Categories: Chikkamagaluru

ಅನುದಾನ ಸಮರ್ಪಕ ಬಳಕೆಗೆ ಜಿಲ್ಲಾಧಿಕಾರಿ ಕೆ.ಎನ್. ರಮೇಶ್ ಸೂಚನೆ

ಚಿಕ್ಕಮಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣಕ್ಕಾಗಿ ಮಂಜೂರಾಗಿರುವ ಅನುದಾನವನ್ನು ಸಮರ್ಪಕವಾಗಿ ಬಳಸುವಂತೆ ಜಿಲ್ಲಾಧಿಕಾರಿ ಕೆ.ಎನ್. ರಮೇಶ್ ಅಧಿಕಾರಿಗಳಿಗೆ ಸೂಚಿಸಿದರು.


ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಇಂದು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಜಿಲ್ಲಾ ಮಟ್ಟದ ಜಾಗೃತಿ ಉಸ್ತುವಾರಿ ಸಮಿತಿ ಸಭೆಯ ಕೊನೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನಾಂಗಕ್ಕಾಗಿ ಮಂಜೂರಾಗಿರುವ ಶೇ. 100 ರಷ್ಟು ಅನುದಾನ ಬಳಕೆಯಾಗಬೇಕು, ಮಂಜೂರಾಗಿರುವ ಅನುದಾನ ಸಮರ್ಪಕವಾಗಿ ಬಳಸದೇ ವಾಪಸ್ ಹೋಗಬಾರದು ಎಂದ ನಗರ ಸ್ಥಳೀಯ ಸಂಸ್ಥೆಗಳು, ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ವ್ಯಾಪ್ತಿಯಲ್ಲಿ ವಿವಿಧ ಯೋಜನೆಗಳು ಮಂಜೂರಾಗಿರುವ ಅನುದಾನಕ್ಕೆ ಸಂಬಂಧಿಸಿದಂತೆ ಆಯಾ ಸ್ಥಾಯಿ ಸಮಿತಿ ಮತ್ತು ಸಾಮಾನ್ಯ ಸಭೆಗಳಲ್ಲಿ ಕ್ರಿಯಾ ಯೋಜನೆಗಳಿಗೆ ಮಂಜೂರಾತಿ ಪಡೆಯಬೇಕು. ನಿಗಧಿತ ಅವಧಿಯೊಳಗೆ ಯೋಜನೆಗಳ ಅನುಷ್ಠಾನ ಮತ್ತು ಫಲಾನುಭವಿಗಳಿಗೆ ಸೌಲಭ್ಯಗಳನ್ನು ಕಲ್ಪಿಸುವಂತೆ ಸೂಚಿಸಿದರು.
ಈ ಜನಾಂಗಕ್ಕೆ ವಿತರಿಸಲಾಗುವ ಜಮೀನು ವಿವಿಧ ಕೊಳವೆ ಬಾವಿ ಸೌಲಭ್ಯ ಮೂಲ ಸೌಕರ್ಯ ಉದ್ಯಮ ಶೀಲತಾ ತರಬೇತಿ ಸ್ವಯಂ ಉದ್ಯೋಗ ಕಾರ್ಯಕ್ರಮಗಳು ವಿವಿಧ ಪರಿಕರಗಳ ವಿತರಣೆ ಸೇರಿದಂತೆ ಸೌಲಭ್ಯಗಳನ್ನು ಕಲ್ಪಿಸುವಂತೆ ತಿಳಿಸಿದರು.


