ಆಸ್ತಿಗಾಗಿ ಗಲಾಟೆ ; ಒಂದು ಎಕರೆ ಅಡಿಕೆ ತೋಟ ಕಡಿದು ನಾಶ
ಕಡೂರು : ಕುಟುಂಬ ದ್ವೇಷದ ಹಿನ್ನೆಲೆ ಒಂದು ಎಕರೆ ಅಡಿಕೆ ತೋಟವನ್ನು ಕಡಿದು ನಾಶ ಮಾಡಿರುವ ಘಟನೆ ತಾಲೂಕಿನ ಸಖರಾಯಪಟ್ಟಣ ಸಮೀಪದ ಪಿಳ್ಳೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಚಿಕ್ಕಪ್ಪ ದೊಡ್ಡಪ್ಪ ಮಕ್ಕಳ ನಡುವೆ ಆಸ್ತಿಗಾಗಿ ಗಲಾಟೆ ನಡೆದಿದ್ದು 400 ಅಡಿಕೆ ಗಿಡಗಳನ್ನು ರಾತ್ರೋರಾತ್ರಿ ಕಡಿದು ನಾಶಪಡಿಸಲಾಗಿದೆ. ಪಿಳ್ಳೇನಹಳ್ಳಿ ಗ್ರಾಮದ ಮಹೇಶ್ ನಾಯಕ್ ಎಂಬುವರಿಗೆ ಸೇರಿದ ತೋಟ ಇದಾಗಿದ್ದು, ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.