Categories: Chikkamagaluru

ಕಾಫಿನಾಡಿಗೆ ಲಗ್ಗೆ ಇಟ್ಟ ಬೀಟಮ್ಮ ಗುಂಪಿನ ಕಾಡಾನೆಗಳು

ಚಿಕ್ಕಮಗಳೂರು: ಆಹಾರ ಅರಸಿ ಕಾಡಿನಿಂದ ನಾಡಿಗೆ ಕಾಡಾನೆಗಳ ಹಿಂಡು ಬರುತ್ತಿವೆ. ಹಾಸನದಲ್ಲಿ ಉಪಟಳ ನೀಡುತ್ತಿದ್ದ ಬೀಟಮ್ಮ ಗುಂಪಿನ ಕಾಡಾನೆಗಳು ಈಗ ಚಿಕ್ಕಮಗಳೂರಿಗೆ ಲಗ್ಗೆ ಇಟ್ಟಿವೆ. ನಗರದ ಹೊರವಲಯದಲ್ಲಿ ಬೀಡುಬಿಟ್ಟಿರುವ 30ಕ್ಕೂ ಹೆಚ್ಚು ಕಾಡಾನೆಗಳನ್ನು ಹಿಮ್ಮೆಟ್ಟಿಸಲು ಅಭಿಮನ್ಯು ತಂಡ ಆಗಮಿಸಿವೆ.

ಅಭಿಮನ್ಯು ನೇತೃತ್ವದಲ್ಲಿ ಬೀಟಮ್ಮ ಗುಂಪಿನ ಆನೆಗಳನ್ನು ಕಾಡಿಗಟ್ಟಲು ಸಿದ್ಧತೆ ನಡೆದಿದೆ. ಚಿಕ್ಕಮಗಳೂರು ಬಳಿಯ ಮತ್ತಾವರಕ್ಕೆ ನಾಗರಹೊಳೆ ಹಾಗೂ ದುಬಾರೆಯಿಂದ ಎಂಟು ಸಾಕಾನೆಗಳು ಬಂದಿವೆ. ಸಾಕಾನೆಗಳಾದ ಅಭಿಮನ್ಯು, ಕರ್ನಾಟಕ ಭೀಮ, ಹರ್ಷ, ಧನಂಜಯ ಹಾಗೂ ಅಶ್ವತ್ಥಾಮ, ಸುಗ್ರೀವರಿಂದ ಮಂಗಳವಾರ ಮಧ್ಯಾಹ್ನದ ನಂತರ ಕಾರ್ಯಾಚರಣೆ ನಡೆಸಲಾಗುತ್ತದೆ.

ಇದೀಗ ಬೀಟಮ್ಮ ಟೀಂ ಕೆ.ಆರ್.ಪೇಟೆಯ ನೀಲಗಿರಿ ಪ್ಲಾಂಟೇಶನ್ ಬಳಿ ಬಂದಿವೆ. ಇವುಗಳನ್ನು ಕಾಡಿಗಟ್ಟಲು ಸಿದ್ಧತೆ ನಡೆದಿದೆ. ಈ ಕಾರ್ಯಚರಣೆಗಾಗಿ ನೂರಕ್ಕೂ ಹೆಚ್ಚು ಅರಣ್ಯ ಸಿಬ್ಬಂದಿ ಹಾಗೂ ನುರಿತ ತಜ್ಞರು, ಅಧಿಕಾರಿಗಳು ಭಾಗಿಯಾಗಿದ್ದಾರೆ.

ನಗರದ ಮುಗ್ತಿಹಳ್ಳಿಯಲ್ಲಿರುವ ಆಂಬರ್‌ವ್ಯಾಲಿ ವಸತಿ ಶಾಲೆಯಲ್ಲಿ ಸುಮಾರು 30 ಕಾಡಾನೆಗಳು ಸೋಮವಾರ ಬೀಡು ಬಿಟ್ಟಿದ್ದವು. ಆದರೆ ಅರಣ್ಯ ಸಿಬ್ಬಂದಿಗಳು ಪಟಾಕಿ ಸಿಡಿಸಿದ್ದರಿಂದ ಆಂಬರ್ ವ್ಯಾಲಿ ಶಾಲಾ ಅವರಣದಿಂದ ಸುಮಾರು 30 ಕಾಡಾನೆಗಳು ಹೊರಬಂದಿವೆ.

ವಸತಿ ಶಾಲೆಯೊಳಗೆ ಸುಮಾರು 25ಕ್ಕೂ ಹೆಚ್ಚು ಕಾಡಾನೆಗಳು ಬೀಡು ಬಿಟ್ಟಿರುವ ಹಿನ್ನೆಲೆಯಲ್ಲಿ, ಶಾಲೆಯಲ್ಲಿರುವ ಇರುವ ಸುಮಾರು 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳಿಗೆ ಯಾವುದೇ ಕಾರಣಕ್ಕೂ ವಸತಿ ಶಾಲೆಯಿಂದ ಹೊರಗಡೆ ಬರಬೇಡಿ ಎಂದು ಅರಣ್ಯ ಇಲಾಖೆ ಸೂಚನೆ ನೀಡಿತ್ತು.

