನು 77,000ಕ್ಕೂ ಹೆಚ್ಚು ಮತಗಳ ಅಂತರದಿಂದ ಸೋಲಿಸಿದ್ದರು. ತಮ್ಮ ಕುಟುಂಬದ ಮೂರು ತಲೆಮಾರುಗಳ ಪರವಾಗಿ ಜನರಿಗೆ ‘ಹೃದಯಪೂರ್ವಕ’ ಧನ್ಯವಾದಗಳನ್ನು ಅರ್ಪಿಸುತ್ತೇನೆ.

ಇಂದಿರಾ ಜೀ ಅವರು ತಮ್ಮ ಅತ್ಯಂತ ಕಷ್ಟಕರವಾದ ಹೋರಾಟದ ಸಮಯವನ್ನು ಎದುರಿಸುತ್ತಿರುವಾಗ, ಚಿಕ್ಕಮಗಳೂರಿನ ಜನರು ಅವರ ಬೆಂಬಲಕ್ಕೆ ನಿಂತರು ಮತ್ತು ಅವರನ್ನು ಕೈಬಿಡಲಿಲ್ಲ ಎಂದು ಹೇಳಿದರು. ಅಂದು ಕೂಡ ಇಂದಿರಾ ಗಾಂಧಿ ಅವರ ವಿರುದ್ಧ ಪ್ರಕರಣವನ್ನು ದಾಖಲಾಗಿತ್ತು ಮತ್ತು ಅವರನ್ನೂ ಸಂಸತ್ ಸದಸ್ಯತ್ವದಿಂದ ತೆಗೆದು ಹಾಕಲಾಗಿತ್ತು. ಆಗ ನೀವು ಅವರನ್ನು ಮತ್ತೆ ಸಂಸತ್ತಿಗೆ ಕರೆತಂದಿದ್ದೀರಿ. ಅವರಿಗೆ ದೇಶದ ಜನರು ಇನ್ನೂ ನಿಮ್ಮೊಂದಿಗಿದ್ದಾರೆ ಇಂದಿರಾಜೀ, ನೀವು ಹೋರಾಡುತ್ತೀರಿ ಎಂಬ ವಿಶ್ವಾಸ ನೀಡಿದಿರಿ. ಇಂದು ಅದೇ ರೀತಿ ಅವರ ಮೊಮ್ಮಗ ರಾಹುಲ್ ಗಾಂಧಿ ಅವರನ್ನು ಸುಳ್ಳು ಪ್ರಕರಣದಲ್ಲಿ ಸಂಸತ್ ಸದಸ್ಯತ್ವದಿಂದ ತೆಗೆದುಹಾಕಲಾಗಿದೆ ಎಂದು ಅವರು ಹೇಳಿದರು.

ರಾಹುಲ್ ಗಾಂಧಿ ಮತ್ತು ನನ್ನ ಇಡೀ ಕುಟುಂಬಕ್ಕೆ ಈ ದೇಶದ ಜನರು ನಮ್ಮೊಂದಿಗೆ ನಿಲ್ಲುತ್ತಾರೆ ಎಂಬ ಸಂಪೂರ್ಣ ವಿಶ್ವಾಸವಿದೆ. ದೇವರ ಆಶೀರ್ವಾದ, ಶಿವ ಪರಮಾತ್ಮನ ಆಶೀರ್ವಾದ ಸದಾ ನಮ್ಮೊಂದಿಗಿರುತ್ತದೆ. ಏಕೆಂದರೆ ನಾವು ಸತ್ಯಕ್ಕಾಗಿ ಹೋರಾಡುತ್ತಿದ್ದೇವೆ. ಈ ಕರ್ನಾಟಕ ಚುನಾವಣೆಯೂ ಸತ್ಯದ ಹೋರಾಟವಾಗಿದೆ ಎಂದು ಅವರು ಹೇಳಿದರು.

