Categories: Chikkamagaluru

ಪರಿಶಿಷ್ಟ ಪಂಗಡದ ಕುಟುಂಬಕ್ಕೆ ಹಕ್ಕುಪತ್ರ ವಿತರಿಸಲು ಮನವಿ

ಚಿಕ್ಕಮಗಳೂರು : ಹಲವಾರು ವರ್ಷಗಳಿಂದ ವಾಸಿಸುತ್ತಿರುವ ಮೂಲನಿವಾಸಿಗಳಿಗೆ ಹಕ್ಕು ಪತ್ರ ವಿತರಿಸಬೇಕು ಎಂದು ದಲಿತ ಸಂಘರ್ಷ ಸಮಿತಿ (ಸಾಗರ ಬಣ) ನೇತೃತ್ವದಲ್ಲಿ ಗ್ರಾಮಸ್ಥರು ಶಿರಸ್ತೇದಾರ್ ಹೇಮಂತ್‌ಕುಮಾರ್ ಮೂಲಕ ಜಿಲ್ಲಾಧಿಕಾರಿಗಳಿಗೆ ಬುಧವಾರ ಮನವಿ ಸಲ್ಲಿಸಿದರು.

ಈ ಕುರಿತು ಮಾತನಾಡಿದ ದಸಂಸ ಜಿಲ್ಲಾ ಸಂಚಾಲಕ ಬಾಲಕೃಷ್ಣ ಬಿಳೇಕಲ್ಲು ಕಳಸ ತಾಲ್ಲೂಕಿನ ತೋಟ ದೂರು ಗ್ರಾ.ಪಂ. ವ್ಯಾಪ್ತಿಯ ತನುಡಿ ಗ್ರಾಮದಲ್ಲಿ ಪರಿಶಿಷ್ಟ ಪಂಗಡದ 20ಕ್ಕೂ ಹೆಚ್ಚು ಕುಟುಂಬಗಳಿಗೆ ವಸತಿಗೆ ಹಕ್ಕು ಪತ್ರ ವಿತರಿಸದೇ ಸತಾಯಿಸಲಾಗುತ್ತಿದೆ ಎಂದು ದೂರಿದರು.

ಪ್ರಸ್ತುತ ತನುಡಿ ಗ್ರಾಮದ ಸರ್ವೆ ನಂ.36 ರಲ್ಲಿ 150ಕ್ಕೂ ಕುಟುಂಬಗಳಿವೆ. ಈ ಪೈಕಿ ಅರಣ್ಯ ಇಲಾಖೆ 130 ಕುಟುಂಬಕ್ಕೆ ಮಾತ್ರ ಹಕ್ಕುಪತ್ರ ವಿತರಿಸಿದ್ದು ಇನ್ನುಳಿದ 20 ಪರಿಶಿಷ್ಟ ಪಂಗಡದ ಕುಟುಂಬಗಳು 94ಸಿ ಯಲ್ಲಿ ಅರ್ಜಿ ಸಲ್ಲಿಸಿದ್ದರೂ ಸಹ ಇದುವರೆಗೂ ಹಕ್ಕುಪತ್ರ ನೀಡಿರುವುದಿಲ್ಲ ಎಂದು ತಿಳಿಸಿದರು.

ಹೀಗಾಗಿ ಜಿಲ್ಲಾಡಳಿತ ಕೂಡಲೇ ಪರಿಶೀಲನೆ ನಡೆಸಿ ತನುಡಿ ಗ್ರಾಮದ ಪರಿಶಿಷ್ಟ ಪಂಗಡದ ಕುಟುಂಬಗಳಿಗೆ ಹಕ್ಕುಪತ್ರ ವಿತರಿಸಿ ಅನುವು ಮಾಡಿಕೊಡಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ದಸಂಸ ಕಳಸ ತಾಲ್ಲೂಕು ಸಂಚಾಲಕ ವಸಂತ್, ಗ್ರಾಮಸ್ಥರಾದ ಪ್ರಭಾಕರ್, ಸೀನಾ, ಲಕ್ಷ್ಮಣ್ ಹಾಜರಿದ್ದರು.

