ಚಿಕ್ಕಮಗಳೂರು : ಸರ್ಕಾರಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಹೆರಿಗೆ ನೋವು ಕಾಣಿಸಿದ್ದರಿಂದ ಮಹಿಳಾ ಕಂಡಕ್ಟರ್ ಬಸ್ನಲ್ಲಿಯೇ ಹೆರಿಗೆ ಮಾಡಿಸಿರುವಂತ ಅಪರೂಪದ ಘಟನೆ ನಡೆದಿದೆ.
ಚಿಕ್ಕಮಗಳೂರು ಡಿಪೋದ KA-18, F- 0865 ಬಸ್ ಬೆಂಗಳೂರು- ಚಿಕ್ಕಮಗಳೂರು ಮಾರ್ಗ ಮಧ್ಯೆ ಚಲಿಸುತ್ತಿತ್ತು. ಈ ವೇಳೆ ಉದಯಪುರ ಸಮೀಪದ ಕೃಷಿ ಕಾಲೇಜು ಹತ್ತಿರ ಈ ಸಂಗತಿ ನಡೆದಿದೆ.
ಬಿಹಾರ ಮೂಲದ ಗರ್ಭಿಣಿಯು ಬೆಂಗಳೂರಿನಿಂದ ಬೇಲೂರಿಗೆ ಪ್ರಯಾಣಿಸುತ್ತಿದ್ದರು. ಈ ವೇಳೆ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು ಹತ್ತಿರದಲ್ಲಿ ಯಾವುದೇ ಆಸ್ಪತ್ರೆ ಇಲ್ಲದ ಕಾರಣ ಬಸ್ನಲ್ಲಿದ್ದ ಕಂಡಕ್ಟರ್ ವಸಂತಮ್ಮ ಅವರು ತಕ್ಷಣ ಬಸ್ ನಿಲ್ಲಿಸಿ 45 ಪ್ರಯಾಣಿಕರೆಲ್ಲರನ್ನು ಕೆಳಗೆ ಇಳಿಸಿದ್ದಾರೆ. ಬಳಿಕ ವಸಂತಮ್ಮ ಹಾಗೂ ಇನ್ನೊಬ್ಬ ಬೆಂಗಳೂರಿನ ಮಹಿಳೆ ಸೇರಿ ಗರ್ಭಿಣಿಗೆ ಹೆರಿಗೆ ಮಾಡಿಸಿದ್ದಾರೆ. ಹೆರಿಗೆ ನಂತರ ಬಾಣಂತಿ, ಹೆಣ್ಣು ಮಗು ಆರೋಗ್ಯವಾಗಿದೆ ಎಂದು ಹೇಳಲಾಗಿದೆ.
ಬಾಣಂತಿಯು ಆರ್ಥಿಕವಾಗಿ ದುರ್ಬಲಳಾಗಿದ್ದ ಕಾರಣ ಕಂಡಕ್ಟರ್ ವಸಂತಮ್ಮ ಇತರೆ ಖರ್ಚಿಗಾಗಿ ಪ್ರಯಾಣಿಕರಿಂದ 1,500 ರೂಪಾಯಿ ಸಂಗ್ರಹಿಸಿ ನೀಡಿದ್ದಾರೆ. ನಂತರ ಮಹಿಳೆಯನ್ನು ಆಂಬುಲೆನ್ಸ್ ಮೂಲಕ ನಗರದ ಶಾಂತಿಗ್ರಾಮ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಹೊಸನಗರ : ಈ ಬಾರಿಯ ಚುನಾವಣೆ ಭಾಗ್ಯ ಗ್ಯಾರಂಟಿಗಳ ಮೂಲಕ ಜನರನ್ನು ಸೆಳೆಯುವ ಚುನಾವಣೆಯಲ್ಲ, ಹಾಡು ಡ್ಯಾನ್ಸ್ ಮೂಲಕ ಲೋಕಸಭೆಗೆ…
ಕಳಸ : ತಾಲ್ಲೂಕಿನ ಹೆಮ್ಮಕ್ಕಿಯ ಶ್ರೀ ಭದ್ರಕಾಳಿ ಅಮ್ಮನವರಿಗೆ ಮತ್ತು ಶ್ರೀ ಸೋಮೇಶ್ವರ ಸ್ವಾಮಿಗೆ ಮೇ 01 ರಿಂದ ಮೇ…
ರಿಪ್ಪನ್ಪೇಟೆ: ನಾಳೆ ನಡೆಯುವ ಶ್ರೀಸಿದ್ದಿವಿನಾಯಕ ಸ್ವಾಮಿ ಶ್ರೀಮನ್ಮಹಾರಥೋತ್ಸವಕ್ಕೆ ಇಲ್ಲಿನ ಗಣೇಶಪ್ರಸಾದ್ ಹೋಟೆಲ್ನ ದಿ.ರೇವತಿ ಹೆಬ್ಬಾರ್ ಮತ್ತು ಸತ್ಯನಾರಾಯಣ ಹೆಬ್ಬಾರ್ ಸ್ಮರಣಾರ್ಥ…
ರಿಪ್ಪನ್ಪೇಟೆ: ಕಾಂಗ್ರೆಸ್ ಅಭ್ಯರ್ಥಿಗೆ ಸ್ಥಳೀಯ ಭೌಗೋಳಿಕ ಹಿನ್ನಲೆಯ ಅರಿವೇ ಇಲ್ಲದೆ, ಜಿಲ್ಲೆಯ ಮತದಾರರ ಪಟ್ಟಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹೆಸರೇ ಇಲ್ಲದ…
ಹೊಸನಗರ : ತಾಲೂಕಿನ ಪುಣಜೆ ಗ್ರಾಮದಲ್ಲಿ ಖಾಸಗಿ ವ್ಯಕ್ತಿಯೊಬ್ಬರು ನಿರ್ಮಿಸುತ್ತಿರುವ ನೂತನ ಮನೆಗೆ ಅಕ್ರಮ ನಾಟಾ ಸರಬರಾಜು ಆಗಿರುವುದಾಗಿ ಸ್ಥಳೀಯ…
ಸಾಗರ: ಕ್ಷೇತ್ರದ ಅಭಿವೃದ್ಧಿಗೆ ಆಸರೆಯಾಗಿದ್ದ ಮಾಜಿ ಮುಖ್ಯಮಂತ್ರಿ ದಿವಂಗತ ಬಂಗಾರಪ್ಪ ಅವರ ಕೊಡುಗೆ ಮರೆಯಕೂಡದು. ಇಲ್ಲಿ ಗೀತಕ್ಕ ಅವರ ಗೆಲುವು…