ಎಲ್ಲಾ ಕಳ್ಳರು ಮೋದಿ ಎಂಬ ಹೆಸರನ್ನೇ ಹೊಂದಿರುತ್ತಾರೆ ಎಂಬ ಹೇಳಿಕೆಗಾಗಿ ಮಾರ್ಚ್ 23 ರಂದು ಗುಜರಾತ್‌ನ ಸೂರತ್ನ ನ್ಯಾಯಾಲಯವು 2019ರ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿಯವರಿಗೆ ಎರಡು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿತು. ಅದಾದ ಒಂದು ದಿನದ ನಂತರ, ರಾಹುಲ್ ಅವರನ್ನು ಲೋಕಸಭೆಯ ಸದಸ್ಯತ್ವದಿಂದ ಅನರ್ಹಗೊಳಿಸಲಾಯಿತು.

Malnad Times

Recent Posts

Shivamogga Loksabha Constituency | ಮತದಾನಕ್ಕೆ ಸಕಲ ಸಿದ್ಧತೆ, ಮತಗಟ್ಟೆ ತಲುಪಿದ ಮತಯಂತ್ರಗಳು

ಶಿವಮೊಗ್ಗ : ಮಂಗಳವಾರ ನಡೆಯುವ ಲೋಕಸಭಾ ಚುನಾವಣೆಗೆ ಸಕಲ ಸಿದ್ದತೆಗಳು ನಡೆದಿದ್ದು, ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳು ಇಂದು ಮತಗಟ್ಟೆಗಳಿಗೆ ಅಗತ್ಯವಾದ…

3 hours ago

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವು !

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವು ! ಎನ್.ಆರ್.ಪುರ : ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

4 hours ago

ಮತದಾನಕ್ಕೆ ಕೌಂಟ್‌ಡೌನ್ | ಮತಗಟ್ಟೆಗಳಿಗೆ ಮತಯಂತ್ರ ಇತರ ಪರಿಕರಗಳೊಂದಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

ಶಿವಮೊಗ್ಗ :ನಾಳೆ ನಡೆಯಲಿರುವ ಲೋಕಸಭೆ ಚುನಾವಣೆ ಮತದಾನಕ್ಕೆ ಸಕಲ ಸಿದ್ಧತೆ ಪೂರ್ಣಗೊಂಡಿದ್ದು, ಇಂದು ನಿಗದಿಪಡಿಸಲಾದ ಮತಗಟ್ಟೆಗಳಿಗೆ ಅಧಿಕಾರಿಗಳು, ಸಿಬ್ಬಂದಿಗಳು ಮತಯಂತ್ರ…

4 hours ago

Arecanut Today Price | ಮೇ 5ರ ಅಡಿಕೆ ರೇಟ್

ತೀರ್ಥಹಳ್ಳಿ: ಮೇ 5 ಭಾನುವಾರ ನಡೆದ ತೀರ್ಥಹಳ್ಳಿ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.

1 day ago

ಕಾಂಗ್ರೆಸ್ ಮೀಸಲಾತಿ ಜಾರಿಗೊಳಿಸಿದ್ದರಿಂದ ಕೆಳ ವರ್ಗದವರಿಗೂ ಸರ್ಕಾರಿ ಉದ್ಯೋಗ ಲಭಿಸಿದೆ ; ಬೇಳೂರು ಗೋಪಾಲಕೃಷ್ಣ

ಹೊಸನಗರ : ಕಾಂಗ್ರೆಸ್ ಪಕ್ಷದೇಶದ ಪ್ರಗತಿಯಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಮೀಸಲಾತಿ ಜಾರಿಗೊಳಿಸಿದ ಪರಿಣಾಮ ಇಂದು ಕೆಳಜಾತಿಯವರು ಸರ್ಕಾರಿ ಉದ್ಯೋಗ…

1 day ago

ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪನವರಿಂದ ಭರ್ಜರಿ ರೋಡ್ ಷೋ

ರಿಪ್ಪನ್‌ಪೇಟೆ : ನಾಡಿದ್ದು ಮೇ 7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಚುನಾವಣೆಯ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪನವರು ಇಂದು ಭರ್ಜರಿ…

1 day ago