ಚಿಕ್ಕಮಗಳೂರು: ತಾಲ್ಲೂಕಿನ ಪ್ರವಾಸಿ ತಾಣಗಳಲ್ಲಿ ಒಂದಾಗಿರುವ ಹಿರೇಕೊಳಲೆ ಕೆರೆಯ ತುರ್ತು ದುರಸ್ತಿಗೆ ಜಿಲ್ಲಾಡಳಿತ ಕ್ರಮವಹಿಸಬೇಕಾಗಿದೆ.
ಪ್ರವಾಸಿಗರು ಕೆರೆಯ ವಿಹಂಗಮ ನೋಟವನ್ನು ವೀಕ್ಷಿಸಲು ಹಾಗೂ ಪ್ರಸ್ತುತ ಚಿಕ್ಕಮಗಳೂರಿನ ಕೆಲವು ಬಡಾವಣೆಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಸಲುವಾಗಿ ಕೆರೆಯ ದಡದಿಂದ ನೀರಿನ ಸ್ವಲ್ಪ ದೂರದವರೆಗೆ ನಿರ್ಮಾಣ ಮಾಡಿರುವ ನೀರಿನ ವಾಲ್ ಮತ್ತು ವೀಕ್ಷಣೆ ಗೋಪುರಕ್ಕೆ ಸಂಪರ್ಕ ಕಲ್ಪಿಸುವ ಸಿಮೆಂಟ್ ನ ಸೇತುವೆಯು ಭಾಗಶಃ ಮುರಿದು ಬೀಳುವ ಹಂತಕ್ಕೆ ತಲುಪಿದೆ.
ಈ ಕೆರೆಯನ್ನು ವೀಕ್ಷಣೆಗೆ ರಜಾದಿನಗಳು ಅಲ್ಲದೆ ಸಾಮಾನ್ಯ ದಿನಗಳಲ್ಲಿಯು ಹೆಚ್ಚಿನ ಸಂಖ್ಯೆಯ ಪ್ರವಾಸಿಗರು ಬರುವುದರ ಜೊತೆಗೆ ಸೇತುವೆ ಮೇಲೆ ನಡೆದಾಡಿ ಪ್ರಾಕೃತಿಯ ಸೌಂದರ್ಯವನ್ನು ಸವಿಯುತ್ತಾರೆ.
ನಿರ್ವಹಣೆಯಿಲ್ಲದೇ ಶಿಥಿಲಾವ್ಯವಸ್ಥೆ ಸೇತುವೆಯನ್ನು
ಜಿಲ್ಲಾಡಳಿತವು ತುರ್ತಾಗಿ ಸಂಬಂಧಿಸಿದ ಸ್ಥಳೀಯ ಗ್ರಾಮ ಪಂಚಾಯತಿಗೆ ಕೆರೆಯ ವೀಕ್ಷಣಾ ಪ್ರದೇಶದ ದುರಸ್ತಿಗೆ ಸೂಚಿಸುವುದು ಅಗತ್ಯವಾಗಿದೆ ನಿರ್ಲಕ್ಷ್ಯ ತೋರಿದರೆ ಸ್ಥಳೀಯರಿಗೆ ಮತ್ತು ಪ್ರವಾಸಿಗರ ಅಪಾಯ ನಿಶ್ಚಿತ.
ಯಾವುದೇ ಭೀತಿಯಿಲ್ಲದೇ ಪ್ರವಾಸಿಗರು ಸೆಲ್ಲಿಗೆ ಮುಗಿಬೀಳುತ್ತಿರುವುದು, ಕೆರೆ ಕೋಡಿಯೂ ಸಹ ಯಾವುದೇ ರಕ್ಷಣೆಯಿಲ್ಲದ ಕಾರಣ ಅಲ್ಲಿ ಹೋಗುವ ಪ್ರವಾಸಿಗರು ಆಯಾ ತಪ್ಪಿ ಕಂದಕಕ್ಕೆ ಬೀಳುವ ಅಪಾಯವಿದೆ ಈ ಬಗ್ಗೆ ಯಾರೂ ತಲೆಕೆಡಿಸಿಕೊಂಡಂತಿಲ್ಲ.
