ಚಿಕ್ಕಮಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಕಾರ್ಯದರ್ಶಿಯಾಗಿ ಸಂಪತ್ ಕುಮಾರ್, ಉಪಾಧ್ಯಕ್ಷರಾಗಿ ಪ್ರಸನ್ನ ನೇಮಕ

0 148

ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಡಾ.ಕೆ.ಪಿ.ಅಂಶುಮಂತ್ ಅವರ ಆದೇಶದ ಮೇರೆಗೆ ಚಿಕ್ಕಮಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿಯಾಗಿ ಸಂಪತ್ ಕುಮಾರ್ ಹಾಗೂ ಉಪಾಧ್ಯಕ್ಷರಾಗಿ ಪ್ರಸನ್ನ ಶಿರವಾಸೆ ಇವರನ್ನು ನೇಮಕ ಮಾಡಲಾಗಿದೆ.

ಜಿಲ್ಲಾ ಮತ್ತು ಬ್ಲಾಕ್ ಕಾಂಗ್ರೆಸ್ ಸಮಿತಿಯ ಹಿರಿಯ ನಾಯಕರ ಮಾರ್ಗದರ್ಶನದಲ್ಲಿ ಕಾಂಗ್ರೆಸ್ ಪಕ್ಷವನ್ನು ಸದೃಢಗೊಳಿಸಲು ತಾವುಗಳು ಶ್ರಮಿಸುತ್ತೀರಿ ಎಂದು ಹೆಚ್ಚಿನ ಜವಾಬ್ದಾರಿಯನ್ನು ತಮಗೆ ವಹಿಸಲಾಗಿದೆ ಎಂದು ಚಿಕ್ಕಮಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹೆಚ್.ಪಿ.ಮಂಜೇಗೌಡ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಶಾಸಕ ಹೆಚ್.ಡಿ.ತಮ್ಮಯ್ಯ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಲ್.ಮೂರ್ತಿ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ.ಸಿ.ಶಿವಾನಂದಸ್ವಾಮಿ, ನಗರಸಭಾ ಸದಸ್ಯ ಪರಮೇಶ್ ರಾಜ್ ಅರಸ್, ಮುಖಂಡರಾದ ಕೋಟೆ ಆನಂದ್, ಶ್ರೀನಿವಾಸ್ ದೇವಾಂಗ, ಸುನೀಲ್ ಕುಮಾರ್, ಉಮೇಶ್ ಶೆಟ್ಟಿ ಇದ್ದರು.


ಎನ್‌ಎಸ್‌ಯುಐ ವತಿಯಿಂದ ಸ್ಥಾಪನಾ ದಿನಾಚರಣೆ

ಚಿಕ್ಕಮಗಳೂರು : ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (ಎನ್‌ಎಸ್‌ಯುಐ) ದ 54ನೇ ಸ್ಥಾಪನಾ ದಿನಾಚರಣೆ ಅಂಗವಾಗಿ ಎನ್‌ಎಸ್‌ಯುಐ ವತಿಯಿಂದ ಮಂಗಳವಾರ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಧ್ವಜಾರೋಹಣ ನೆರವೇರಿಸಲಾಯಿತು.


ನಂತರ ಎನ್‌ಎಸ್‌ಯುಐ ಜಿಲ್ಲಾಧ್ಯಕ್ಷ ಸುಮಂತ್ ಬಿ.ಟಿ ನೇತೃತ್ವದಲ್ಲಿ ನಗರದ ಹೆರಿಗೆ ಮತ್ತು ಮಕ್ಕಳ ಆಸ್ಪತ್ರೆಯಲ್ಲಿರುವ ರೋಗಿಗಳಿಗೆ ಹಣ್ಣು, ಹಂಪಲು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಎನ್‌ಎಸ್‌ಯುಐ ರಾಜ್ಯ ಉಪಾಧ್ಯಕ್ಷ ಸಿ.ಕೆ.ಶ್ರೀಕಾಂತ್, ರಾಜ್ಯ ಕಾರ್ಯದರ್ಶಿ ಆದಿಲ್, ಜಿಲ್ಲಾ ಉಪಾಧ್ಯಕ್ಷ ದೃವಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸೀಮಾ ಬಾನು, ಜಿಲ್ಲಾ ಕಾರ್ಯದರ್ಶಿಗಳಾದ ರಾಹುಲ್, ಭೂಮಿಕಾ, ಸೌಂದರ್ಯ, ಚೇತನ್, ಲುಕಿತ್, ಚಿಕ್ಕಮಗಳೂರು ವಿಧಾನಸಭಾ ಅಧ್ಯಕ್ಷ ದರ್ಶನ್ ಸೇರಿದಂತೆ ಮತ್ತಿತರರು ಇದ್ದರು.

Leave A Reply

Your email address will not be published.

error: Content is protected !!