ಮೂಡಿಗೆರೆ: ಕಾಡುಕೋಣ (Bison) ತಿವಿದು ಕಾಫಿ ತೋಟದ ಮ್ಯಾನೇಜರ್ ತೀವ್ರ ಗಾಯಗೊಂಡ (Injury) ಘಟನೆ ಮೂಡಿಗೆರೆ (Mudigere) ತಾಲ್ಲೂಕಿನ ಸಾರಗೋಡು (Saragodu) ಗ್ರಾಮದಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ.
ಸಾರಗೋಡು ಗ್ರಾಮದ ಎಸ್.ಟಿ. ಸುರೇಂದ್ರಗೌಡ ಎಂಬುವವರ ಹಲಸೂರು ಎಸ್ಟೇಟ್ ನಲ್ಲಿ ಈ ಘಟನೆ ನಡೆದಿದೆ, ಪರಿಣಾಮ ಹಲಸೂರು ಎಸ್ಟೇಟ್ ಮ್ಯಾನೇಜರ್ ಸುನಿಲ್ ಅವರ ಕಾಲಿಗೆ ತೀವ್ರ ಗಾಯವಾಗಿದೆ.
ಸೋಮವಾರ ಎಸ್ಟೇಟ್ ನಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರ ಮೇಲ್ವಿಚಾರಣೆ ಮಾಡಲು ತೆರಳಿದ್ದಾಗ ಎಸ್ಟೇಟ್ ಮ್ಯಾನೇಜರ್ ಸುನಿಲ್ ಅವರ ಮೇಲೆ ಕಾಡುಕೋಣ ದಾಳಿಮಾಡಿದೆ ಎಂದು ತಿಳಿದುಬಂದಿದೆ. ಹಲಸೂರು ಎಸ್ಟೇಟ್ ಗೆ ಎಲೆಕ್ಟ್ರೀಕ್ ಬೇಲಿ ಇದ್ದರೂ ಸಹ ಅದನ್ನು ದಾಟಿ ಬಂದಿರುವ ಕಾಡುಕೋಣ ಸುನಿಲ್ ಅವರ ಮೇಲೆ ಏಕಾಏಕಿ ದಾಳಿ ಮಾಡಲು ಮುಂದಾಗಿದೆ. ಆಗ ಅವರು ದೊಡ್ಡ ಕಾಫಿ ಗಿಡವೊಂದನ್ನು ಏರಿದ್ದಾರೆ. ಕಾಡುಕೋಣ ಆ ಕಾಫಿ ಗಿಡವನ್ನೇ ಬುಡಸಮೇತ ಕಿತ್ತು ಬೀಳಿಸಿದೆ. ನೆಲಕ್ಕೆ ಬಿದ್ದ ಸುನಿಲ್ ಅವರು ಸಾವರಿಸಿಕೊಂಡು ಮತ್ತೊಂದು ಗಿಡವನ್ನು ಏರುವ ಸಂದರ್ಭದಲ್ಲಿ ಅವರ ಕಾಲಿನ ಭಾಗಕ್ಕೆ ಕಾಡುಕೋಣ ತಿವಿದಿದೆ. ಅದೃಷ್ಟವಶಾತ್ ಅವರು ಕಾಫಿ ಗಿಡವನ್ನು ಏರಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಗಾಯಗೊಂಡ ಸುನಿಲ್ ಅವರನ್ನು ತಕ್ಷಣ ಮೂಡಿಗೆರೆ ಎಂ.ಜಿ.ಎಂ. ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಗಿದೆ. ಸುನಿಲ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ನಾಲ್ಕು ದಿನದ ಹಿಂದೆ ಮೂಡಿಗೆರೆ ಸಮೀಪದ ಲೋಕವಳ್ಳಿಯಲ್ಲಿ ವ್ಯಕ್ತಿಯೋರ್ವರ ಮೇಲೆ ಕಾಡುಕೋಣ ದಾಳಿ ನಡೆಸಿ ಗಾಯಗೊಳಿಸಿತ್ತು. ಮಲೆನಾಡು ಭಾಗದಲ್ಲಿ ಈಗ ಕಾಡಾನೆಗಳ ಜೊತೆಗೆ ಕಾಡುಕೋಣಗಳ ಹಾವಳಿ ಮಿತಿಮೀರಿದೆ. ಹಿಂಡು ಹಿಂಡು ಕಾಡುಕೋಣಗಳು ತೋಟ, ಗದ್ದೆಗಳಿಗೆ ದಾಳಿಯಿಡುತ್ತಿವೆ. ಇದರಿಂದ ಕಾರ್ಮಿಕರು ಕಾಫಿ ತೋಟಗಳಿಗೆ ತೆರಳಲು ಭಯಪಡುವಂತಾಗಿದೆ.
ಅರಣ್ಯ ಇಲಾಖೆ ಈ ಬಗ್ಗೆ ಕ್ರಮ ವಹಿಸದೇ ಇದ್ದರೆ ಮಲೆನಾಡಿನಲ್ಲಿ ಕೃಷಿ ಕಾರ್ಯ ಮಾಡುವುದೇ ದುಸ್ತರವೆನ್ನುವ ರೀತಿಯ ಪರಿಸ್ಥಿತಿ ನಿರ್ಮಾಣವಾಗಿದೆ. ಸರ್ಕಾರ ಈ ಬಗ್ಗೆ ಕ್ರಮ ಕೈಗೊಂಡು ಕಾಡುಕೋಣಗಳ ನಿಯಂತ್ರಣಕ್ಕೆ ಕ್ರಮ ವಹಿಸಬೇಕು ಎಂದು ಈ ಭಾಗದ ರೈತರು ಆಗ್ರಹಿಸಿದ್ದಾರೆ.
ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ಸುಳಿಗಾಳಿ ಸೃಷ್ಟಿಯಾಗಿರುವ ಕಾರಣ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಬಿರುಗಾಳಿ…
ಶಿವಮೊಗ್ಗ : ಮಂಗಳವಾರ ನಡೆಯುವ ಲೋಕಸಭಾ ಚುನಾವಣೆಗೆ ಸಕಲ ಸಿದ್ದತೆಗಳು ನಡೆದಿದ್ದು, ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳು ಇಂದು ಮತಗಟ್ಟೆಗಳಿಗೆ ಅಗತ್ಯವಾದ…
ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವು ! ಎನ್.ಆರ್.ಪುರ : ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಶಿವಮೊಗ್ಗ :ನಾಳೆ ನಡೆಯಲಿರುವ ಲೋಕಸಭೆ ಚುನಾವಣೆ ಮತದಾನಕ್ಕೆ ಸಕಲ ಸಿದ್ಧತೆ ಪೂರ್ಣಗೊಂಡಿದ್ದು, ಇಂದು ನಿಗದಿಪಡಿಸಲಾದ ಮತಗಟ್ಟೆಗಳಿಗೆ ಅಧಿಕಾರಿಗಳು, ಸಿಬ್ಬಂದಿಗಳು ಮತಯಂತ್ರ…
ತೀರ್ಥಹಳ್ಳಿ: ಮೇ 5 ಭಾನುವಾರ ನಡೆದ ತೀರ್ಥಹಳ್ಳಿ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.
ಹೊಸನಗರ : ಕಾಂಗ್ರೆಸ್ ಪಕ್ಷದೇಶದ ಪ್ರಗತಿಯಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಮೀಸಲಾತಿ ಜಾರಿಗೊಳಿಸಿದ ಪರಿಣಾಮ ಇಂದು ಕೆಳಜಾತಿಯವರು ಸರ್ಕಾರಿ ಉದ್ಯೋಗ…