ಪ್ರವಾಸಿಗರು ಕೆರೆಗೆ ಭೇಟಿ ನೀಡುವಾಗ ಸೇತುವೆಯ ಬಗ್ಗೆ ಎಚ್ಚರಿಕೆ ವಹಿಸಬೇಕು ಹಾಗೂ ಸಂಬಂಧಿಸಿದ ಗ್ರಾಮ ಪಂಚಾಯತಿಯ ಅಧಿಕಾರಿಗಳು ಅಪಾಯ ನಡೆಯುವ ಮುನ್ನವೇ ಸೇತುವೆಯನ್ನು ದುರಸ್ತಿಗೊಳಿಸುವುದು ಉತ್ತಮ ಎಂದು ಪ್ರವಾಸಿಗರದ ಚಿಕ್ಕಮಗಳೂರಿನ ಮಂಜುನಾಥರವರು ಸಲಹೆಯನ್ನು ನೀಡಿದ್ದಾರೆ.
ರಿಪ್ಪನ್ಪೇಟೆ: ಕಳೆದ ವಿಧಾನಸಭಾ ಚುನಾವಣೆಯ ವೇಳೆ ನಮ್ಮ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಮನೆಗೆ ತಲುಪಿಸುವಾಗ ಬಿಜೆಪಿಯವರು ಗ್ಯಾರಂಟಿ…
ಶಿವಮೊಗ್ಗ: ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿಯ ಪರ ಮತಯಾಚಿಸಿದ ಪ್ರಧಾನಿ ಮೋದಿ ಅವರು ಈ ದೇಶದ ಹೆಣ್ಣುಮಕ್ಕಳ ಕ್ಷಮೆ ಕೇಳಬೇಕು ಎಂದು…
ರಿಪ್ಪನ್ಪೇಟೆ: ಇತಿಹಾಸ ಪ್ರಸಿದ್ದ ಶ್ರೀಸಿದ್ದಿವಿನಾಯಕ ಸ್ವಾಮಿಯ ಪ್ರಥಮ ವರ್ಷದ ಶ್ರೀಮನ್ಮಹಾರಥೋತ್ಸವ ಸಂಭ್ರಮ ಸಡಗರದೊಂದಿಗೆ ವಿಜೃಂಭಣೆಯಿಂದ ಇಂದು ಜರುಗಿತು. ಮಧ್ಯಾಹ್ನ 12:30…
ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ನಗರದಲ್ಲಿ ಮತಯಾಚನೆ ನಡೆಸಿದರು. ನಗರದ ಶಾಹಿ ಗಾರ್ಮೆಂಟ್ಸ್, ಟೊಯೋಟಾ…
ಶಿಕಾರಿಪುರ: ಪಕ್ಷೇತರ ಅಭ್ಯರ್ಥಿಯಾಗಿರುವ ಕೆ.ಎಸ್.ಈಶ್ವರಪ್ಪ ಅವರ ಶಿಕಾರಿಪುರದ ಚುನಾವಣಾ ಕಚೇರಿ ಮುಂದೆ ವಾಮಾಚಾರ ನಡೆದಿರುವುದು ಬೆಳಕಿಗೆ ಬಂದಿದ್ದು ಈ ಕುರಿತು ಈಶ್ವರಪ್ಪ…
ಹೊಸನಗರ : ಈ ಬಾರಿಯ ಚುನಾವಣೆ ಭಾಗ್ಯ ಗ್ಯಾರಂಟಿಗಳ ಮೂಲಕ ಜನರನ್ನು ಸೆಳೆಯುವ ಚುನಾವಣೆಯಲ್ಲ, ಹಾಡು ಡ್ಯಾನ್ಸ್ ಮೂಲಕ ಲೋಕಸಭೆಗೆ…