Malnad Times

Recent Posts

ಬಂಗಾರಪ್ಪರ ಋಣ ತೀರಿಸಲು ಗೀತಾಗೆ ಮತ ನೀಡಿ ; ಮಧು ಬಂಗಾರಪ್ಪ

ಸೊರಬ : ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರು ಬಡವರ ಪರವಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದರು. ಅವರ ಋಣವನ್ನು…

59 mins ago

ನೈರುತ್ಯ ಶಿಕ್ಷಕರ, ನೈರುತ್ಯ ಪದವೀಧರರ ಕ್ಷೇತ್ರಗಳಿಗೆ ಜೂ. 03 ರಂದು ಚುನಾವಣೆ | ಮತದಾರರ ಪಟ್ಟಿಗೆ ಹೆಸರು ನೊಂದಾಯಿಸಲು ಮೇ 6 ಕಡೆಯ ದಿನ

ಚಿಕ್ಕಮಗಳೂರು : ಕರ್ನಾಟಕ ವಿಧಾನ ಪರಿಷತ್ತಿನ ನೈರುತ್ಯ ಪದವೀಧರರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರಗಳಿಗೆ ಜೂನ್ 03 ರಂದು…

13 hours ago

ಆನೆ ದಾಳಿಯಿಂದ ಮೃತನಾದ ರೈತನ ಕುಟುಂಬಕ್ಕೆ 24 ಗಂಟೆಯೊಳಗೆ ಪರಿಹಾರ ನೀಡದಿದ್ದಲ್ಲಿ ಸರ್ಕಾರಕ್ಕೆ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಹಾಲಪ್ಪ

ರಿಪ್ಪನ್‌ಪೇಟೆ: ಇಂದು ಬೆಳಗ್ಗೆ ದರಗೆಲೆ ತರಲು ಕಾಡಿಗೆ ತೆರಳಿದ್ದ ರೈತ ತಿಮ್ಮಪ್ಬ ಎಂಬ ರೈತ ಆನೆ ದಾಳಿಗೆ ಬಲಿಯಾಗಿದ್ದು ಮೃತ…

14 hours ago

Arecanut Today Price | ಮೇ 03ರ ಅಡಿಕೆ ರೇಟ್

ಹೊಸನಗರ : ಮೇ 03 ಶುಕ್ರವಾರ ನಡೆದ ಹೊಸನಗರ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.

15 hours ago

ಶ್ರದ್ದಾಭಕ್ತಿಯ ನಾಮಸ್ಮರಣೆಗೆ ದೇವರ ಒಲುಮೆಯಿದೆ ; ಶ್ರೀಗಳು

ರಿಪ್ಪನ್‌ಪೇಟೆ: ಭಕ್ತರು ಭಕ್ತಿಯಿಂದ ಪ್ರಾರ್ಥಿಸಿದರೆ ದೇವರು ನಮ್ಮ ಹೃದಯಗಳಲ್ಲಿ ನೆಲೆಸುತ್ತಾನೆ. ಶ್ರದ್ದಾಭಕ್ತಿಯಿಂದ ಭಗವಂತನ ನಾಮಸ್ಮರಣೆ ಮಾಡಿದರೆ ಶಾಂತಿ ನೆಮ್ಮದಿ ಕರುಣಿಸುತ್ತಾನೆಂದು…

16 hours ago

ರಿಪ್ಪನ್‌ಪೇಟೆ ಸೇರಿದಂತೆ ಸುತ್ತಮುತ್ತಲಿನ ಈ ಗ್ರಾಮಗಳಲ್ಲಿ ನಾಳೆ ಕರೆಂಟ್ ಇರಲ್ಲ !

ರಿಪ್ಪನ್‌ಪೇಟೆ : ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಿನ್ನಲೆಯಲ್ಲಿ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿ ನಿಮಿತ್ತ ಮೇ…

18 hours ago