Categories: Chikkamagaluru

ಕುಮಾರಸ್ವಾಮಿಯನ್ನೇ ಸಿಎಂ ಮಾಡುತ್ತೇವೆಂದು ಯಾರ್ಯಾರು ಬಂದು ಕಾಲು ಹಿಡಿಯುತ್ತಾರೋ ಗೊತ್ತಿಲ್ಲ, ಕಾಲು ಹಿಡಿಯೋದಂತೂ ಗ್ಯಾರಂಟಿ ; ಎಸ್.ಎಲ್ ಭೋಜೇಗೌಡ

ಚಿಕ್ಕಮಗಳೂರು: ಸೂರ್ಯ-ಚಂದ್ರ ಹುಟ್ಟುವುದು ಎಷ್ಟು ಸತ್ಯವೋ, ಕುಮಾರಸ್ವಾಮಿ ಸಿಎಂ ಆಗುವುದು ಅಷ್ಟೇ ಸತ್ಯ ಎಂದು ವಿಧಾನಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ವಿಶ್ವಾಸ ವ್ಯಕ್ತಪಡಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿಯನ್ನೇ ಸಿಎಂ ಮಾಡುತ್ತೇವೆಂದು ಯಾರ್ಯಾರು ಬಂದು ಕಾಲು ಹಿಡಿಯುತ್ತಾರೋ ಗೊತ್ತಿಲ್ಲ. ಕಾಲು ಹಿಡಿಯೋದಂತೂ ಗ್ಯಾರಂಟಿ, ದೇವೇಗೌಡರ ಕಾಲಿಡಿಯುತ್ತಾರೆ. ಕುಮಾರಸ್ವಾಮಿಯ ಒಂದು ಇಂಟರ್ ವ್ಯೂ ಕೊಡಿಸಿಯೆಂದು ದೇವೇಗೌಡರ ಕಾಲು ಹಿಡಿಯುತ್ತಾರೆ ಎಂದರು.

ಈ ರಾಜ್ಯದಲ್ಲಿ ಯಡಿಯೂರಪ್ಪ ಇಲ್ಲದಿದ್ದರೆ ಬಿಜೆಪಿ ಬಿಗ್ ಜೀರೋ. ಬಿಜೆಪಿಯಲ್ಲಿ ನೂರು ಜನ ಲೀಡರ್ ಇರಬಹುದು, ಆದರೆ ಬಿಜೆಪಿ ನಿಂತಿರುವುದು ಬಿ.ಎಸ್. ಯಡಿಯೂರಪ್ಪ ಮೇಲೆ. ಸಮ್ಮಿಶ್ರ ಸರ್ಕಾರ ಮಾಡದಿದ್ದರೆ ಬಿ.ಎಸ್.ವೈ ಬಿಜೆಪಿಯಲ್ಲಿ ಇಷ್ಟು ಪ್ರಭಾವಿ ಆಗುತ್ತಿರಲಿಲ್ಲ. ದಕ್ಷಿಣ ಭಾರತದಲ್ಲಿ ಬಿಜೆಪಿ ಬಾಗಿಲು ತೆಗಿಯಲು ಅಂದಿನ ಸಮ್ಮಿಶ್ರ ಸರ್ಕಾರವೇ ಕಾರಣ. ಆದರೆ, ಇಂದು ಅದೇ ಪಕ್ಷದವರು ದಕ್ಷಿಣ ಭಾರತದಲ್ಲಿ ಬಿಜೆಪಿ ಬಾಗಿಲು ತೆಗೆದವರನ್ನು ಮನೆಗೆ ಕಳಿಸಿದ್ದಾರೆ ಎಂದರು.

ಹಾಸನದಲ್ಲಿ ಪಕ್ಷ ಬಿಡುತ್ತೇವೆಂದು ಹೇಳಿದವರದ್ದು ಎರಡು ವರ್ಷದ ಧಾರಾವಾಹಿ. ಅರಸೀಕೆರೆ, ಅರಕಲಗೂಡಿಗೆ ಅಭ್ಯರ್ಥಿಗಳಿದ್ದಾರೆ, ಜೆಡಿಎಸ್ ಬಿಟ್ಟು ನೂರಾರು ಜನ ಬಿಟ್ಟು ಹೋಗಿದ್ದಾರೆ, ಆದರೂ 37 ಸೀಟು ಗೆದ್ದಿಲ್ವಾ ಎಂದು ಎಸ್.ಎಲ್.ಭೋಜೇಗೌಡ ಹೇಳಿದರು.