ಜಿಲ್ಲೆಯಲ್ಲಿ ಒಟ್ಟು138 ಪರಿಶಿಷ್ಟ ಜಾತಿ, ಪರಿಶಿಷ್ಟ ಜನಾಂಗದ ನೊಂದ ಸಂತ್ರಸ್ಥರಿಗೆ ಒಟ್ಟು ರೂ. 145 ಲಕ್ಷ ಪರಿಹಾರ ಧನವನ್ನು ವಿತರಿಸಲಾಗಿದೆ. ಉಳಿದ 5 ಪ್ರಕರಣಗಳಲ್ಲಿನ ಸಂತ್ರಸ್ಥರಿಗೆ ಪರಿಹಾರ ಧನ ಮಂಜೂರು ಮಾಡಲು ಕ್ರಮವಹಿಸುವಂತೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗೆ ಸೂಚಿಸಿದರು.
ತಾಲ್ಲೂಕುಗಳಲ್ಲಿ ನಿಗಧಿತ ಸಮಯಕ್ಕೆ ನಿಯಮಿತವಾಗಿ ಜಾಗೃತಿ ಹಾಗೂ ಉಸ್ತುವಾರಿ ಸಭೆಗಳನ್ನು ನಡೆಸಬೇಕು, ಸಭೆಗಳನ್ನು ನಡೆಸುವುದರಿಂದ ನಿವೇಶನ, ರಸ್ತೆ, ಸ್ಮಶಾನ ಭೂಮಿ ಮಂಜೂರು, ದೌರ್ಜನ್ಯ ಪ್ರಕರಣ ಸೇರಿದಂತೆ ಹಲವಾರು ಸಮಸ್ಯೆಗಳನ್ನು ತಳಮಟ್ಟದಲ್ಲಿಯೇ ಪರಿಹರಿಸಬಹುದಾಗಿದೆ, ಸಮಸ್ಯೆಗಳಿರುವ ಸ್ಥಳಗಳಿಗೆ ಅಧಿಕಾರಿಗಳು ಭೇಟಿ ನೀಡಿ ಕೂಲಂಕುಷವಾಗಿ ಪರಿಶೀಲಿಸಿ ಪರಿಹರಿಸಲು ಕ್ರಮವಹಿಸ ಬೇಕು ಎಂದರು.


ಸ್ಮಶಾನ ಭೂಮಿ ಮಂಜೂರು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರ ಜಮೀನುಗಳಿಗೆ ರಸ್ತೆ ಹಾಗೂ ವಸತಿ ರಹಿತರಿಗೆ ವಿವಿಧ ವಸತಿ ಯೋಜನೆಗಳಡಿ ಮನೆ ಅಥವಾ ಆಶ್ರಯ ನಿವೇಶನ ಹಕ್ಕು ಪತ್ರ ವಿತರಣೆಗೆ ಕ್ರಮವಹಿಸುವಂತೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ನಿರ್ದೇಶಿಸಿದರು. ವರ್ಗಾವಣೆಗೊಂಡಿರು ಜಿಲ್ಲಾಧಿಕಾರಿಗಳ ಕೊನೆಯ
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾಪ್ರಶಾಂತ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಚೈತ್ರಾಶಿವಾನಂದ್, ಸಮಿತಿ ಸದಸ್ಯರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

Malnad Times

Recent Posts

ಫಲಿತಾಂಶ ಹೊರಬರಲಿ ಗ್ಯಾರಂಟಿಯೋ, ಅಭಿವೃದ್ದಿಯೋ ತಿಳಿಯಲಿದೆ ; ಬಿ.ವೈ. ರಾಘವೇಂದ್ರ

ಹೊಸನಗರ : ಈ ಬಾರಿಯ ಚುನಾವಣೆ ಭಾಗ್ಯ ಗ್ಯಾರಂಟಿಗಳ ಮೂಲಕ ಜನರನ್ನು ಸೆಳೆಯುವ ಚುನಾವಣೆಯಲ್ಲ, ಹಾಡು ಡ್ಯಾನ್ಸ್ ಮೂಲಕ ಲೋಕಸಭೆಗೆ…

59 mins ago

ಹೆಮ್ಮಕ್ಕಿ ಶ್ರೀ ಭದ್ರಕಾಳಿ ಮತ್ತು ಶ್ರೀ ಸೋಮೇಶ್ವರ ಸ್ವಾಮಿಗೆ ಜೀರ್ಣಾಷ್ಟಬಂಧ ಮತ್ತು ಬ್ರಹ್ಮ ಕಲಶಾಭಿಷೇಕ

