ಮೂಡಿಗೆರೆ : ಮಾರುತಿ 800 ಕಾರು (Car) ಮತ್ತು ಟ್ರ್ಯಾಕ್ಟರ್ (Tractor) ನಡುವೆ ಅಪಘಾತದಲ್ಲಿ (Accident) ಗಂಭೀರವಾಗಿ ಗಾಯಗೊಂಡಿದ್ದ ಕಾರು ಚಾಲಕ ಮೃತಪಟ್ಟ (Death) ಘಟನೆ ನಡೆದಿದೆ.
ಮುತ್ತಿಗೆಪುರ ಎಂಬಲ್ಲಿ ಗುರುವಾರ ನಡೆದ ಅಪಘಾತದಲ್ಲಿ ಬೇಲೂರು ತಾಲೂಕಿನ ಚೀಕನಹಳ್ಳಿ ಕೀರ್ತಿ (21) ಎಂಬ ಯುವಕ ಗಂಭೀರಗೊಂಡಿದ್ದ, ಈತ ಮೂಡಿಗೆರೆ ಸಮೀಪದ ಚಿಕ್ಕಳ್ಳ ಎಂಬಲ್ಲಿ ಕಾಫಿ ಎಸ್ಟೇಟ್ ಒಂದರಲ್ಲಿ ರೈಟರ್ ಆಗಿ ಕೆಲಸ ಮಾಡುತ್ತಿದ್ದನು ಎನ್ನಲಾಗಿದೆ.
ಗಾಯಗೊಂಡ ಚಾಲಕನಿಗೆ ಮೂಡಿಗೆರೆ ಎಂ.ಜಿ.ಎಂ. ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಅಂಬುಲೆನ್ಸ್ ಮೂಲಕ ಕರೆದೊಯ್ಯುವ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾನೆ. ನಂತರ ಮೃತದೇಹವನ್ನು ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ತಂದು ಶುಕ್ರವಾರ ಬೆಳಿಗ್ಗೆ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.
ಗುರುವಾರ ಮಧ್ಯಾಹ್ನ ಚೀಕನಹಳ್ಳಿ ತನ್ನ ಮನೆಯಿಂದ ಚಿಕ್ಕಳ್ಳದ ತೋಟಕ್ಕೆ ಮಾರುತಿ 800 ಕಾರಿನಲ್ಲಿ ತೆರಳುತ್ತಿದ್ದಾಗ ಮೂಡಿಗೆರೆ ಸಮೀಪದ ಮುತ್ತಿಗೆಪುರದಲ್ಲಿ ಎದುರಿನಿಂದ ಬಂದ ಟ್ರ್ಯಾಕ್ಟರ್ ಗೆ ಮುಖಾಮುಖಿ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿತ್ತು. ಟ್ರ್ಯಾಕ್ಟರ್ ಚಿಕ್ಕಮಗಳೂರು ತಾಲೂಕು ಹಾಂದಿ ಮೂಲದ ವ್ಯಕ್ತಿಗೆ ಸೇರಿದೆಂದು ತಿಳಿದು ಬಂದಿದೆ.
ಮೃತ ಕೀರ್ತಿಯವರ ತಂದೆ-ತಾಯಿ ಇಬ್ಬರು ಮರಣ ಹೊಂದಿದ್ದು, ಓರ್ವ ಸಹೋದರ ಮತ್ತು ಓರ್ವ ಸಹೋದರಿಯನ್ನು ಅಗಲಿದ್ದಾರೆ.
ಮೂಡಿಗೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…