Categories: Chikkamagaluru

ಚಿಕ್ಕಮಗಳೂರು ಜಿಲ್ಲೆ ಪ್ರವಾಸೋದ್ಯಮ ಅಭಿವೃದ್ಧಿಗೆ ಪ್ರಸಿದ್ದವಾದ ಸ್ಥಳ, ಕಿರು ವಿಮಾನ ನಿಲ್ದಾಣದ ಅಗತ್ಯವಿದೆ


ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆ ಪ್ರವಾಸೋದ್ಯಮ ಅಭಿವೃದ್ಧಿಗೆ ಹಾಗೂ ಪ್ರಸಿದ್ದವಾದ ಪ್ರೇಕ್ಷಣೀಯ ಮತ್ತು ಪುಣ್ಯ ಕ್ಷೇತ್ರಗಳಿದ್ದು, ಪ್ರತಿ ವರ್ಷ ಹೊರ ರಾಜ್ಯದ ಹಾಗೂ ವಿದೇಶಿ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಅಗಮಿಸುವುರಿಂದ ಕಿರು ವಿಮಾನ ನಿಲ್ದಾಣದ ಅಗತ್ಯವಿದೆ ಎಂದು ಕರ್ನಾಟಕ ರಾಜ್ಯ ಕೈಗಾರಿಕೆ ಮತ್ತು ಮೂಲ ಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತ ವ್ಯವಸ್ಥಾಪಕ ನಿರ್ದೇಶಕರಾದ ಡಾ|| ಎಂ.ಆರ್. ರವಿ ಹೇಳಿದ್ದಾರೆ.


ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಏರ್ ಸ್ಟ್ರಿಪ್ ಅಭಿವೃದ್ಧಿ ಪಡಿಸುವ ಸಭೆಯ ಅಧ್ಯಕ್ಷತೆ ವಹಿಸಿ ಮಾತಾನಾಡುತ್ತಿದ್ದ ಅವರು ಜಿಲ್ಲೆಯಲ್ಲಿ ನಗರದ ಅಂಬಲೆ ಕೈಗಾರಿಕ ಪ್ರದೇಶದ ಸಮೀಪ ಗುರುತಿಸಲಾಗಿರುವ ಸುಮಾರು 105 ಎಕರೆ ಸರ್ಕಾರಿ ಜಮೀನು ಈಗಾಗಲೇ ಗುರುತಿಸಲಾಗಿದ್ದು ಪಕ್ಕದ ಸುಮಾರು 19 ಎಕರೆ ಜಮೀನು ಖಾಸಗಿಯಾಗಿದ್ದು ಇದನ್ನು ಭೂಸ್ವಾಧೀನ ಪ್ರಕ್ರೀಯೆ ಪೂರ್ಣಗೊಳಿಸುವ ಹಂತದಲ್ಲಿದ್ದು ಶೀರ್ಘವಾಗಿ ಭೂಸ್ವಾಧೀನ ಪ್ರಕ್ರೀಯೆ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದ ಅವರು ನೇರವಾಗಿ ರೈತರಿಂದ ಖರೀದಿಸಲಾಗುವುದು ಎಂದರು.


ಕಿರು ವಿಮಾನ ನಿಲ್ದಾಣಕ್ಕೆ ಸರ್ಕಾರ 2018ರಲ್ಲಿ ಅನುಮತಿ ನೀಡಿದ್ದು ಕಾರ್ಯ ಸಾಧ್ಯತೆ ಪಟ್ಟಿಯಲ್ಲಿ ಚಿಕ್ಕಮಗಳೂರು ಜಿಲ್ಲೆ ಸೇರ್ಪಡೆಯಾಗಿದೆ ಎಂದ ಅವರು ಕೇಂದ್ರ ಮತ್ತು ರಾಜ್ಯ ಸರ್ಕಾರದ ನಿಯಮದಂತೆ ಅಭಿವೃದ್ಧಿ ಪಡಿಸಲು ಕೆಎಸ್‌ಐಐಡಿಸಿಗೆ ವಹಿಸಲಾಗಿದ್ದು 10 ಕೋಟಿ ರೂ.ಗಳು ಮಂಜೂರಾಗಿದ್ದು ಈಗಾಗಲೇ 7 ಕೋಟಿ ರೂ.ಗಳು ಬಿಡುಗಡೆಯಾಗಿದೆ ಹೆಲಿ ಪೋರ್ಟ್ ಹಾಗೂ ಕಿರು ವಿಮಾನ ಈವೆರಡನ್ನು ಅವಲಂಬಿಸಿ 2022-23 ರಲ್ಲಿ ಚಿಕ್ಕಮಗಳೂರು, ರಾಯಚೂರು ಹಾಗೂ ಹಂಪಿಯಲ್ಲಿ ನಿರ್ವಹಿಸಲು ಸರ್ಕಾರ ಆದೇಶ ನೀಡಿ ಹಾಗೂ ಮಂಜೂರು ಮಾಡಿದೆ ಎಂದರು.


