ಚಿಕ್ಕಮಗಳೂರು: ಜಿಲ್ಲೆಯಲ್ಲಿರುವ ಸರಕಾರಿ ಭೂಮಿಯನ್ನು ಜಮೀನು ಇಲ್ಲದ ಬಡರೈತರಿಗೆ ವಿತರಣೆ ಮಾಡುವಂತೆ ಕರ್ನಾಟಕ ಮಾಹಿತಿ ಹಕ್ಕು ಕಾರ್ಯಕರ್ತರ ಸಂಘಟನೆ ಜಿಲ್ಲಾಡಳಿತವನ್ನು ಒತ್ತಾಯಿಸಿದೆ.
ಅಪರ ಜಿಲ್ಲಾಧಿಕಾರಿ ಬಿ. ಆರ್. ರೂಪ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಸಂಘಟನೆಯ ಮುಖಂಡರು ಈ ಬಗ್ಗೆ ಮನವಿ ಸಲ್ಲಿಸಿ, ಜಿಲ್ಲೆಯಲ್ಲಿ 4.530 ಎಕರೆಯಷ್ಟು ಸರಕಾರಿ ಭೂಮಿಯಿದೆ. ಅದು ಕೆಲವೆಡೆ ಉಪಯೋಗಕ್ಕೆ ಬಾರದೆ ಪಾಳು ಬಿದ್ದಿದ್ದರೆ, ಉಳಿದ ಭೂಮಿ ಅರಣ್ಯ ಇಲಾಖೆ ಮತ್ತು ಬಲಾಡ್ಯರ ಅಧೀನದಲ್ಲಿದೆ ಎಂದರು.
ಜಿಲ್ಲೆಯಲ್ಲಿ ಬಿತ್ತನೆ ಮಾಡಿ ಬೆಳೆ ಬೆಳೆಯಲು ಭೂಮಿ ಅಲ್ಲದೆ ಬಹಳಷ್ಟು ರೈತ ಕುಟುಂಬಗಳು ಕೂಲಿ, ನಾಲಿ ಮಾಡಿ ಬದುಕುತ್ತಿವೆ. ಒಂದು ಹೊತ್ತಿನತುತ್ತಿಗೂ ಆ ಸಂಸಾರಗಳು ಪರದಾಡುತ್ತಿವೆ ಎಂದು ಹೇಳಿದರು.
ಜಿಲ್ಲಾಡಳಿತ ಅರಣ್ಯ ಇಲಾಖೆ ಮತ್ತು ಬಲಾಢ್ಯರ ವಶದಲ್ಲಿರುವ ಸರ್ಕಾರಿ ಭೂಮಿಯನ್ನು ಬಿಡಿಸಿಕೊಂಡು ಅದನ್ನು ಭೂಹೀನ ಬಡರೈತರ ಕುಟುಂಬಗಳಿಗೆ ನೀಡಿದರೆ. ಅವರ ಬದುಕು ಹಸನಾಗುತ್ತದೆ ಎಂದರು.
ಕರ್ನಾಟಕ ಮಾಹಿತಿ ಹಕ್ಕು ಕಾರ್ಯಕರ್ತರ ಸಂಘಟನೆಯ ರಾಜ್ಯಾಧ್ಯಕ್ಷ ಸೋಮಾ ನಾಯಕ್, ತಾಲ್ಲೂಕು ಅಧ್ಯಕ್ಷ ಗಿರೀಶ್, ಜಂಟಿ ಕಾರ್ಯದರ್ಶಿ ನಂದನ್, ಸಂಘಟನಾ ಕಾ ರ್ಯದರ್ಶಿ ಯುಸೂಫ್, ಮಹಿಳಾ ಘಟಕದ ಕಾರ್ಯದರ್ಶಿ ಮಂಜುಳಾ ಹಾಜರಿದ್ದರು.
ಶಿಕಾರಿಪುರ: ಪಕ್ಷೇತರ ಅಭ್ಯರ್ಥಿಯಾಗಿರುವ ಕೆ.ಎಸ್.ಈಶ್ವರಪ್ಪ ಅವರ ಶಿಕಾರಿಪುರದ ಚುನಾವಣಾ ಕಚೇರಿ ಮುಂದೆ ವಾಮಾಚಾರ ನಡೆದಿರುವುದು ಬೆಳಕಿಗೆ ಬಂದಿದ್ದು ಈ ಕುರಿತು ಈಶ್ವರಪ್ಪ…
ಹೊಸನಗರ : ಈ ಬಾರಿಯ ಚುನಾವಣೆ ಭಾಗ್ಯ ಗ್ಯಾರಂಟಿಗಳ ಮೂಲಕ ಜನರನ್ನು ಸೆಳೆಯುವ ಚುನಾವಣೆಯಲ್ಲ, ಹಾಡು ಡ್ಯಾನ್ಸ್ ಮೂಲಕ ಲೋಕಸಭೆಗೆ…
ಕಳಸ : ತಾಲ್ಲೂಕಿನ ಹೆಮ್ಮಕ್ಕಿಯ ಶ್ರೀ ಭದ್ರಕಾಳಿ ಅಮ್ಮನವರಿಗೆ ಮತ್ತು ಶ್ರೀ ಸೋಮೇಶ್ವರ ಸ್ವಾಮಿಗೆ ಮೇ 01 ರಿಂದ ಮೇ…
ರಿಪ್ಪನ್ಪೇಟೆ: ನಾಳೆ ನಡೆಯುವ ಶ್ರೀಸಿದ್ದಿವಿನಾಯಕ ಸ್ವಾಮಿ ಶ್ರೀಮನ್ಮಹಾರಥೋತ್ಸವಕ್ಕೆ ಇಲ್ಲಿನ ಗಣೇಶಪ್ರಸಾದ್ ಹೋಟೆಲ್ನ ದಿ.ರೇವತಿ ಹೆಬ್ಬಾರ್ ಮತ್ತು ಸತ್ಯನಾರಾಯಣ ಹೆಬ್ಬಾರ್ ಸ್ಮರಣಾರ್ಥ…
ರಿಪ್ಪನ್ಪೇಟೆ: ಕಾಂಗ್ರೆಸ್ ಅಭ್ಯರ್ಥಿಗೆ ಸ್ಥಳೀಯ ಭೌಗೋಳಿಕ ಹಿನ್ನಲೆಯ ಅರಿವೇ ಇಲ್ಲದೆ, ಜಿಲ್ಲೆಯ ಮತದಾರರ ಪಟ್ಟಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹೆಸರೇ ಇಲ್ಲದ…
ಹೊಸನಗರ : ತಾಲೂಕಿನ ಪುಣಜೆ ಗ್ರಾಮದಲ್ಲಿ ಖಾಸಗಿ ವ್ಯಕ್ತಿಯೊಬ್ಬರು ನಿರ್ಮಿಸುತ್ತಿರುವ ನೂತನ ಮನೆಗೆ ಅಕ್ರಮ ನಾಟಾ ಸರಬರಾಜು ಆಗಿರುವುದಾಗಿ ಸ್ಥಳೀಯ…