ಚಿಕ್ಕಮಗಳೂರು : ಅಪಘಾತಕ್ಕೀಡಾದ ಕಾರೊಂದರಲ್ಲಿ ಮದ್ಯ, ಸಿ.ಟಿ.ರವಿ ಭಾವಚಿತ್ರವುಳ್ಳ ಕ್ಯಾಲೆಂಡರ್ ಹಾಗೂ ಲಾಂಗ್ ಪತ್ತೆಯಾದ ಘಟನೆ ನಗರದ ಎಐಟಿ ಸರ್ಕಲ್ ನಲ್ಲಿ ಮಾ.26ರ ತಡರಾತ್ರಿ ನಡೆದಿದೆ.
ನಗರದ ಎಐಟಿ ಸರ್ಕಲ್ ಬಳಿ ಕಳೆದ ರಾತ್ರಿ ಕಾರುವೊಂದರ ಬ್ರೇಕ್ ಡೌನ್ ಆಗಿದೆ. ಈ ವೇಳೆ ಕಾರನ್ನು ತಳ್ಳಲು ಮುಂದಾದಾಗ ಚಾಲಕ ಹಾಗೂ ಅಲ್ಲಿದ್ದವರ ನಡುವೆ ಮಾತಿನ ಚಕಮಕಿ ನಡೆದಿದೆ. ಆ ಸಂದರ್ಭ ಕಾರಿನ ಒಳಗೆ ನೋಡಿದಾಗ ಅದರಲ್ಲಿ ಭಾರೀ ಪ್ರಮಾಣದ ಮದ್ಯದ ಪ್ಯಾಕೇಟ್ ಗಳು, ಲಾಂಗ್ ಹಾಗೂ ಸಿ.ಟಿ.ರವಿ ಭಾವಚಿತ್ರವುಳ್ಳ ಕ್ಯಾಲೆಂಡರ್ ಪತ್ತೆಯಾಗಿವೆ ಎಂದು ತಿಳಿದುಬಂದಿದೆ.
ವಿಷಯ ತಿಳಿಯುತ್ತಲೇ ಎಐಟಿ ಸರ್ಕಲ್ ಬಳಿ ಜಮಾಯಿಸಿದ ಸ್ಥಳೀಯರು ಕಾರಿನಲ್ಲಿದ್ದ ಮದ್ಯ, ಕ್ಯಾಲೆಂಡರ್, ಲಾಂಗ್ ಅನ್ನು ಹೊರತೆಗೆದಿದ್ದಾರೆ. ಸಿ.ಟಿ.ರವಿ ವಿರುದ್ಧ ಘೋಷಣೆಗಳನ್ನು ಕೂಗಿದರು. ಓಟಿಗಾಗಿ ಬಡವರಿಗೆ ಮದ್ಯ ಹಂಚುತ್ತಿರುವ ಸಿ.ಟಿ.ರವಿಯನ್ನು ಬಂಧಿಸುವಂತೆ ಒತ್ತಾಯಿಸಿದರು. ಈ ವೇಳೆ ಓಡಿ ಹೋಗಲು ಯತ್ನಿಸಿದ ಕಾರು ಚಾಲಕನನ್ನು ಹಿಡಿದು ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ್ದಾರೆ.
ಸ್ಥಳಕ್ಕೆ ನಗರ ಠಾಣಾ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿ ಕಾರಿನಲ್ಲಿದ್ದ ಮದ್ಯದ ಬಾಟಲಿಗಳು, ಕ್ಯಾಲೆಂಡರ್, ಲಾಂಗ್ ವಶಕ್ಕೆ ಪಡೆದುಕೊಂಡಿದ್ದಾರೆ.
ತೀರ್ಥಹಳ್ಳಿ: ಮೇ 5 ಭಾನುವಾರ ನಡೆದ ತೀರ್ಥಹಳ್ಳಿ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.
ಹೊಸನಗರ : ಕಾಂಗ್ರೆಸ್ ಪಕ್ಷದೇಶದ ಪ್ರಗತಿಯಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಮೀಸಲಾತಿ ಜಾರಿಗೊಳಿಸಿದ ಪರಿಣಾಮ ಇಂದು ಕೆಳಜಾತಿಯವರು ಸರ್ಕಾರಿ ಉದ್ಯೋಗ…
ರಿಪ್ಪನ್ಪೇಟೆ : ನಾಡಿದ್ದು ಮೇ 7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಚುನಾವಣೆಯ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪನವರು ಇಂದು ಭರ್ಜರಿ…
ಹೊಸನಗರ : ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿರುವ ಹಾಸನದ ಪ್ರಜ್ವಲ್ ರೇವಣ್ಣ ಅವರ ಪ್ರಕರಣ ಅತ್ಯಂತ ಹೇಯವಾದದ್ದು. ಹೆಣ್ಣು ಮಕ್ಕಳ ಮಾನಹಾನಿಯಾಗುವಂತಹ…
ರಿಪ್ಪನ್ಪೇಟೆ : ಅರಸಾಳು ಗ್ರಾಪಂ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ಕಾಡಾನೆ ದಾಳಿಗೆ ತುತ್ತಾಗಿದ್ದ ಮೃತಪಟ್ಟ ತಿಮ್ಮಪ್ಪ ನಿವಾಸಕ್ಕೆ…
ಶಿವಮೊಗ್ಗ : ನಮ್ಮನ್ನು ಯಾರು ಆಳಬೇಕೆಂಬ ತೀರ್ಮಾನ ಮತದಾರರ ಕೈಯಲಿದೆ. ಆದ್ದರಿಂದ ಎಲ್ಲ ಮತದಾರರು ತಪ್ಪದೇ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿ…