ಚಿಕ್ಕಮಗಳೂರು : ಅಂಗಡಿದಾರರು ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಪದ ಬಳಕೆಗೆ ಸರ್ಕಾರ ಸೂಚಿಸಿದ್ದರೂ ಸಹ ನಿರ್ಲಕ್ಷ್ಯ ವಹಿಸಿರುವ ಮುಂಗಟ್ಟುದಾರರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕನ್ನಡಸೇನೆ ಮುಖಂಡರುಗಳು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಡಾ. ವಿಕ್ರಮ್ ಅಮಟೆ ಅವರಿಗೆ ಶುಕ್ರವಾರ ಮನವಿ ಸಲ್ಲಿಸಿದರು.
ಈ ಕುರಿತು ಮಾತನಾಡಿದ ಸೇನೆಯ ಜಿಲ್ಲಾಧ್ಯಕ್ಷ ಪಿ.ಸಿ.ರಾಜೇಗೌಡ ರಾಜ್ಯ ಸರ್ಕಾರ ಕನ್ನಡ ಭಾಷೆಗೆ ಆದ್ಯತೆ ನೀಡಿ ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಹಾಗೂ ಶೇ.40 ರಷ್ಟು ಇತರೆ ಭಾಷೆ ಬಳಸುವಂತೆ ಘೋಷಿಸಿದ್ದರೂ ಚಿಕ್ಕಮಗಳೂರಿನ ಅಂಗಡಿದಾರರು ಇನ್ನೂ ಸರ್ಕಾರದ ಆದೇಶವನ್ನು ಪಾಲಿಸುತ್ತಿಲ್ಲ ಎಂದು ದೂರಿದರು.
ನಾಮಫಲಕ ಸಂಬಂಧ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿ ಹಾಗೂ ನಗರಸಭೆಗೆ ಮನವಿ ಸಲ್ಲಿಸಿದ ವೇಳೆಯಲ್ಲಿ ಮುಂಗಟ್ಟುದಾರರ ವಿರುದ್ಧ ಹೋರಾಟಗಾರರು ಕಾನೂನು ಮೀರದಂತೆ ಪೊಲೀಸ್ ವರಿಷ್ಟಾಧಿಕಾರಿಗಳ ಗಮನಕ್ಕೆ ತರಬೇಕೆಂದು ಸೂಚಿಸಿದನ್ವಯ ಇಂದು ಎಸ್ಪಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗಿದೆ ಎಂದರು.
ಹೀಗಾಗಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು ನಾಮಫಲಕ ವಿಷಯದಲ್ಲಿ ಎಚ್ಚೆತ್ತುಕೊಂಡು ಸರ್ಕಾರದ ಆದೇಶದಂತೆ ಜಿಲ್ಲೆಯ ಪ್ರತಿಯೊಂದು ಅಂಗಡಿಯ ಫಲಕಗಳನ್ನು ಬದಲಾವಣೆಗೆ ಮುಂದಾಗಬೇಕು. ವಿಳಂಬ ಧೋರಣೆ ಅನುಸರಿಸಿದರೆ ಕನ್ನಡಸೇನೆ ಮುಖಂಡರುಗಳು ಬೀದಿಗೀಳಿದು ನಾಮಫಲಕಗಳಿಗೆ ಮಸಿ ಬಳಿಯುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದರು.
ಆ ನಿಟ್ಟಿನಲ್ಲಿ ಮುಂಬರುವ ದಿನಗಳಲ್ಲಿ ನಗರದಲ್ಲಿ ಯಾವುದಾದರು ಅನಾಹುತಗಳು ಸಂಭವಿಸುವ ಮೊದಲೇ ವರಿಷ್ಟಾಧಿಕಾರಿಗಳು ಸೂಕ್ತ ಕೈಗೊಂಡು ಶಾಂತಿ ಕಾಪಾಡಿಕೊಳ್ಳಬೇಕು. ಇನ್ನೆರಡು ದಿನಗಳಲ್ಲಿ ಈ ಬಗ್ಗೆ ಕ್ರಮ ವಹಿಸದಿದ್ದಲ್ಲಿ ಮುಂದಿನ ಅನಾಹುತಗಳಿಗೆ ಜಿಲ್ಲಾಡಳಿತವೇ ನೇರ ಹೊಣೆಯಾಗಲಿದೆ ಎಂದರು.
ಈ ಸಂದರ್ಭದಲ್ಲಿ ಕನ್ನಡಸೇನೆ ಆಟೋ ಘಟಕದ ಅಧ್ಯಕ್ಷ ಜಯಪ್ರಕಾಶ್, ಕಾರ್ಮಿಕ ಪಡೆ ಉಪಾಧ್ಯಕ್ಷ ಶಂಕರೇಗೌಡ, ಮುಖಂಡರುಗಳಾದ ಹರೀಶ್, ಅನ್ವರ್, ಪಾಲಾಕ್ಷಿ, ರವಿ, ದೇವರಾಜ್, ಸತೀಶ್ ಮತ್ತಿತರರಿದ್ದರು.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…