Categories: Chikkamagaluru

ಪರವಾನಿಗೆ ರಹಿತ ಬಂದೂಕುಗಳನ್ನು ದುರಸ್ತಿ ಮಾಡಿಕೊಡುತ್ತಿದ್ದ ಆರೋಪದಡಿ 6 ಮಂದಿ ಅರೆಸ್ಟ್ ! ಅಪಾರ ಪ್ರಮಾಣದ ಬಂದೂಕುಗಳು ವಶ !!

ಚಿಕ್ಕಮಗಳೂರು: ಪರವಾನಿಗೆ ರಹಿತ ಬಂದೂಕುಗಳನ್ನು ದುರಸ್ತಿ ಮಾಡಿಕೊಡುತ್ತಿದ್ದ ಆರೋಪದ ಮೇರೆಗೆ ಜಿಲ್ಲೆಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ವಿವಿಧ ಅಂಗಡಿಗಳ ಮೇಲೆ ದಾಳಿ ನಡೆಸಿರುವ ಪೊಲೀಸರು 6 ಆರೋಪಿಗಳನ್ನು ಬಂಧಿಸಿ ಪರವಾನಿಗೆ ಇಲ್ಲದ 47 ಬಂದೂಕು, 2 ರಿವಾಲ್ವರ್ ಸೇರಿದಂತೆ ಬಂದೂಕಿನ ನಳಿಕೆ, ಗುಂಡುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ತನಿಖೆ ವೇಳೆ ಪರವಾನಿಗೆ ಇಲ್ಲದೇ ಅಕ್ರಮವಾಗಿ ಬಂದೂಕು ಹೊಂದಿದ್ದ ಆರೋಪದ ಮೇರೆಗೆ ಆರು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಬಂಧಿತ ಮೂವರು ಆರೋಪಿಗಳಿಂದ ಪರವಾನಿಗೆ ಇಲ್ಲದ 47 ಬಂದೂಕು, 2 ರಿವಾಲ್ವರ್, 24 ಬಂದೂಕಿನ ನಳಿಕೆ, 22 ರೈಫಲ್ ಗುಂಡುಗಳು, 40 ಬಕ್‍ಶಾಟ್ ಗುಂಡುಗಳು, 15 ಕಾಟ್ರಿಡ್ಜ್‍ಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಘಟನೆ ಸಂಬಂಧ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ 2 ಹಾಗೂ ಬಾಳೂರು ಪೊಲೀಸ್ ಠಾಣೆಯಲ್ಲಿ 1 ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಈ ಪ್ರಕರಣದಲ್ಲಿ ಬಂಧಿತ ಆರೋಪಿ ಸದಾಶಿವಾಚಾರಿ ಎಂಬಾತ ನೀಡಿದ ಮಾಹಿತಿ ಮೇರೆಗೆ ಪೊಲೀಸರು ಪರವಾನಿಗೆ ಇಲ್ಲದೇ ಅಕ್ರಮವಾಗಿ ಬಂದೂಕು ಹೊಂದಿದ್ದ ಕಳಸ ತಾಲೂಕಿನ ಸಂಪಿಗೆಗದ್ದೆ ನಿವಾಸಿ ಸುಂದರ ಹಾಗೂ ಸಂಪಿಗೆಮನೆ ನಿವಾಸಿ ಗಂಗಾಧರ ಶೆಟ್ಟಿ ಹಾಗೂ ಎನ್.ಆರ್.ಪುರ ತಾಲೂಕಿನ ಹಕ್ಕಲುಮನೆ ನಿವಾಸಿ ಶಿವರಾಜ್, ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಪಟ್ಟಣದ ರಂಭಾಪುರಿ ಮಠ ರಸ್ತೆಯ ನಿವಾಸಿ ರಾಮಚಂದ್ರಾಚಾರಿ, ಮೂಡಿಗೆರೆ ತಾಲೂಕಿನ ಕೆಳಗೂರು ನಿವಾಸಿ ಸುಧಾಕರ್ ಆಚಾರ್ ಈ 6 ಮಂದಿ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಅಕ್ರಮ ಬಂದೂಕನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಅಕ್ರಮ ಬಂದೂಕು ಪ್ರಕರಣ ಸಂಬಂಧ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ 2 ಪ್ರಕರಣಗಳು ದಾಖಲಾಗಿದ್ದು, ಪರವಾನಿಗೆ ಇಲ್ಲದ 17 ಹಾಗೂ ಪರವಾನಿಗೆ ಇರುವ 2 ಬಂದೂಕುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಾಳೂರು ಪೊಲೀಸ್ ಠಾಣೆಯಲ್ಲಿ 1 ಪ್ರಕರಣ ದಾಖಲಾಗಿದ್ದು, ಪರವಾನಿಗೆ ಇಲ್ಲದ 21 ಪರವಾನಿಗೆ ಇಲ್ಲದ  ರಿವಾಲ್ವರ್‌ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಳಸ ಠಾಣೆಯಲ್ಲಿ 2 ಪ್ರಕರಣಗಳಿಗೆ ಸಂಬಂಧಿಸಿದಂತೆ ಪರವಾನಿಗೆ ಇಲ್ಲದ 2 ಬಂದೂಕನ್ನು ವಶಕ್ಕೆ ಪಡೆಯಲಾಗಿದೆ. ಎನ್.ಆರ್.ಪುರ ಠಾಣೆಯ 1 ಪ್ರಕರಣ ಸಂಬಂಧ ಪೊಲೀಸರು ಪರವಾನಿಗೆ ಇಲ್ಲದ 1 ಬಂದೂಕನ್ನು ವಶಕ್ಕೆ ಪಡೆದಿದ್ದಾರೆ.

