ಚಿಕ್ಕಮಗಳೂರು : ಗ್ರಾಹಕರಿಗೆ ನೀಡಿದ ಅಡುಗೆ ಅನಿಲದ ಸಿಲಿಂಡರ್ ಸೋರಿಕೆಯಿಂದ ಸ್ಪೋಟಗೊಂಡಿದ್ದು, ಗ್ರಾಹಕರ ಮನೆಗೆ ವಿತರಿಸಿದ ಅಡುಗೆ ಅನಿಲದ ಸೋರಿಕೆ ಬಗ್ಗೆ ಗ್ರಾಹಕರು ತಿಳಿಸಿದಾಗಲೂ ಅಡುಗೆ ಅನಿಲ ವಿತರಕರು ಅದನ್ನು ಸರಿಪಡಿಸದೆ ಸೇವಾ ನ್ಯೂನ್ಯತೆ ಎಸಗಿದ್ದರಿಂದ ಅಡುಗೆ ಅನಿಲ ಸ್ಪೋಟಗೊಂಡು ಗ್ರಾಹಕರ ಮನೆಯ ಕಟ್ಟಡ ಸೇರಿದಂತೆ ಅನೇಕ ಪೀಠೋಪಕರಣಗಳು ಹಾನಿಗೊಂಡಿದ್ದವು.
ಗ್ರಾಹಕರಿಗೆ ಈ ಹಾನಿಯನ್ನು ಅಡುಗೆ ಅನಿಲದ ವಿಮಾ ಕಂಪನಿಗಳಾದ ಯುನೈಟೆಡ್ ಇಂಡಿಯಾ ವಿಮಾ ಕಂಪನಿ ಹಾಗೂ ನ್ಯೂ ಇಂಡಿಯಾ ವಿಮಾ ಕಂಪನಿಗಳು ವಿಮಾ ಪರಿಹಾರವನ್ನು ಹಾನಿಯ ಪರಿಹಾರವಾಗಿ ರೂ.4.35 ಲಕ್ಷಗಳನ್ನು, ಪರಿಹಾರವಾಗಿ ರೂ.30 ಸಾವಿರ ಹಾಗೂ ಪ್ರಕರಣದ ಖರ್ಚು ರೂ.10 ಸಾವಿರಗಳನ್ನು ಒಂದು ತಿಂಗಳೊಳಗೆ ನೀಡುವಂತೆ ಆಯೋಗದ ಅಧ್ಯಕ್ಷರಾದ ಎನ್.ಆರ್. ಚೆನ್ನಕೇಶವ ರವರು ಹಾಗೂ ಸದಸ್ಯರಾದ ಡಾ. ಮಂಜುನಾಥ ಎಂ. ಬಮ್ಮಕಟ್ಟಿ ರವರು ಆದೇಶ ನೀಡಿದ್ದಾರೆ.
ತಪ್ಪಿದಲ್ಲಿ ಶೇ.12ರ ಬಡ್ಡಿಯೊಂದಿಗೆ ಮರುಪಾವತಿಸುವಂತೆ ಚಿಕ್ಕಮಗಳೂರು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಆದೇಶ ನೀಡಿದೆ.
ಗ್ರಾಹಕರ ಪರವಾಗಿ ಎನ್.ಆರ್. ತೇಜಸ್ವಿಯವರು ವಾದ ಮಂಡಿಸಿದ್ದರು. ವಿಮಾ ಕಂಪನಿಗಳ ಪರವಾಗಿ ನ್ಯಾಯವಾದಿಗಳಾದ ಹೆಚ್.ಎಲ್. ವಿಶ್ವನಾಥ ಹಾಗೂ ಸಿ.ವಿ. ಹರ್ಷ ರವರು ವಾದ ಮಂಡಿಸಿದ್ದರು. ಗ್ಯಾಸ್ ಏಜೆನ್ಸಿ ಹಾಗೂ ಇಂಡಿಯನ್ ಆಯಿಲ್ ಕಾರ್ಪೋರೇಷನ್ ಪರವಾಗಿ ನ್ಯಾಯವಾದಿಗಳಾದ ಜಿ.ಎಂ. ಜಯಕುಮಾರ್ ಹಾಗೂ ಕೆ.ಎನ್. ಚಂದ್ರಶೇಖರರವರು ವಾದ ಮಂಡಿಸಿದ್ದರು.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…