2023-24 ಆಯವ್ಯಯದಲ್ಲಿ ಜಿಲ್ಲೆಯಲ್ಲಿ ಏರ್ ಸ್ಟ್ರಿಪ್ ಅಭಿವೃದ್ಧಿ ಪಡಿಸಲು 120-22 ಎಕರೆ ಏರ್ ಸ್ಟ್ರಿಪ್‌ಗಾಗಿ ಕಾಯ್ದಿರಿಸಲಾಗಿದ್ದು 1200 ಮೀಟರ್ ರನ್ ವೇಗೆ ಅಗತ್ಯವಿರುವ ಭೂಮಿಯನ್ನು ಸ್ವಾಧಿನಪಡಿಕೊಳ್ಳಲಾಗಿದೆ ಇದರ ಡಿಪಿಆರ್ ನ್ನು ಸಿದ್ದಪಡಿಸಲು ಮೆ|| ಪವನ್ ಹನ್ಸ್. ಲಿ. ಸಂಸ್ಥೆಯನ್ನು ನೇಮಿಸಲಾಗಿದೆ ಮುಂದಿನ 18 ರಿಂದ 20 ತಿಂಗಳಲ್ಲಿ ಎಲ್ಲ ಕಾಮಗಾರಿಗಳು ಪೂರ್ಣಗೊಳಿಸಲು ಸಿದ್ದತೆಯನ್ನು ಮಾಡಿಕೊಳ್ಳಲಾಗಿದೆ ಮುಂದಿನ ದಿನಗಳಲ್ಲಿ ಪ್ರವಾಸಿಗರಿಗೆ ಕಿರು ವಿಮಾನ ನಿಲ್ದಾಣ ಹೆಲಿ ಪೋರ್ಟ್ ತುಂಬ ಅನುಕೂಲವಾಗಲಿದೆ ಎಂದರು.


ಜಿಲ್ಲಾಧಿಕಾರಿ ಮೀನಾ ನಾಗರಾಜ್. ಸಿ.ಎನ್ ಅವರು ಸರ್ಕಾರಿ ಜಮೀನು ಬಿಟ್ಟು ಉಳಿದ ಖಾಸಗಿ ಜಮೀನುಗಳಲ್ಲಿ ಭೂಸ್ವಾಧಿನ ಪಡಿಸಿಕೊಳ್ಳಲು ವಿವಿಧ ಬೆಳೆಗಳಿದ್ದು ಇತರೆ ಮರಗಳನ್ನು ತೆರವುಗೊಳಿಸಲು ಅರಣ್ಯ ಇಲಾಖೆಗೆ ಸೂಚಿಸಲಾಗಿದೆ ಎಂದ ಅವರು ರೈತರ ಜಮೀನು, ಬೆಳೆಗಳ ದರ ನಿಗದಿಪಡಿಸಲು ಕ್ರಮಕೈಗೊಳ್ಳಲಾಗಿದೆ ಜಿಲ್ಲೆಗೆ ಆದಷ್ಟು ಬೇಗ ಹೆಲಿಪೋರ್ಟ್, ಕಿರು ವಿಮಾನ ನಿಲ್ದಾಣ ಪ್ರಾರಂಭಿಸಲು ಎಲ್ಲಾ ರೀತಿಯ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದರು.


ಸಭೆಗೂ ಮುನ್ನ ಅಧಿಕಾರಿಗಳ ತಂಡ ಹಾಗೂ ತಂತ್ರಜ್ಞಾನ ಸಮಿತಿ ಸದಸ್ಯರು ಭೇಟಿ ನೀಡಿ ಪರಿಶೀಲಿಸಿದರು.
ಕಾರ್ಯಾನಿರ್ವಾಹಕ ಅಧಿಕಾರಿ ಪ್ರಕಾಶ್, ಉಪವಿಭಾಗಾಧಿಕಾರಿ ರಾಜೇಶ್, ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕರಾದ ಸಿದ್ದರಾಜು, ರವಿಪ್ರಸಾದ್, ತಹಶೀಲ್ದಾರ್ ಡಾ|| ಸುಮಂತ್ ಹಾಗೂ ಅನುಷ್ಠನಾಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ-2023
ಚಿಕ್ಕಮಗಳೂರು: ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ-2023ರನ್ನು ಸೆಪ್ಟೆಂಬರ್ 11ರಂದು ಬೆ.8:45 ಗಂಟೆಗೆ ಹಮ್ಮಿಕೊಳ್ಳಾಗಿದೆ ಚಿಕ್ಕಮಗಳೂರು ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಉಪೇಂದ್ರ ಪ್ರವಾಸ್ ಸಿಂಗ್ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಜಿಲ್ಲಾಧಿಕಾರಿ ಮೀನಾ ನಾಗರಾಜ್, ಜಿಲ್ಲಾ ಪಂಚಾಯತ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ|| ಬಿ. ಗೋಪಾಲಕೃಷ್ಣ, ಜಿಲ್ಲಾ ಪೊಲೀಸ್ ಅಧೀಕ್ಷಕರು, ಡಾ|| ವಿಕ್ರಂ ಅಮ್ಟೆ ಮುಂತಾದವರು ವಿಶೇಷ ಆಹ್ವಾನಿತರಾಗಿ ಆಗಮಿಸುವರು.

ಸಾಮಾನ್ಯ ಸಭೆ
ಚಿಕ್ಕಮಗಳೂರು: ನಗರಸಭೆಯ ಸಾಮಾನ್ಯ ಸಭೆ ನಗರಸಭೆ ಅಧ್ಯಕ್ಷ ವೇಣುಗೋಪಾಲ್ ಅವರ ಅಧ್ಯಕ್ಷತೆಯಲ್ಲಿ ಸೆ.12 ರಂದು ಮಂಗಳವಾರ ಬೆಳಗ್ಗೆ 11:30 ಗಂಟೆಗೆ ನಗರಸಭಾ ಸಭಾಂಗಣದಲ್ಲಿ ನಡೆಯಲಿದೆ ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

8 hours ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

12 hours ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

12 hours ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

14 hours ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

15 hours ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

22 hours ago