ಜಿಲ್ಲೆಯ ಬಾಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಬಿದರೆ ಗ್ರಾಮದಲ್ಲಿ ಮಾನಸಿಕ ಅಸ್ವಸ್ಥ ಎನ್ನಲಾದ ವ್ಯಕ್ತಿಯೊಬ್ಬ ಪರವಾನಿಗೆ ಇಲ್ಲದ ಬಂದೂಕಿನಿಂದ ಗುಂಡು ಹಾರಿಸಿದ್ದ ವೇಳೆ ಬೈಕ್‍ನಲ್ಲಿ ಹೋಗುತ್ತಿದ್ದ ಮೂವರು ಸವಾರರ ಪೈಕಿ ಇಬ್ಬರು ಸವಾರರಿಗೆ ಗುಂಡು ತಗುಲಿ ಮೃತಪಟ್ಟ ಘಟನೆ ಇತ್ತೀಚಿಗೆ ನಡೆದಿತ್ತು. ಜಿಲ್ಲೆಯಲ್ಲಿ ಅಕ್ರಮವಾಗಿ ಬಂದೂಕು ಮಾರಾಟ ಮಾಡುವವರ ಜಾಲ ಇದೆ ಎನ್ನುವ ಆರೋಪ ಹಿಂದಿನಿಂದಲೂ ಕೇಳಿ ಬಂದಿದ್ದು, ಬಿದರೆ ಗ್ರಾಮದಲ್ಲಿ ನಡೆದ ಘಟನೆ ಬೆನ್ನಲ್ಲೇ ಪೊಲೀಸ್ ಇಲಾಖೆ ಪರವಾನಿಗೆ ಇಲ್ಲದೇ ಅಕ್ರಮವಾಗಿ ಬಂದೂಕು ಹೊಂದಿರುವವರ ಬೆನ್ನು ಬಿದ್ದಿದ್ದು, ತನಿಖೆ ಮುಂದುವರಿದಿರುವುದರಿಂದ ಜಿಲ್ಲಾದ್ಯಂತ ಅಕ್ರಮವಾಗಿ ಬಂದೂಕು ಹೊಂದಿರುವವರು, ಮಾರಾಟ ಮಾಡುವವರಲ್ಲಿ ನಡುಕ ಹುಟ್ಟಿದೆ ಎಂದು ಸಾರ್ವಜನಿಕರು ಮಾತನಾಡಿಕೊಳ್ಳುತ್ತಿದ್ದಾರೆ.

Malnad Times

Recent Posts

ಇನ್ನೊಬ್ಬ ಈಶ್ವರಪ್ಪ ಇದ್ದಾರೆ ಎಚ್ಚರ…!

