ಚಿಕ್ಕಮಗಳೂರು : ಕ್ರಿಕೆಟ್ ಆಡಲು ಬಂದಿದ್ದ ಕೊಡಗು ಜಿಲ್ಲೆ ಸೋಮವಾರಪೇಟೆಯ ಪಶುವೈದ್ಯ ಹೃದಯಾಘಾತದಿಂದ ಕ್ರೀಡಾಂಗಣದಲ್ಲಿ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ.
ಚಿಕ್ಕಮಗಳೂರು ನಗರದ ಸುಭಾಷ್ ಚಂದ್ರ ಬೋಸ್ ಜಿಲ್ಲಾ ಆಟದ ಮೈದಾನದಲ್ಲಿ ವಿಭಾಗ ಮಟ್ಟದ ಕ್ರಿಕೆಟ್ ಕ್ರೀಡಾಕೂಟ ಆಯೋಜಿಸಲಾಗಿತ್ತು. ಕೊಡಗು ಜಿಲ್ಲೆ ಸೋಮವಾರ ಪೇಟೆಯ ಪಶುವೈದ್ಯ ಶಿವಪ್ಪ ಬಾದಾಮಿ ಎಂಬುವರು ಕ್ರಿಕೆಟ್ ಆಡಿ ಪೋಟೋ ಸೆಷನ್ ನಲ್ಲಿ ಪಾಲ್ಗೊಂಡ ನಂತರ ಅಲ್ಲಿಯೇ ಕುಸಿದು ಬಿದ್ದಿದ್ದಾರೆ. ತಕ್ಷಣ ಇತರೆ ವೈದ್ಯರು ತುರ್ತು ಚಿಕಿತ್ಸೆ ನೀಡಿ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮೃತಪಟ್ಟಿದ್ದಾರೆ. ಮೃತದೇಹವನ್ನು ಮಲ್ಲೇಗೌಡ ಸರ್ಕಾರಿ ಜಿಲ್ಲಾಸ್ಪತ್ರೆ ಶವಗಾರದಲ್ಲಿ ಇರಿಸಲಾಗಿದೆ.
ಮೈಸೂರು ವಿಭಾಗ ಮಟ್ಟದ ಪಶುವೈದ್ಯರ ಕ್ರೀಡಾಕೂಟಕ್ಕೆ ಏಳು ಜಿಲ್ಲೆಗಳ 12 ತಂಡಗಳು ಆಗಮಿಸಿದ್ದವು. ಚಿಕ್ಕಮಗಳೂರು ಪಶುವೈದ್ಯ ಸಂಘ ಆಯೋಜಿಸಿದ್ದ ಎರಡು ದಿನಗಳ ಕ್ರಿಕೆಟ್ ಕ್ರೀಡಾಕೂಟದಲ್ಲಿ ಭಾಗವಹಿಸಲು ಕೊಡಗು ತಂಡದಿಂದ ಶಿವಪ್ಪ ಬಾದಾಮಿ ಇಂದು ನಗರಕ್ಕೆ ಆಗಮಿಸಿದ್ದರು.
ಒಂದು ಪಂದ್ಯ ಉತ್ಸಾಹದಿಂದ ಆಡಿದ ಅವರು ಗ್ರೂಪ್ ಫೋಟೋ ತೆಗೆಸಿಕೊಳ್ಳುವ ವೇಳೆ ಸ್ಥಳದಲ್ಲಿ ಕುಸಿದು ಬಿದ್ದಿದ್ದಾರೆ. ಮೂಲತಃ ಶಿವಪ್ಪ ಬಾದಾಮಿ ಅವರು ಬೆಳಗಾವಿ ಜಿಲ್ಲೆಯವರಾಗಿದ್ದು, ಅವರ ಹಠಾತ್ ನಿಧನದಿಂದ ಕ್ರೀಡಾಕೂಟವನ್ನು ಸ್ಥಗಿತಗೊಳಿಸಲಾಗಿದೆ. ಈ ಅಕಾಲಿಕ ಮರಣಕ್ಕೆ ಪಶು ವೈದ್ಯರು ಕಂಬನಿ ಮಿಡಿದಿದ್ದಾರೆ.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…