Categories: Chikkamagaluru

ಡಿಕೆಶಿ ರವರ ಹೇಳಿರುವ ಲಿಂಗಾಯತರ ಡ್ಯಾಂ ಒಡೆದಿದೆ ಎಂದರೆ, ನಿಮ್ಮ ಒಗ್ಗಟ್ಟನ್ನು ಒಡೆದಿದ್ದೇವೆ ಎಂದರ್ಥ ; ಸಿ.ಟಿ. ರವಿ

ಚಿಕ್ಕಮಗಳೂರು: ಲಿಂಗಾಯತರ ಡ್ಯಾಂ ಒಡೆದಿದೆ ಎಂದು ಡಿ. ಕೆ. ಶಿವಕುಮಾರ್ ಹೇಳಿರುವ ಮಾತಿನ ಅರ್ಥ ಲಿಂಗಾಯತರನ್ನು ಪ್ರಸಂಶೆ ಮಾಡಿದ್ದಲ್ಲ. ನಿಮ್ಮ ಒಗ್ಗಟ್ಟನ್ನು ಒಡೆದಿದ್ದೇವೆ ಎಂದರ್ಥ. ಇಡೀ ಲಿಂಗಾಯತರನ್ನು ಮಹಾ ಭ್ರಷ್ಟರು ಎಂದು ಸಿದ್ದರಾಮಯ್ಯ ಹೇಳಿದರು ಇದೆಲ್ಲವನ್ನೂ ಪಕ್ಷದ ವೀರಶೈವ-ಲಿಂಗಾಯತ ಸಮಾಜಕ್ಕೆ ಮನವರಿಕೆ ಮಾಡಬೇಕು ಎಂದು ಚಿಕ್ಕಮಗಳೂರು ಬಿಜೆಪಿ ಅಭ್ಯರ್ಥಿ ಸಿ.ಟಿ. ರವಿ ಕರೆ ನೀಡಿದರು.


ಪಕ್ಷದ ಜಿಲ್ಲಾ ಕಚೇರಿಯಲ್ಲಿ ವೀರಶೈವ- ಲಿಂಗಾಯತ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ‌ವೀರಶೈವ, ಲಿಂಗಾಯತ ಎಂದು ಒಡೆದಾಳುವ ಕೆಲಸ ಮಾಡಿದ್ದು ಕಾಂಗ್ರೆಸ್ ಪಕ್ಷ. ಇದೆಲ್ಲವೂ ಮುನ್ನೆಲೆಗೆ ಬರಬೇಕು. ಇದರ ಜೊತೆಗೆ ಕ್ಷೇತ್ರದಲ್ಲಿ ನಾವು ಮಾಡಿದ ಅಭಿವೃದ್ಧಿ ವಿಚಾರಗಳನ್ನೂ ಜನರ ಮುಂದಿಡಬೇಕು ಎಂದು ತಿಳಿಸಿದರು.


ಯಡಿಯೂರಪ್ಪ ವಿಜಯ ಸಂಕಲ್ಪ ಯಾತ್ರೆಗೆ ಬರುವುದೇ ಇಲ್ಲ ಎಂದು ಕಾಂಗ್ರೆಸ್‍ನವರು ಪ್ರಚಾರ ಮಾಡಿದರು. ಆದರೆ ಅವರು ಬಂದರು. ಐದಕ್ಕೆ ಐದೂ ಕ್ಷೇತ್ರವನ್ನು ಗೆಲ್ಲಿಸ ಬೇಕು ಎಂದು ಯಡಿಯೂರಪ್ಪ ಕರೆ ನೀಡಿದರೆ, ಇದೇ ಕಾಂಗ್ರೆಸಿಗರು ಯಾರ ಹೆಸರನ್ನೂ ಅವರು ಹೇಳಲೇ ಇಲ್ಲ ಎಂದು ಕೊಂಕು ಮಾತನಾಡಿದರು. ಆದರೆ ಅಂದು ಯಾರು ಅಭ್ಯರ್ಥಿ ಎನ್ನುವುದು ಇನ್ನು ತೀರ್ಮಾನವೇ ಆಗಿರಲಿಲ್ಲ. ಯಡಿಯೂರಪ್ಪ ಅವರು ಪಾರ್ಲಿಮೆಂಟರಿ ಬೋರ್ಡ್ ಸದಸ್ಯರು ಅವರು ನನ್ನ ಹೆಸರೊಂದನ್ನೇ ಹೇಳಲು ಸಾಧ್ಯವಿಲ್ಲ. ಹಾಗೆ ಹೇಳಿದ್ದರೆ ಅದನ್ನೂ ವಿವಾದ ಮಾಡುತ್ತಿದ್ದರು ಎಂದರು.


ವಿಜಯೇಂದ್ರ ಅವರು ಬಂದು ಬಿಜೆಪಿಯನ್ನು ಗೆಲ್ಲಿಸಿ ಎಂದು ಹೇಳಿದರು. ಅವರು‌ ನಮ್ಮ ಮಾರ್ಗದರ್ಶಕರು ಎಂದು ಹೇಳಿದರು. ನಮ್ಮ ಅವರ ನಡುವೆ ಉತ್ತಮ ಸಂಬಂಧಗಳಿವೆ. ಆದರೂ ಕಾಂಗ್ರೆಸ್‍ನವರು ಸುಳ್ಳು ಪ್ರಚಾರ ಮಾಡುವ ಪ್ರಯತ್ನ ನಡೆಸಿದ್ದಾರೆ. ಇಂತಹ ಪ್ರಯತ್ನಗಳಿಂದ ಬಿಜೆಪಿ ಮತಗಳಿಗೆ ತೊಂದರೆ ಕೊಡಲು ಸಾಧ್ಯವಿಲ್ಲ ಎಂದರು.


