ದತ್ತಪೀಠದಲ್ಲಿ ಚಾಲಕನ ನಿಯಂತ್ರಣ ತಪ್ಪಿ 100 ಅಡಿ ಕಂದಕಕ್ಕೆ ಉರುಳಿದ ಪ್ರವಾಸಿ ಬಸ್ ! ಬಾಲಕ ಸಾವು
ಚಿಕ್ಕಮಗಳೂರು: ದತ್ತಪೀಠದಿಂದ ಮಾಣಿಕ್ಯಾಧಾರಕ್ಕೆ ತೆರಳುತ್ತಿದ ಪ್ರವಾಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ 100 ಅಡಿ ಕಂದಕಕ್ಕೆ ಉರುಳಿ ಬಿದ್ದು, ಆರು ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ದತ್ತಪೀಠದಲ್ಲಿ ಬಳಿ ನಡೆದಿದೆ.
ಮೃತ ಬಾಲಕನ್ನು ಮೊಹಮ್ಮದ್ ಸವಾಜ್ (6) ಎಂದು ಗುರುತ್ತಿಸಲಾಗಿದೆ. ತುಮಕೂರು ಜಿಲ್ಲೆ ಶಿರಾ ತಾಲ್ಲೂಕಿನಿಂದ ಮಾಣಿಕ್ಯಾಧಾರ, ದತ್ತಪೀಠ, ಮುಳ್ಳಯ್ಯನಗಿರಿಗೆ ಬಂದಿದ್ದ ಪ್ರವಾಸಿಗರು, ದತ್ತಪೀಠ-ಮಾಣಿಕ್ಯಾಧಾರ ಮಾರ್ಗ ಮಧ್ಯೆ ಚಾಲಕನ ನಿಯಂತ್ರಣ ತಪ್ಪಿ 100 ಅಡಿ ಕಂದಕಕ್ಕೆ ಬಸ್ ಉರುಳಿ ಬಿದ್ದಿದೆ. ಪರಿಣಾಮ 23 ಜನರಿಗೆ ಸಣ್ಣಪುಟ್ಟ ಗಾಯ ಹಾಗೂ 6 ಜನರಿಗೆ ಗಂಭೀರ ಗಾಯವಾಗಿದ್ದು, ಆರು ವರ್ಷದ ಬಾಲಕ ಸಾವನ್ನಪ್ಪಿದ್ದಾನೆ.
ಗಾಯಗೊಂಡ ಗಾಯಾಳುಗಳನ್ನು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.