ಚಿಕ್ಕಮಗಳೂರು : ಇದ್ದಕ್ಕಿದ್ದಂತೆ ಬಂದು ಎತ್ತಿಕೊಂಡು ಓಡಿದ ಕಿಡ್ನಾಪರ್ಗೆ ಅಷ್ಟೇ ಚಾಣಾಕ್ಷತನದಿಂದ ಒಬ್ಬ ಪೋರ ಚಳ್ಳೆಹಣ್ಣು ತಿನ್ನಿಸಿ ಪಾರಾದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಈ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ.
ಚಿಕ್ಕಮಗಳೂರು ನಗರದ ಎಂಜಿ ರಸ್ತೆಯಲ್ಲಿ ಭಾನುವಾರ ಸಂಜೆ 6.38ರ ವೇಳೆಗೆ ಬಾಲಕನ ಅಪಹರಣಕ್ಕೆ ಈ ಯತ್ನ ನಡೆದಿದೆ. ಫುಟ್ಪಾತ್ನಲ್ಲಿ ಗೆಳೆಯರ ಜತೆಗೆ ಆಟವಾಡುತ್ತಿದ್ದ ಮಗುವನ್ನು ಅಪಹರಿಸಲು ಒಬ್ಬ ವ್ಯಕ್ತಿ ಯತ್ನಿಸಿದ್ದಾನೆ. ಅಪಹರಿಸಿ ಹೆಗಲ ಮೇಲೆ ಎತ್ತಿಕೊಂಡು ವ್ಯಕ್ತಿ ವೇಗವಾಗಿ ಮುನ್ನಡೆದಿದ್ದು, ಬಾಲಕ ನುಸುಳಿಕೊಂಡು ಹೆಗಲಿನಿಂದ ಕೆಳಗೆ ಹಾರಿ ಚಾಣಾಕ್ಷತೆಯಿಂದ ಎಸ್ಕೇಪ್ ಆಗಿದ್ದಾನೆ.
ಸಾಹಸ ಮೆರೆದು ಧೈರ್ಯ ಪ್ರದರ್ಶಿಸಿದ ಬಾಲಕ ಯುಕೆಜಿ ವಿದ್ಯಾರ್ಥಿಯಾಗಿದ್ದು, ಬಾಲಕನ ಸಮಯಸ್ಫೂರ್ತಿಗೆ ಜನರಿಂದ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ. ಸಿನಿಮೀಯ ರೀತಿಯಲ್ಲಿ ನಡೆದಿರುವ ಈ ಘಟನೆ ಜನನಿಬಿಡ ಪ್ರದೇಶದಲ್ಲೇ ನಡೆದಿದ್ದರೂ ಫಕ್ಕನೆ ಯಾರ ಗಮನಕ್ಕೂ ಬಂದಿಲ್ಲ. ಅಪಹರಣಕ್ಕೆ ಯತ್ನಿಸಿದ ವ್ಯಕ್ತಿಯ ಚಹರೆ ಸಿಸಿ ಕ್ಯಾಮೆರಾದಲ್ಲಿ ದಾಖಲಾಗಿದೆ.
ರಿಪ್ಪನ್ಪೇಟೆ: ಕಳೆದ ವಿಧಾನಸಭಾ ಚುನಾವಣೆಯ ವೇಳೆ ನಮ್ಮ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಮನೆಗೆ ತಲುಪಿಸುವಾಗ ಬಿಜೆಪಿಯವರು ಗ್ಯಾರಂಟಿ…
ಶಿವಮೊಗ್ಗ: ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿಯ ಪರ ಮತಯಾಚಿಸಿದ ಪ್ರಧಾನಿ ಮೋದಿ ಅವರು ಈ ದೇಶದ ಹೆಣ್ಣುಮಕ್ಕಳ ಕ್ಷಮೆ ಕೇಳಬೇಕು ಎಂದು…
ರಿಪ್ಪನ್ಪೇಟೆ: ಇತಿಹಾಸ ಪ್ರಸಿದ್ದ ಶ್ರೀಸಿದ್ದಿವಿನಾಯಕ ಸ್ವಾಮಿಯ ಪ್ರಥಮ ವರ್ಷದ ಶ್ರೀಮನ್ಮಹಾರಥೋತ್ಸವ ಸಂಭ್ರಮ ಸಡಗರದೊಂದಿಗೆ ವಿಜೃಂಭಣೆಯಿಂದ ಇಂದು ಜರುಗಿತು. ಮಧ್ಯಾಹ್ನ 12:30…
ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ನಗರದಲ್ಲಿ ಮತಯಾಚನೆ ನಡೆಸಿದರು. ನಗರದ ಶಾಹಿ ಗಾರ್ಮೆಂಟ್ಸ್, ಟೊಯೋಟಾ…
ಶಿಕಾರಿಪುರ: ಪಕ್ಷೇತರ ಅಭ್ಯರ್ಥಿಯಾಗಿರುವ ಕೆ.ಎಸ್.ಈಶ್ವರಪ್ಪ ಅವರ ಶಿಕಾರಿಪುರದ ಚುನಾವಣಾ ಕಚೇರಿ ಮುಂದೆ ವಾಮಾಚಾರ ನಡೆದಿರುವುದು ಬೆಳಕಿಗೆ ಬಂದಿದ್ದು ಈ ಕುರಿತು ಈಶ್ವರಪ್ಪ…
ಹೊಸನಗರ : ಈ ಬಾರಿಯ ಚುನಾವಣೆ ಭಾಗ್ಯ ಗ್ಯಾರಂಟಿಗಳ ಮೂಲಕ ಜನರನ್ನು ಸೆಳೆಯುವ ಚುನಾವಣೆಯಲ್ಲ, ಹಾಡು ಡ್ಯಾನ್ಸ್ ಮೂಲಕ ಲೋಕಸಭೆಗೆ…