Categories: Chikkamagaluru

ಪೊಲೀಸ್ ಸಂಘದ ಸುದ್ದಿಗೋಷ್ಟಿಗೆ ಪೊಲೀಸ್ ಇಲಾಖೆಯಿಂದಲೇ ತಡೆ

ಚಿಕ್ಕಮಗಳೂರು: ವಕೀಲರು (Lawyer’s) ಹಾಗೂ ಪೊಲೀಸರ (Police) ಗಲಾಟೆ ಪ್ರಕರಣ ಕುರಿತು ಸುದ್ದಿಗೋಷ್ಠಿ (Pressmeet) ನಡೆಸಲು ಆಗಮಿಸಿದ್ದ ಮಾಜಿ ಪೊಲೀಸ್ ಸಿಬ್ಬಂದಿ ಅಣ್ಣಯ್ಯ ಸುದ್ದಿಗೋಷ್ಠಿ ನಡೆಸದಂತೆ ತಡೆಯಲಾಗಿದೆ.

ವಕೀಲರು ಹಾಗೂ ಪೊಲೀಸರ ನಡುವಿನ ಸಂಘರ್ಷ ದಿನೆ ದಿನೇ ತಾರಕಕ್ಕೇರುತ್ತಿದೆ. ಸೋಮವಾರ ಕೊಡಗಿನ ಅಣ್ಣಯ್ಯ ಎಂಬ ನಿವೃತ್ತ ಪೊಲೀಸ್ ಸಿಬ್ಬಂದಿ ಹಾಗೂ ಪೊಲೀಸ್ ಸಂಘದ ಉಪಾಧ್ಯಕ್ಷರನ್ನು ಪತ್ರಿಕಾಗೋಷ್ಠಿ ನಡೆಸದಂತೆ ಅಧಿಕಾರಿಗಳು ತಡೆಯೊಡ್ಡಿದ್ದಾರೆ.

ಇದಕ್ಕೆ ಅಣ್ಣಯ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಸುದ್ದಿಗೋಷ್ಟಿ ಮಾಡದಂತೆ ನನ್ನನ್ನ ತಡೆದಿದ್ದಾರೆ ಈ ಮೂಲಕ ಹೋರಾಟವನ್ನ ಹತ್ತಿಕ್ಕಲು ಅಧಿಕಾರಿಗಳು ಯತ್ನಿಸುತ್ತಿದ್ದಾರೆ, ನಮ್ಮ ಪೊಲೀಸರಿಗೆ ಯಾರಿಗೆ ತೊಂದರೆಯಾದರೆ ಇಡೀ ರಾಜ್ಯಾದ್ಯಂತ ಹೋರಾಟ ನಡೆಯಲಿದೆ ಎಂದು ಅಣ್ಣಯ್ಯ ಎಚ್ಚರಿಸಿದರು.

ಎಫ್.ಐ.ಆರ್. ಹರಿದು ಬಿಸಾಡಿದವರ ಮೇಲೆ ಏನು ಕ್ರಮ ಕೈಗೊಂಡಿದ್ದೀರಾ ಎಂದು ಅವರು ಎಸ್ಪಿಯವರನ್ನು ಪ್ರಶ್ನಿಸಿದರು. ಪೊಲೀಸರು ಸ್ವಾಭಿಮಾನ ಉಳ್ಳವರು ಅವರಿಗೆ ಅನ್ಯಾಯ ಆಗಲು ಬಿಡಲ್ಲ ಪೊಲೀಸರಿಗೆ ಅನ್ಯಾಯವಾದರೆ ಪೊಲೀಸ್ ಕುಟುಂಬಗಳ ಜೊತೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು ಎಂದು ರಾಜ್ಯ ಸರ್ಕಾರಕ್ಕೆ ನೇರೆ ಎಚ್ಚರಿಕೆ ಕೊಟ್ಟರು,

ಆದರೆ ಈ ನಡುವೆ ತಮ್ಮ ಪರ ಪತ್ರಿಕಾಗೋಷ್ಠಿ ನಡೆಸಲು ಆಗಮಿಸಿದ ಅಣ್ಣಯ್ಯರನ್ನು ಪೊಲೀಸರೇ ಅಡ್ಡಿಪಡಿಸಿದ್ದು ಮಾತ್ರ ವಿಪರ್ಯಾಸವಾಗಿತ್ತು.

