ಚೈತ್ರಾ ಕುಂದಾಪುರ ವಂಚನೆ ಪ್ರಕರಣ ; ಚಿಕ್ಕಮಗಳೂರಿಗೆ ಸಿಸಿಬಿ ಪೊಲೀಸರ ತಂಡ, ಸ್ಥಳ ಮಹಜರು

0 447

ಚಿಕ್ಕಮಗಳೂರು : ಉದ್ಯಮಿ, ಬಿಜೆಪಿ ಮುಖಂಡ ಗೋವಿಂದ ಬಾಬು ಪೂಜಾರಿಗೆ ಎಂಎಲ್‌ಎ ಟಿಕೆಟ್‌ ನೀಡುವುದಾಗಿ ಕೋಟ್ಯಂತರ ರೂಪಾಯಿ ವಂಚಿಸಿದ ಪ್ರಕರಣ ತನಿಖೆಯನ್ನು ಕೈಗೆತ್ತಿಕೊಂಡ ಸಿಸಿಬಿ ಅಧಿಕಾರಿಗಳ ತಂಡ ಮಂಗಳವಾರ ಚಿಕ್ಕಮಗಳೂರಿಗೆ ಬಂದಿದ್ದು ಸ್ಥಳ ಮಹಜರು ನಡೆಸಿದ್ದಾರೆ.

ಕೋಟ್ಯಂತರ ರೂಪಾಯಿ ವಂಚನೆ ಪ್ರಕರಣದ ಪ್ರಮುಖ ಸಭೆಗಳು ನಡೆದಿದೆ ಎನ್ನಲಾದ ಚಿಕ್ಕಮಗಳೂರಿನ ಐಬಿಗೆ ಸ್ಥಳ ಪರಿಶೀಲನೆ ಗೆ ಗಗನ್ ಕಡೂರು ನನ್ನು ಕರೆದುಕೊಂಡು ಬಂದು ಪರಿಶೀಲನೆ ನಡೆಸಿದರು.

ಚಿಕ್ಕಮಗಳೂರಿನ ಇದೇ ಪ್ರವಾಸಿ ಮಂದಿರದಲ್ಲಿ ಎರಡನೇ ಮಿಟಿಂಗ್ ನಡೆಸಿ ಬಳಿಕ ವಿಶ್ವನಾಥ್ ಜಿ ಬೇಟಿ ಮಾಡಿಸಿದ್ದ ಚೈತ್ರಾ ಗ್ಯಾಂಗ್ ಈ ನಿಟ್ಟಿನಲ್ಲಿ ಸಿಸಿಬಿ ತಂಡ ಸ್ಥಳ ಮಹಜರು ನಡೆಸಿದ್ದು ಇದಾದ ಬಳಿಕ ಗಗನ್ ಮನೆಗೂ ತೆರಳಿ ಮಾಹಿತಿ ಸಂಗ್ರಹಿಸಲಿದ್ದು ಅದಾದ ಬಳಿಕ ಇಲ್ಲಿನ ಸೂಲನ್ ಗೂ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ ಎನ್ನಲಾಗಿದೆ.

Leave A Reply

Your email address will not be published.

error: Content is protected !!