ಕಾಫಿನಾಡಿನ 5 ತಾಲೂಕಿನ ಶಾಲೆಗಳಿಗೆ ಇಂದು ರಜೆ ಘೋಷಣೆ

0 37

ಚಿಕ್ಕಮಗಳೂರು : ಕಾಫಿನಾಡಲ್ಲಿ ಮಳೆಯ ಅಬ್ಬರ ಮುಂದುವರೆದ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯಿಂದ ಜಿಲ್ಲೆಯಾದ್ಯಂತ ಭಾರೀ ಮಳೆಯ ಮುನ್ಸೂಚನೆ ನೀಡಿದ ಕಾರಣ ಭಾನುವಾರ ತಡ ರಾತ್ರಿ 5 ತಾಲೂಕಿನ ಶಾಲೆಗಳಿಗೆ (ಅಂಗನವಾಡಿಯಿಂದ ಪ್ರೌಢ ಶಾಲೆಗಳವರೆಗೆ) ಸೋಮವಾರ ಜುಲೈ 24 ರಂದು ಜಿಲ್ಲಾಡಳಿತ ರಜೆ ಘೋಷಣೆ ಮಾಡಿದೆ.

ಜಿಲ್ಲೆಯ ಐದು ತಾಲೂಕುಗಳಾದ ಮೂಡಿಗೆರೆ, ಎನ್.ಆರ್.ಪುರ, ಕೊಪ್ಪ, ಶೃಂಗೇರಿ, ಕಳಸ, ಚಿಕ್ಕಮಗಳೂರು ತಾಲೂಕಿನ ಐದು ಹೋಬಳಿಗಳ (ಕಸಬಾ, ಆಂಬಳೆ , ಲಕ್ಯಾ ಹೊರತುಪಡಿಸಿ) ಶಾಲೆಗಳಿಗೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ರಜೆ ಘೋಷಣೆ ಮಾಡಿದ್ದಾರೆ.

ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮುನ್ನೆಚ್ಚರಿಕಾ ಕ್ರಮವಾಗಿ ರಜೆ‌ ಘೋಷಣೆ ಮಾಡಲಾಗಿದೆ.

Leave A Reply

Your email address will not be published.

error: Content is protected !!