Malnad Times

Recent Posts

ಮೋದಿ ಹೆಸರಿನಲ್ಲಿ ರಶೀದಿ ಪಡೆದು ಅಭಿಮಾನಿಯಿಂದ ಸಹಸ್ರನಾಮ ಅರ್ಚನೆ

ಮೋದಿ ಹೆಸರಿನಲ್ಲಿ ರಶೀದಿ ಪಡೆದು ಅಭಿಮಾನಿಯಿಂದ ಸಹಸ್ರನಾಮ ಅರ್ಚನೆ..... ಶೃಂಗೇರಿ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಫಿನಾಡು ವಿಶೇಷತೆಗಳಿಗೆ…

8 hours ago

Arecanut Today Price | ಏಪ್ರಿಲ್ 26ರ ಅಡಿಕೆ ರೇಟ್

ಹೊಸನಗರ : ಏ. 26 ಶುಕ್ರವಾರ ನಡೆದ ಹೊಸನಗರ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.

19 hours ago

ಮೇ 02 ರಂದು ಶಿವಮೊಗ್ಗಕ್ಕೆ ರಾಹುಲ್ ಗಾಂಧಿ ಆಗಮನ

ಶಿವಮೊಗ್ಗ : ಮೇ 2ರಂದು ಕಾಂಗ್ರೆಸ್ ನಾಯಕ ರಾಹುಲ್‍ಗಾಂಧಿ ನಗರದ ಫ್ರೀಡಂ ಪಾರ್ಕ್‌ನಲ್ಲಿ ಗೀತಾಶಿವರಾಜ್‍ಕುಮಾರ್ ಬಹಿರಂಗ ಪ್ರಚಾರ ಮಾಡಲಿದ್ದಾರೆ ಎಂದು…

19 hours ago

ಲಕ್ಷಾಂತರ ಮತಗಳ ಅಂತರದಲ್ಲಿ ಗೆಲುವು ನನ್ನದೇ, 2ನೇ ಸ್ಥಾನಕ್ಕಾಗಿ ಬಿಜೆಪಿ, ಕಾಂಗ್ರೆಸ್ ಪೈಪೋಟಿ ಅಂದ್ರು ಈಶ್ವರಪ್ಪ

ರಿಪ್ಪನ್‌ಪೇಟೆ: ನನ್ನ ಪರವಾಗಿ ಹೋದ ಕಡೆಯಲೆಲ್ಲ ಬಿಜೆಪಿ ಮತ್ತು ಜೆಡಿಎಸ್ ಕಾಂಗ್ರೆಸ್ ಪಕ್ಷದ ಸಾಕಷ್ಟು ಕಾರ್ಯಕರ್ತರು ಹೆಚ್ಚು ಬೆಂಬಲ ವ್ಯಕ್ತಪಡಿಸುತ್ತಿದ್ದು…

19 hours ago

ಹಸೆಮಣೆ ಏರುವ‌ ಮುನ್ನ ಹಕ್ಕು ಚಲಾಯಿಸಿದ ವಧು

ಶೃಂಗೇರಿ : ಇಂದು ನಡೆದ ಮತದಾನದಲ್ಲಿ ತಾಲೂಕಿನ ಕೂತಗೋಡಿನಲ್ಲಿ ಹಸೆಮಣೆ ಏರುವ ಮುನ್ನ ಯುವತಿಯೊಬ್ಬಳು ಮತ ಚಲಾಯಿಸಲು ಅಲಂಕಾರಗೊಂಡೆ ಮತಗಟ್ಟೆಗೆ…

20 hours ago

ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ !

ಮತದಾನದ ವೇಳೆ ಬಿಜೆಪಿ ಕಾರ್ಯಕರ್ತರ ನಡುವೆಯೇ ಮಾರಾಮಾರಿ ನಡೆದ ಬಗ್ಗೆ ವರದಿಯಾಗಿದೆ. ಚಿಕ್ಕಮಗಳೂರು : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂದು…

21 hours ago