ನಿರ್ಮಿತಿ ಕೇಂದ್ರದ ಯೋಜನಾ ವ್ಯವಸ್ಥಾಪಕನ ಮನೆ ಮೇಲೆ ಲೋಕಾಯುಕ್ತ ದಾಳಿ !
ಚಿಕ್ಕಮಗಳೂರು : ಅಕ್ರಮ ಆಸ್ತಿ ಸಂಪಾದನೆ ಆರೋಪದಲ್ಲಿ ನಿರ್ಮಿತಿ ಕೇಂದ್ರದ ಯೋಜನಾ ವ್ಯವಸ್ಥಾಪಕ ಗಂಗಾಧರ ಮನೆ ಮೇಲೆ ಲೋಕಾಯುಕ್ತರು ಬುಧವಾರ ಬೆಳಿಗ್ಗೆ ದಾಳಿ ನಡೆಸಿದ್ದಾರೆ.
ನಿರ್ಮಿತಿ ಕೇಂದ್ರದ ಕಚೇರಿ, ಜಯನಗರದಲ್ಲಿರುವ ಅವರ ಮನೆ, ರಾಮನಹಳ್ಳಿಯಲ್ಲಿರುವ ಪೆಟ್ರೋಲ್ ಬಂಕ್, ನಿರ್ಮಾಣ ಹಂತದಲ್ಲಿರುವ ರೆಸಾರ್ಟ್ ಮೇಲೆ ದಾಳಿ ನಡೆಸಿದ್ದಾರೆ.
ಗಂಗಾಧರ ಅವರು ಆಸ್ತಿ ಬಗ್ಗೆ ಮಾಹಿತ ಕಲೆ ಹಾಕಿದ್ದ ಲೋಕಾಯುಕ್ತ ಅಧಿಕಾರಿಗಳು, ಲೋಕಾಯುಕ್ತ ಡಿವೈಎಸ್ಪಿ ತಿರುಮಲೇಶ್ ನೇತೃತ್ವದಲ್ಲಿ 50ಕ್ಕೂ ಹೆಚ್ಚು ಅಧಿಕಾರಿಗಳು ಏಕ ಕಾಲದಲ್ಲಿ ದಾಳಿ ನಡೆಸಿದ್ದಾರೆ. ಮನೆಯಲ್ಲಿರುವ ವಸ್ತುಗಳು, ಕಡತಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.