ಕಳಸ : ತಾಲ್ಲೂಕಿನ ಹೆಮ್ಮಕ್ಕಿಯ ಶ್ರೀ ಭದ್ರಕಾಳಿ ಅಮ್ಮನವರಿಗೆ ಮತ್ತು ಶ್ರೀ ಸೋಮೇಶ್ವರ ಸ್ವಾಮಿಗೆ ಮೇ 01 ರಿಂದ ಮೇ…

3 hours ago

ರಜತ ಉತ್ಸವದ ಗಣಪತಿ ಮೂರ್ತಿಯನ್ನು ದೇವಸ್ಥಾನಕ್ಕೆ ಸಮರ್ಪಣೆ

ರಿಪ್ಪನ್‌ಪೇಟೆ: ನಾಳೆ ನಡೆಯುವ ಶ್ರೀಸಿದ್ದಿವಿನಾಯಕ ಸ್ವಾಮಿ ಶ್ರೀಮನ್ಮಹಾರಥೋತ್ಸವಕ್ಕೆ ಇಲ್ಲಿನ ಗಣೇಶಪ್ರಸಾದ್ ಹೋಟೆಲ್‌ನ ದಿ.ರೇವತಿ ಹೆಬ್ಬಾರ್ ಮತ್ತು ಸತ್ಯನಾರಾಯಣ ಹೆಬ್ಬಾರ್ ಸ್ಮರಣಾರ್ಥ…

4 hours ago

ರಾಜಕೀಯದ ಪರಿಜ್ಞಾನವೇ ಇಲ್ಲದವರು ಸಂಸತ್‌ಗೆ ಹೋದರೆ ಜಿಲ್ಲೆಯ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಹೇಗೆ ಸಾಧ್ಯ ; ಹರತಾಳು ಹಾಲಪ್ಪ

ರಿಪ್ಪನ್‌ಪೇಟೆ: ಕಾಂಗ್ರೆಸ್ ಅಭ್ಯರ್ಥಿಗೆ ಸ್ಥಳೀಯ ಭೌಗೋಳಿಕ ಹಿನ್ನಲೆಯ ಅರಿವೇ ಇಲ್ಲದೆ, ಜಿಲ್ಲೆಯ ಮತದಾರರ ಪಟ್ಟಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹೆಸರೇ ಇಲ್ಲದ…

5 hours ago

ಒಂದೇ ಪರವಾನಗಿಯಲ್ಲಿ ಎರಡು ಕಡೆ ನಾಟಾ ಸಾಗಾಟ ; ಅಕ್ರಮದ ಶಂಕೆ !?

ಹೊಸನಗರ : ತಾಲೂಕಿನ ಪುಣಜೆ ಗ್ರಾಮದಲ್ಲಿ ಖಾಸಗಿ ವ್ಯಕ್ತಿಯೊಬ್ಬರು ನಿರ್ಮಿಸುತ್ತಿರುವ ನೂತನ ಮನೆಗೆ ಅಕ್ರಮ ನಾಟಾ ಸರಬರಾಜು ಆಗಿರುವುದಾಗಿ ಸ್ಥಳೀಯ…

6 hours ago

ಗೀತಕ್ಕ ಗೆಲುವು ಕ್ಷೇತ್ರದ ಸ್ವಾಭಿಮಾನದ ಪ್ರಶ್ನೆ, ಪ್ರಚಾರ ಸಭೆಯಲ್ಲಿ ನಟ ದುನಿಯಾ ವಿಜಯ್ ಹೇಳಿಕೆ

ಸಾಗರ: ಕ್ಷೇತ್ರದ ಅಭಿವೃದ್ಧಿಗೆ ಆಸರೆಯಾಗಿದ್ದ ಮಾಜಿ ಮುಖ್ಯಮಂತ್ರಿ ದಿವಂಗತ ಬಂಗಾರಪ್ಪ ಅವರ ಕೊಡುಗೆ ಮರೆಯಕೂಡದು. ಇಲ್ಲಿ ಗೀತಕ್ಕ ಅವರ ಗೆಲುವು…

8 hours ago