ಚಿಕ್ಕಮಗಳೂರು : ತಾಲೂಕಿನ ಇತಿಹಾಸ ಪ್ರಸಿದ್ಧ ದೇವೀರಮ್ಮ ದೇಗುಲದಲ್ಲಿ ಡ್ರೆಸ್ ಕೋಡ್ ಆದೇಶ ಜಾರಿಗೊಳಿಸಲಾಗಿದೆ.
ದೇವೀರಮ್ಮನ ದೇಗುಲಕ್ಕೆ ಆಗಮಿಸುವ ಭಕ್ತರು ಸಾಂಪ್ರಾದಾಯಿಕ ಉಡುಗೆಯಲ್ಲಿ ಆಗಮಿಸಲು ಧಾರ್ಮಿಕದತ್ತಿ ಇಲಾಖೆ ಹಾಗೂ ದೇವಸ್ಥಾನ ಆಡಳಿತ ಮಂಡಳಿ ಸೂಚನೆ ನೀಡಿದೆ.
ಚಿಕ್ಕಮಗಳೂರು ತಾಲೂಕಿನ ಬಿಂಡಿಗ ದೇವೀರಮ್ಮನ ದೇವಾಲಯಕ್ಕೆ ಬರುವ ಭಕ್ತರು ಸ್ಕರ್ಟ್, ಮಿಡಿ, ಸ್ಲೀವ್ ಲೆಸ್ ಡ್ರೆಸ್, ಪ್ಯಾಂಟ್, ಸಾಕ್ಸ್ ಹಾಕಿ ದೇವಾಲಯಕ್ಕೆ ಬರುವಂತಿಲ್ಲ ಎಂಬ ಬಗ್ಗೆ ಸೂಚನಾ ಫಲಕ ಅಳವಡಿಸಲಾಗಿದೆ.
ಉಡುಗೆ ಮಾತ್ರವಲ್ಲದೇ ದೇವಾಲಯದ ಆವರಣದೊಳಗೆ ಮೊಬೈಲ್ ಫೋನ್ ಗೂ ನಿಷೇಧ ಹೇರಲಾಗಿದ್ದು, ದೇವಾಯದ ಆವರಣದಲ್ಲಿ ಪ್ರೀ ವೆಡ್ಡಿಂಗ್ ಫೋಟೋ ಶೂಟ್, ರೀಲ್ಸ್ಗೆ ಅವಕಾಶವಿಲ್ಲ ಎಂದು ಸಂದೇಶ ಹಾಕಲಾಗಿದೆ.
ದೀಪಾವಳಿ ವೇಳೆ ಲಕ್ಷಾಂತರ ಭಕ್ತರು ಈ ದೇವಾಲಯಕ್ಕೆ ಭೇಟಿ ನೀಡುತ್ತಾರೆ. ಪ್ರತಿವರ್ಷ ಲಕ್ಷಾಂತರ ಭಕ್ತರು ದೇವೀರಮ್ಮನ ಬೆಟ್ಟ ಹತ್ತುತ್ತಾರೆ. ಮಕ್ಕಳಿಂದ-ವೃದ್ಧರವರೆಗೂ ಬೆಟ್ಟ ಹತ್ತಿ ಬೆಟ್ಟದ ತಾಯಿಗೆ ಕೈಮುಗಿಯುವ ಭಕ್ತರು ಮಧ್ಯರಾತ್ರಿಯೇ ಪಿರಮಿಡ್ ಆಕಾರದ ಬೆಟ್ಟ ಹತ್ತಿ ಭಕ್ತಿ ಸಮರ್ಪಿಸುತ್ತಾರೆ.
ಯುವಕ-ಯುವತಿಯರು ಬರ್ತಾರೆ, ಅವರಲ್ಲಿ ಪ್ರೇಮಿಗಳು ಇರ್ತಾರೆ, ಆದರೆ ಯಾರೇ ಬಂದರೂ ಸಾಂಪ್ರಾದಾಯಿಕ ಉಡುಗೆಯಲ್ಲೇ ಬರಬೇಕೆಂದು ದೇವಾಲಯ ಆಡಳಿತ ಮಂಡಳಿ ಸೂಚಿಸಿದೆ.
ಚಿಕ್ಕಮಗಳೂರು: ಜಿಲ್ಲೆಯಲ್ಲಿ ಶುಕ್ರವಾರ ನಡೆದ ಲೋಕಸಭಾ ಚುನಾವಣೆಯಲ್ಲಿ ಶೇ.75.02 ರಷ್ಟು ಮತದಾನ ನಡೆದಿದೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ಬಾರಿ…
ಶಿವಮೊಗ್ಗ : ಏ.30ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಶಿವಮೊಗ್ಗ ಆಗಮಿಸಲಿದ್ದು ರಾಷ್ಟ್ರೀಯತೆಯ ಬಗ್ಗೆ ಕಾರ್ಯಕರ್ತರಲ್ಲಿ ಹುಮ್ಮಸ್ಸು…
ರಿಪ್ಪನ್ಪೇಟೆ: ಮೇ 7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ 10 ಜನ ಈಶ್ವರಪ್ಪನಂತವರು ಸ್ಪರ್ಧಿಸಿದರೂ ಬಿಜೆಪಿ ಜೆಡಿಎಸ್ ಬೆಂಬಲಿತ…
ಮೋದಿ ಹೆಸರಿನಲ್ಲಿ ರಶೀದಿ ಪಡೆದು ಅಭಿಮಾನಿಯಿಂದ ಸಹಸ್ರನಾಮ ಅರ್ಚನೆ..... ಶೃಂಗೇರಿ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಫಿನಾಡು ವಿಶೇಷತೆಗಳಿಗೆ…
ಹೊಸನಗರ : ಏ. 26 ಶುಕ್ರವಾರ ನಡೆದ ಹೊಸನಗರ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.
ಶಿವಮೊಗ್ಗ : ಮೇ 2ರಂದು ಕಾಂಗ್ರೆಸ್ ನಾಯಕ ರಾಹುಲ್ಗಾಂಧಿ ನಗರದ ಫ್ರೀಡಂ ಪಾರ್ಕ್ನಲ್ಲಿ ಗೀತಾಶಿವರಾಜ್ಕುಮಾರ್ ಬಹಿರಂಗ ಪ್ರಚಾರ ಮಾಡಲಿದ್ದಾರೆ ಎಂದು…