ಚಿಕ್ಕಮಗಳೂರು: ‘ಕಾಂಗ್ರೆಸ್ ಸರ್ಕಾರದ ಕೃಪಾ ಕಟಾಕ್ಷದಲ್ಲಿ ರಾಜ್ಯದಲ್ಲಿ ಕೊಲೆಗಳು ನಡೆಯುತ್ತಿವೆ. ಎರಡೇ ತಿಂಗಳಲ್ಲಿ ಸರ್ಕಾರ ನೈತಿಕತೆ ಕಳೆದುಕೊಂಡಿದೆ’ ಎಂದು ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಜೈನ ಮುನಿಯ ಕೊಲೆಯಾಗಿದೆ, ಬೆಂಗಳೂರಿನಲ್ಲಿ ಹಾಡಹಗಲೆ ಟೆಕ್ಕಿ ಹತ್ಯೆಯಾಗಿದೆ. ಉಲ್ಲಾಳದಲ್ಲಿ ಬಿಜೆಪಿ ಕಾರ್ಯಕರ್ತನ ಶವ ನೀರಿನಲ್ಲಿ ಸಿಗುತ್ತದೆ. ಹನುಮ ಜಯಂತಿ ಯಶಸ್ವಿಯಾಗಿಸಿದ್ದ ವೇಣುಗೋಪಾಲ್ ಕೊಲೆಯಾಗಿದೆ. ಇವೆಲ್ಲವನ್ನು ನೋಡಿದರೆ ರಾಜ್ಯದಲ್ಲಿ ಸರ್ಕಾರದ ಕೃಪೆಯಲ್ಲೆ ಕೊಲೆಗಳಾಗುತ್ತಿವೆ’ ಎಂದರು.
‘ಎಫ್ಐಆರ್ನಲ್ಲಿ ಎ–4 ಆರೋಪಿಯಾಗಿದ್ದವರನ್ನು ಎ–1 ಮಾಡಲಾಗುತ್ತದೆ. ಎ–1 ಇದ್ದವರನ್ನು ರಕ್ಷಣೆ ಮಾಡಲಾಗುತ್ತದೆ. ಇದು ಇಂದಿನ ಕಾಂಗ್ರೆಸ್ ಸರ್ಕಾರದ ರಾಜಕೀಯ ನೀತಿ. 135 ಸೀಟು ಗೆದ್ದಿದ್ದೇವೆ ಎಂದು ದರ್ಪದಿಂದ ಮಾತನಾಡುತ್ತಾರೆ. ಮುಂದೆ ಜನ ಪಾಠ ಕಲಿಸುತ್ತಾರೆ’ ಎಂದು ಶೋಭಾ ಕರಂದ್ಲಾಜೆ ಹೇಳಿದರು.
‘ನಿಮ್ಮ ಗ್ಯಾರಂಟಿಗಳು ಎಲ್ಲಿ ಹೋದವು, ಮೊದಲ ಸಂಪುಟದಲ್ಲೇ ಗ್ಯಾರಂಟಿಗಳನ್ನು ಜಾರಿಗೆ ತರುತ್ತೇವೆ ಎಂದಿದ್ದಿರಿ. ಮೊದಲ ಸಂಪುಟ ಸಭೆ ಯಾವಾಗ ನಡೆಯುತ್ತದೆ. ಮೊದಲು ಅದನ್ನು ಹೇಳಿ ?’ ಎಂದು ಪ್ರಶ್ನಿಸಿದರು.
ಬಿಜೆಪಿ ರಾಜ್ಯ ಘಟಕಕ್ಕೆ ಮಹಿಳಾ ಅಧ್ಯಕ್ಷೆ ಆಗುವರೆ, ವಿರೋಧ ಪಕ್ಷದ ನಾಯಕರ ಆಯ್ಕೆ ಯಾವಾಗ ಎಂಬ ಪ್ರಶ್ನೆಗಳಿಗೆ ಉತ್ತರಿಸಲು ಅವರು ನಿರಾಕರಿಸಿರು.
ರಿಪ್ಪನ್ಪೇಟೆ: ಕುಮದ್ವತಿ ನದಿ ತೀರದ ಬಟಾಣಿಜಡ್ಡು ಗ್ರಾಮದ ರೈತ ದಾನಪ್ಪ ಎಂಬುವರ ಭತ್ತದ ಬೆಳೆಗೆ ಎರಡು ಕಾಡಾನೆಗಳು ನುಗ್ಗಿ ಬೇಸಿಗೆ…
ಹೊಸನಗರ: ತಾಲ್ಲೂಕಿನ ಪುರಪ್ಪೆಮನೆ ಗ್ರಾಪಂ ವ್ಯಾಪ್ತಿಯ ವ್ಯಾಪ್ತಿ ಹಲುಸಾಲೆ - ಮಳವಳ್ಳಿ, ಕಾಪೇರಮನೆ ಗ್ರಾಮದ ಗ್ರಾಮಸ್ಥರು ಸಾಗರ-ಹೊಸನಗರದ ಮಧ್ಯ ಭಾಗದಲ್ಲಿದ್ದು…
ಹೊಸನಗರ: ಶುಕ್ರವಾರ ಬೆಳಿಗ್ಗೆ ದರಗೆಲೆ ತರಲು ಕಾಡಿಗೆ ತೆರಳಿದ ರೈತ ತಿಮ್ಮಪ್ಪ ಎಂಬ ವ್ಯಕ್ತಿಯ ಮೇಲೆ ಆನೆ ದಾಳಿ ಮಾಡಿದ್ದು…
ಶಿವಮೊಗ್ಗ: ರಾಜ್ಯದ ಬಡವರ ಕಲ್ಯಾಣಕ್ಕೆ ಬಿಜೆಪಿ ಕೊಡುಗೆ ಶೂನ್ಯ. ಆದ್ದರಿಂದ ಕ್ಷೇತ್ರದ ಹಿತ ಕಾಯಲು ಗೀತಕ್ಕಗೆ ಮತ ನೀಡಿ, ಆಶೀರ್ವದಿಸಿ…
ಸೊರಬ : ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರು ಬಡವರ ಪರವಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದರು. ಅವರ ಋಣವನ್ನು…
ಚಿಕ್ಕಮಗಳೂರು : ಕರ್ನಾಟಕ ವಿಧಾನ ಪರಿಷತ್ತಿನ ನೈರುತ್ಯ ಪದವೀಧರರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರಗಳಿಗೆ ಜೂನ್ 03 ರಂದು…