25 ಎಕರೆಗೂ ಹೆಚ್ಚು ಪ್ರದೇಶದಲ್ಲಿ ಈ ಆಂಬರ್ ವ್ಯಾಲಿ ವಸತಿ ಶಾಲೆ ಇದೆ. ಆದ್ದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಮುಗ್ತಿಹಳ್ಳಿ ಬಳಿಯ ಶಾಲಾ ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿದೆ. ವಸತಿ ಶಾಲೆಗೆ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಪೊಲೀಸರಿಂದ ಬಿಗಿ ಭದ್ರತೆ ಒದಗಿಸಲಾಗಿತ್ತು.

ನಿಷೇಧಾಜ್ಞೆ ಜಾರಿ:
ಗ್ರಾಮಾಂತರ ವಿಭಾಗ ವ್ಯಾಪ್ತಿಯ ಅಂಬಳೆ ಹೋಬಳಿ ಕೆ. ಆರ್. ಪೇಟೆ ಗ್ರಾಮದ ಸಮೀಪದ ನೆಡುತೋಪು ಪ್ರದೇಶದಲ್ಲಿ ಬಿಟ್ಟಮ್ಮ ಆನೆ ತಂಡವು ಬೀಡು ಬಿಟ್ಟಿದ್ದು ಸುಮಾರು 20 ರಿಂದ 25 ಆನೆಗಳು ತಂಡದಲ್ಲಿದ್ದು ಸಾರ್ವಜನಿಕ ಸುರಕ್ಷತಾ ದೃಷ್ಟಿಯಿಂದ ಮುಂಜಾಗ್ರತಾ ಕ್ರಮಕೈಗೊಳ್ಳುವ ಹಿನ್ನೆಲೆಯಲ್ಲಿ ನಿಷೇದಾಜ್ಞೆಯನ್ನು ಜನವರಿ 30ರ ಬೆಳಿಗ್ಗೆಯಿಂದ ಜನವರಿ 31ರ ಬೆಳಿಗ್ಗೆ 10 ಗಂಟೆವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಉಪವಿಭಾಗದ ಉಪವಿಭಾಗೀಯ ದಂಡಾಧಿಕಾರಿ ಹಾಗೂ ಉಪವಿಭಾಗಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಕೆ. ಆರ್. ಪೇಟೆ, ಮತ್ತಿಕೆರೆ, ಮಾವಿನಕೆರೆ, ನೆರಡಿ, ಬಿಗ್ಗದೇವನಹಳ್ಳಿ, ಬೀಗ್ಗನಹಳ್ಳಿ, ಹಲುವಳ್ಳಿ, ಕಂಬಿಹಳ್ಳಿ, ತಗದೂರು. ಕುಂದೂರು, ಕೆಸವಿನ ಮನೆ, ಮಳ್ಳೂರು, ಕೆಂಚನಹಳ್ಳಿ, ಹಾದಿಹಳ್ಳಿ, ಗ್ರಾಮಗಳ ವ್ಯಾಪ್ತಿಯಲ್ಲಿ ಈ ಕಾಡಾನೆಯನ್ನು ವಾಪಾಸ್ಸು ಅರಣ್ಯಕ್ಕೆ ಹಿಂಮ್ಮೆಟ್ಟಿಸಲು ಕಾರ್ಯಾಚರಣೆ ನಡೆಸುವ ಹಿನ್ನೆಲೆಯಲ್ಲಿ ಸಾರ್ವಜನಿಕ ಶಾಂತಿ, ಸುವ್ಯವಸ್ಥೆ ಹಾಗೂ ಸಂರಕ್ಷಣಾ ದೃಷ್ಟಿಯಿಂದ ಕೆ. ಆರ್. ಪೇಟೆ, ಮತ್ತಿಕೆರೆ, ಮಾವಿನಕೆರೆ, ನೆರಡಿ, ಬಿಗ್ಗದೇವನಹಳ್ಳಿ, ಬೀಗ್ಗನಹಳ್ಳಿ, ಹಲುವಳ್ಳಿ, ಕಂಬಿಹಳ್ಳಿ, ತಗದೂರು. ಕುಂದೂರು, ಕೆಸವಿನಮನೆ, ಮಳ್ಳೂರು, ಕೆಂಚನಹಳ್ಳಿ, ಹಾದಿಹಳ್ಳಿ ಗ್ರಾಮಗಳು ವ್ಯಾಪ್ತಿಯಲ್ಲಿದೆ.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

15 hours ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

19 hours ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

20 hours ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

22 hours ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

22 hours ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

1 day ago