ಗೃಹಿಣಿ ಶ್ವೇತಾ ಅನುಮಾನಾಸ್ಪದ ಸಾವಿಗೆ ಬಿಗ್ ಟ್ವಿಸ್ಟ್

ಮೂಡಿಗೆರೆ : ನಿನ್ನೆ ಮೂಡಿಗೆರೆ ತಾಲ್ಲೂಕಿನ ದೇವವೃಂದ ಗ್ರಾಮದಲ್ಲಿ ಅನುಮಾನಾಸ್ಪವಾಗಿ ಗೃಹಿಣಿಯ ಶವ ಪತ್ತೆಗೆ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ದರ್ಶನ್ ಪತ್ನಿ ಶ್ವೇತಾಗೆ ರಾಗಿಮುದ್ದೆಯಲ್ಲಿ ಸೈನೈಡ್ ಹಾಕಿ ಹತ್ಯೆ (Murder) ಗೈದಿದ್ದಾನೆ ಎಂದು ಪೊಲೀಸರು (Police) ತನಿಖೆ ವೇಳೆ ಬಯಲಾಗಿದೆ.

ಶ್ವೇತಾ ಹತ್ಯೆ ಮಾಡಿದ್ದು ನಾನೇ ಎಂದು ದರ್ಶನ್ ತಪೊಪ್ಪಿಕೊಂಡಿದ್ದು, ಅನೈತಿಕ ಸಂಬಂಧಕ್ಕೆ ಅಡ್ಡಲಾಗಿದ್ದ ಹೆಂಡತಿಯನ್ನ ಕೊಲೆ ಮಾಡಿದ್ದೇನೆ. ಪತ್ನಿ ಹೃದಯಾಘಾತದಿಂದ ಮೃತಪಟ್ಟಿದ್ದಾಳೆಂದು ದರ್ಶನ್ ಕಥೆ ಕಟ್ಟಿದ ಎನ್ನಲಾಗುತ್ತಿದೆ. ಪತ್ನಿ ಸಾವನ್ನಪ್ಪಿದ ಬಳಿಕ ಕೈಗೆ ಸೈನೆಡ್ ಇಂಜೆಕ್ಷನ್ ಕೂಡ ಕೊಟ್ಟಿದ್ದಾನೆ. ನಂತರ ಶ್ವೇತಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಅಂತ ಬಿಂಬಿಸುವುದಕ್ಕೆ ಇತರ ಪ್ಲಾನ್ ಹಾಕಿದ್ದಾನೆ. ಆದರೆ ಆತನ ಪ್ಲಾನ್ ಉಲ್ಟಾ ಆಗುವ ಹಂತದಲ್ಲಿ ಹೃದಯಘಾತವಾಗಿದೆ ಎಂದು ಹೇಳಿದ್ದು, ಸಂಬಂಧಿಕರು ಬರೋ ಮುಂಚೆ ಅಂತ್ಯಕ್ರಿಯೆ ಮಾಡಿದ್ದಾನೆ ಎಂದು ತನಿಖೆ ವೇಳೆ ಬೆಳಕಿಗೆ ಬಂದಿದೆ.

ಇದೆ ವೇಳೆ ಬೆಂಗಳೂರು ಮೂಲದ ಅಶ್ವಿನಿ ದರ್ಶನ್ ಸಹೋದ್ಯೋಗಿ ಎಂದು ಹೇಳಲಾಗುತ್ತಿದ್ದು ಪೊಲೀಸರು ಇದೀಗ ಆಕೆಗಾಗಿ ಹುಡುಕಾಟ ನಡೆಸುತ್ತಿದ್ದು ಅಶ್ವಿನಿ ಜೊತೆ ದರ್ಶನ್ ಅನೈತಿಕ ಸಂಬಂಧ ಹೊಂದಿದ ಎನ್ನಲಾಗುತ್ತಿದ್ದು ಅಶ್ವಿನಿಗೆ ಶ್ವೇತಾ ಕಾಲ್ ಮಾಡಿ ಎಚ್ಚರಿಕೆ ಕೂಡ ನೀಡಿದ್ದಾಳೆ ಎಂದು ಹೇಳಲಾಗುತ್ತಿದ್ದು ವಾರ್ನಿಂಗ್ ಮಾಡಿದ ಆಡಿಯೋ ತನ್ನ ತಮ್ಮನಿಗೆ ಶ್ವೇತಾ ಕಳಿಸಿದ್ದಳು ಎಂದು ತಿಳಿದುಬಂದಿದೆ.

Malnad Times

Recent Posts

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

41 mins ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

1 hour ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

8 hours ago

Rain Alert | ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆ ಸಾಧ್ಯತೆ

ಬೆಂಗಳೂರು: ಮುಂದಿನ 48 ಗಂಟೆಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆಯಾಗುವ (Heavy Rain) ಸಾಧ್ಯತೆ…

9 hours ago

ಕಾಫಿನಾಡಿನಲ್ಲಿ ಆಲಿಕಲ್ಲು ಸಹಿತ ಗುಡುಗು, ಸಿಡಿಲಬ್ಬರದಿಂದ ಸುರಿದ ಭಾರಿ ಮಳೆ

ಚಿಕ್ಕಮಗಳೂರು: ಕಳೆದ ಹಲವು ದಿನಗಳಿಂದ ಬೇಸಿಗೆಯ ಬಿಸಿ ಗಾಳಿಯಿಂದ ಕಂಗೆಟ್ಟಿದ್ದ ಜನರಿಗೆ ಮಂಗಳವಾರ ಮಧ್ಯಾಹ್ನ ಆಲಿಕಲ್ಲು ಸಹಿತ ಗುಡುಗು, ಸಿಡಿಲಬ್ಬರದಿಂದ ಭಾರಿ…

10 hours ago

ಪತಿ ಸಾವಿನ ನೋವಿನಲ್ಲೂ ಮತದಾನ ಮಾಡಿದ ಮಹಿಳೆ !

ತೀರ್ಥಹಳ್ಳಿ : ಪತಿ ಸಾವಿನ ನೋವಿನಲ್ಲೂ ಮತಗಟ್ಟೆ ಕೇಂದ್ರಕ್ಕೆ ಆಗಮಿಸಿ ಮಹಿಳೆ ಮತದಾನ ಮಾಡಿರುವಂತಹ ಘಟನೆ ಗುಡ್ಡೇಕೊಪ್ಪ ಗ್ರಾಪಂ ವ್ಯಾಪ್ತಿಯ…

20 hours ago