Malnad Times

Recent Posts

ನೈರುತ್ಯ ಶಿಕ್ಷಕರ, ನೈರುತ್ಯ ಪದವೀಧರರ ಕ್ಷೇತ್ರಗಳಿಗೆ ಜೂ. 03 ರಂದು ಚುನಾವಣೆ | ಮತದಾರರ ಪಟ್ಟಿಗೆ ಹೆಸರು ನೊಂದಾಯಿಸಲು ಮೇ 6 ಕಡೆಯ ದಿನ

ಚಿಕ್ಕಮಗಳೂರು : ಕರ್ನಾಟಕ ವಿಧಾನ ಪರಿಷತ್ತಿನ ನೈರುತ್ಯ ಪದವೀಧರರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರಗಳಿಗೆ ಜೂನ್ 03 ರಂದು…

9 hours ago

ಆನೆ ದಾಳಿಯಿಂದ ಮೃತನಾದ ರೈತನ ಕುಟುಂಬಕ್ಕೆ 24 ಗಂಟೆಯೊಳಗೆ ಪರಿಹಾರ ನೀಡದಿದ್ದಲ್ಲಿ ಸರ್ಕಾರಕ್ಕೆ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಹಾಲಪ್ಪ

ರಿಪ್ಪನ್‌ಪೇಟೆ: ಇಂದು ಬೆಳಗ್ಗೆ ದರಗೆಲೆ ತರಲು ಕಾಡಿಗೆ ತೆರಳಿದ್ದ ರೈತ ತಿಮ್ಮಪ್ಬ ಎಂಬ ರೈತ ಆನೆ ದಾಳಿಗೆ ಬಲಿಯಾಗಿದ್ದು ಮೃತ…

9 hours ago

Arecanut Today Price | ಮೇ 03ರ ಅಡಿಕೆ ರೇಟ್

ಹೊಸನಗರ : ಮೇ 03 ಶುಕ್ರವಾರ ನಡೆದ ಹೊಸನಗರ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.

10 hours ago

ಶ್ರದ್ದಾಭಕ್ತಿಯ ನಾಮಸ್ಮರಣೆಗೆ ದೇವರ ಒಲುಮೆಯಿದೆ ; ಶ್ರೀಗಳು

ರಿಪ್ಪನ್‌ಪೇಟೆ: ಭಕ್ತರು ಭಕ್ತಿಯಿಂದ ಪ್ರಾರ್ಥಿಸಿದರೆ ದೇವರು ನಮ್ಮ ಹೃದಯಗಳಲ್ಲಿ ನೆಲೆಸುತ್ತಾನೆ. ಶ್ರದ್ದಾಭಕ್ತಿಯಿಂದ ಭಗವಂತನ ನಾಮಸ್ಮರಣೆ ಮಾಡಿದರೆ ಶಾಂತಿ ನೆಮ್ಮದಿ ಕರುಣಿಸುತ್ತಾನೆಂದು…

11 hours ago

ರಿಪ್ಪನ್‌ಪೇಟೆ ಸೇರಿದಂತೆ ಸುತ್ತಮುತ್ತಲಿನ ಈ ಗ್ರಾಮಗಳಲ್ಲಿ ನಾಳೆ ಕರೆಂಟ್ ಇರಲ್ಲ !

ರಿಪ್ಪನ್‌ಪೇಟೆ : ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಿನ್ನಲೆಯಲ್ಲಿ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿ ನಿಮಿತ್ತ ಮೇ…

14 hours ago

ಮೊಬೈಲ್ ಟವರ್ ನಿರ್ಮಾಣದ ಭರವಸೆ, ಚುನಾವಣೆ ಬಹಿಷ್ಕಾರ ಕೈಬಿಟ್ಟ ವಾರಂಬಳ್ಳಿ ಗ್ರಾಮಸ್ಥರು

ಹೊಸನಗರ: ತಾಲ್ಲೂಕಿನ ವಾರಂಬಳ್ಳಿಯ ಗ್ರಾಮಸ್ಥರು ತಮ್ಮ ಗ್ರಾಮದಲ್ಲಿ ಮೊಬೈಲ್ ಟವರ್ ನಿರ್ಮಾಣಕ್ಕೆ ಮನವಿ ಮಾಡಿಕೊಂಡಿದ್ದು ಈವರೆಗೂ ಬೇಡಿಕೆ ಈಡೇರದೆ ಚುನಾವಣೆ…

16 hours ago