ಚಿಕ್ಕಮಗಳೂರು ; ನೂತನ ಎಸ್ಪಿಯಾಗಿ ಅಮಾತೆ ವಿಕ್ರಂ ನೇಮಕ
ಚಿಕ್ಕಮಗಳೂರು : ಜಿಲ್ಲೆಯಲ್ಲಿ ಎರಡು ವರ್ಷಗಳಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕಾರ್ಯನಿರ್ವ ಹಿಸುತ್ತಿದ್ದ ಉಮಾ ಪ್ರಶಾಂತ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಮಂಗಳವಾರ ಆದೇಶ ಹೊರಡಿ ಸಿದ್ದು, ಜಿಲ್ಲೆಯ ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಅಮಾತೆ ವಿಕ್ರಂ ಅವರನ್ನು ನೇಮಿಸಿದೆ.
2021ನೇ ಸಾಲಿನ ಐಪಿಎಸ್ ಬ್ಯಾಚ್ನ ಅಧಿಕಾರಿಯಾಗಿರುವ ಅಮಾತೆ ವಿಕ್ರಂ ಅವರನ್ನು ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ನಿಯುಕ್ತಿಗೊಳಿಸಿ ರಾಜ್ಯ ಸರ್ಕಾರದ ಆಡಳಿತ ಸುಧಾರಣೆ ಇಲಾಖೆ ಅಧೀನ ಕಾರ್ಯದರ್ಶಿ ನಾಗಪ್ಪ ಎಸ್. ಪರೀತ್ ಅವರು ಆದೇಶ ಹೊರಡಿಸಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಉಮಾ ಪ್ರಶಾಂತ್ ಅವರನ್ನು ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಿಸಲಾಗಿದೆ.
ಈ ಹಿಂದೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದ ಅಕ್ಷಯ್ ಹಾಕೆ ಅವರ ವರ್ಗಾವಣೆ ಬಳಿಕ ಉಮಾ ಪ್ರಶಾಂತ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ನಿಯೋಜನೆಗೊಂಡು ಎರಡು ವರ್ಷಗಳ ಕಾಲ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸಿದ್ದಾರೆ.