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ನಗರದಲ್ಲಿ ಮತಯಾಚನೆ ನಡೆಸಿದರು. ನಗರದ ಶಾಹಿ ಗಾರ್ಮೆಂಟ್ಸ್, ಟೊಯೋಟಾ…

4 hours ago

ಕೆ.ಎಸ್. ಈಶ್ವರಪ್ಪ ಚುನಾವಣಾ ಕಚೇರಿ ಮುಂದೆ ವಾಮಾಚಾರ

ಶಿಕಾರಿಪುರ: ಪಕ್ಷೇತರ ಅಭ್ಯರ್ಥಿಯಾಗಿರುವ ಕೆ.ಎಸ್.ಈಶ್ವರಪ್ಪ ಅವರ ಶಿಕಾರಿಪುರದ ಚುನಾವಣಾ ಕಚೇರಿ ಮುಂದೆ ವಾಮಾಚಾರ ನಡೆದಿರುವುದು ಬೆಳಕಿಗೆ ಬಂದಿದ್ದು ಈ ಕುರಿತು ಈಶ್ವರಪ್ಪ…

6 hours ago

ಫಲಿತಾಂಶ ಹೊರಬರಲಿ ಗ್ಯಾರಂಟಿಯೋ, ಅಭಿವೃದ್ದಿಯೋ ತಿಳಿಯಲಿದೆ ; ಬಿ.ವೈ. ರಾಘವೇಂದ್ರ

ಹೊಸನಗರ : ಈ ಬಾರಿಯ ಚುನಾವಣೆ ಭಾಗ್ಯ ಗ್ಯಾರಂಟಿಗಳ ಮೂಲಕ ಜನರನ್ನು ಸೆಳೆಯುವ ಚುನಾವಣೆಯಲ್ಲ, ಹಾಡು ಡ್ಯಾನ್ಸ್ ಮೂಲಕ ಲೋಕಸಭೆಗೆ…

19 hours ago

ಹೆಮ್ಮಕ್ಕಿ ಶ್ರೀ ಭದ್ರಕಾಳಿ ಮತ್ತು ಶ್ರೀ ಸೋಮೇಶ್ವರ ಸ್ವಾಮಿಗೆ ಜೀರ್ಣಾಷ್ಟಬಂಧ ಮತ್ತು ಬ್ರಹ್ಮ ಕಲಶಾಭಿಷೇಕ

ಕಳಸ : ತಾಲ್ಲೂಕಿನ ಹೆಮ್ಮಕ್ಕಿಯ ಶ್ರೀ ಭದ್ರಕಾಳಿ ಅಮ್ಮನವರಿಗೆ ಮತ್ತು ಶ್ರೀ ಸೋಮೇಶ್ವರ ಸ್ವಾಮಿಗೆ ಮೇ 01 ರಿಂದ ಮೇ…

21 hours ago

ರಜತ ಉತ್ಸವದ ಗಣಪತಿ ಮೂರ್ತಿಯನ್ನು ದೇವಸ್ಥಾನಕ್ಕೆ ಸಮರ್ಪಣೆ

ರಿಪ್ಪನ್‌ಪೇಟೆ: ನಾಳೆ ನಡೆಯುವ ಶ್ರೀಸಿದ್ದಿವಿನಾಯಕ ಸ್ವಾಮಿ ಶ್ರೀಮನ್ಮಹಾರಥೋತ್ಸವಕ್ಕೆ ಇಲ್ಲಿನ ಗಣೇಶಪ್ರಸಾದ್ ಹೋಟೆಲ್‌ನ ದಿ.ರೇವತಿ ಹೆಬ್ಬಾರ್ ಮತ್ತು ಸತ್ಯನಾರಾಯಣ ಹೆಬ್ಬಾರ್ ಸ್ಮರಣಾರ್ಥ…

22 hours ago

ರಾಜಕೀಯದ ಪರಿಜ್ಞಾನವೇ ಇಲ್ಲದವರು ಸಂಸತ್‌ಗೆ ಹೋದರೆ ಜಿಲ್ಲೆಯ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಹೇಗೆ ಸಾಧ್ಯ ; ಹರತಾಳು ಹಾಲಪ್ಪ

ರಿಪ್ಪನ್‌ಪೇಟೆ: ಕಾಂಗ್ರೆಸ್ ಅಭ್ಯರ್ಥಿಗೆ ಸ್ಥಳೀಯ ಭೌಗೋಳಿಕ ಹಿನ್ನಲೆಯ ಅರಿವೇ ಇಲ್ಲದೆ, ಜಿಲ್ಲೆಯ ಮತದಾರರ ಪಟ್ಟಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹೆಸರೇ ಇಲ್ಲದ…

23 hours ago