ಬಿಜೆಪಿ ವೀರಶೈವ-ಲಿಂಗಾಯತ ಮುಖಂಡ ಬೀಕನಹಳ್ಳಿ ಸೋಮಶೇಖರ್ ಮಾತನಾಡಿ, ಚುನಾವಣೆ ಘೋಷಣೆ ಆರಂಭದಲ್ಲಿ ಇದ್ದ ಸಣ್ಣ ಗೊಂದಲ ಈಗ ತಿಳಿಯಾಗಿದೆ. ಮುಂದಿನ ಹತ್ತು ದಿನಗಳ ಕಾಲ ನಮ್ಮ ಜವಾಬ್ದಾರಿ ದೊಡ್ಡದಿದೆ. ಕೆಳ ಹಂತದಿಂದ ಕೆಲಸ ಮಾಡ ಬೇಕು ಎಂದು ಕರೆ ನೀಡಿದರು.

Malnad Times

Recent Posts

ನೈರುತ್ಯ ಶಿಕ್ಷಕರ, ನೈರುತ್ಯ ಪದವೀಧರರ ಕ್ಷೇತ್ರಗಳಿಗೆ ಜೂ. 03 ರಂದು ಚುನಾವಣೆ | ಮತದಾರರ ಪಟ್ಟಿಗೆ ಹೆಸರು ನೊಂದಾಯಿಸಲು ಮೇ 6 ಕಡೆಯ ದಿನ

ಚಿಕ್ಕಮಗಳೂರು : ಕರ್ನಾಟಕ ವಿಧಾನ ಪರಿಷತ್ತಿನ ನೈರುತ್ಯ ಪದವೀಧರರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರಗಳಿಗೆ ಜೂನ್ 03 ರಂದು…

8 hours ago

ಆನೆ ದಾಳಿಯಿಂದ ಮೃತನಾದ ರೈತನ ಕುಟುಂಬಕ್ಕೆ 24 ಗಂಟೆಯೊಳಗೆ ಪರಿಹಾರ ನೀಡದಿದ್ದಲ್ಲಿ ಸರ್ಕಾರಕ್ಕೆ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಹಾಲಪ್ಪ

ರಿಪ್ಪನ್‌ಪೇಟೆ: ಇಂದು ಬೆಳಗ್ಗೆ ದರಗೆಲೆ ತರಲು ಕಾಡಿಗೆ ತೆರಳಿದ್ದ ರೈತ ತಿಮ್ಮಪ್ಬ ಎಂಬ ರೈತ ಆನೆ ದಾಳಿಗೆ ಬಲಿಯಾಗಿದ್ದು ಮೃತ…

9 hours ago

Arecanut Today Price | ಮೇ 03ರ ಅಡಿಕೆ ರೇಟ್

ಹೊಸನಗರ : ಮೇ 03 ಶುಕ್ರವಾರ ನಡೆದ ಹೊಸನಗರ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.

9 hours ago

ಶ್ರದ್ದಾಭಕ್ತಿಯ ನಾಮಸ್ಮರಣೆಗೆ ದೇವರ ಒಲುಮೆಯಿದೆ ; ಶ್ರೀಗಳು

ರಿಪ್ಪನ್‌ಪೇಟೆ: ಭಕ್ತರು ಭಕ್ತಿಯಿಂದ ಪ್ರಾರ್ಥಿಸಿದರೆ ದೇವರು ನಮ್ಮ ಹೃದಯಗಳಲ್ಲಿ ನೆಲೆಸುತ್ತಾನೆ. ಶ್ರದ್ದಾಭಕ್ತಿಯಿಂದ ಭಗವಂತನ ನಾಮಸ್ಮರಣೆ ಮಾಡಿದರೆ ಶಾಂತಿ ನೆಮ್ಮದಿ ಕರುಣಿಸುತ್ತಾನೆಂದು…

11 hours ago

ರಿಪ್ಪನ್‌ಪೇಟೆ ಸೇರಿದಂತೆ ಸುತ್ತಮುತ್ತಲಿನ ಈ ಗ್ರಾಮಗಳಲ್ಲಿ ನಾಳೆ ಕರೆಂಟ್ ಇರಲ್ಲ !

ರಿಪ್ಪನ್‌ಪೇಟೆ : ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಿನ್ನಲೆಯಲ್ಲಿ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿ ನಿಮಿತ್ತ ಮೇ…

13 hours ago

ಮೊಬೈಲ್ ಟವರ್ ನಿರ್ಮಾಣದ ಭರವಸೆ, ಚುನಾವಣೆ ಬಹಿಷ್ಕಾರ ಕೈಬಿಟ್ಟ ವಾರಂಬಳ್ಳಿ ಗ್ರಾಮಸ್ಥರು

ಹೊಸನಗರ: ತಾಲ್ಲೂಕಿನ ವಾರಂಬಳ್ಳಿಯ ಗ್ರಾಮಸ್ಥರು ತಮ್ಮ ಗ್ರಾಮದಲ್ಲಿ ಮೊಬೈಲ್ ಟವರ್ ನಿರ್ಮಾಣಕ್ಕೆ ಮನವಿ ಮಾಡಿಕೊಂಡಿದ್ದು ಈವರೆಗೂ ಬೇಡಿಕೆ ಈಡೇರದೆ ಚುನಾವಣೆ…

15 hours ago