Categories: Chikkamagaluru

ಬಿಜೆಪಿಯ ಇಲ್ಲ ಸಲ್ಲದ ಹೇಳಿಕೆ ಶೋಭೆ ತರುವುದಿಲ್ಲ ; ಅಕ್ಮಲ್

ಚಿಕ್ಕಮಗಳೂರು : ಕಾಂಗ್ರೆಸ್ ಪಕ್ಷದಿಂದ ಮೂವರು ರಾಜ್ಯಸಭಾ ಸದಸ್ಯರು ಆಯ್ಕೆಗೊಂಡಿ ರುವುದನ್ನು ಸಹಿಸಿಕೊಳ್ಳಲಾರದೇ ಆರ್.ಅಶೋಕ್ ಇಲ್ಲಸಲ್ಲದ ಹೇಳಿಕೆ ನೀಡುತ್ತಿರುವುದು ಅವರ ಸ್ಥಾನಕ್ಕೆ ಶೋಭೆ ತರುವುದಿಲ್ಲ ಎಂದು ಕೆಪಿಸಿಸಿ ಕಿಸಾಲ್ ಸೆಲ್ ಘಟಕದ ಸಂಚಾಲಕ ಸಿ.ಎನ್.ಅಕ್ಮಲ್ ಹೇಳಿದ್ದಾರೆ.


ಈ ಕುರಿತು ಬುಧವಾರ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿರುವ ಅವರು, ರಾಜ್ಯಸಭಾ ಚುನಾವಣೆಯಲ್ಲಿ ಎಸ್.ಟಿ. ಸೋಮಶೇಖರ್ ಅಡ್ಡಮತದಾನ ಮಾಡಿ ಪಕ್ಷದ್ರೋಹವೆಸಗಿದ್ದಾರೆ ಎನ್ನುತ್ತಿದ್ದು ಈ ಹಿಂದೆ ರಾಜ್ಯದಲ್ಲಿ ಬಹುಮತವೇ ಇಲ್ಲದಿರುವ ವೇಳೆಯಲ್ಲಿ ಶಾಸಕರನ್ನು ಆಪರೇಷನ್ ಮಾಡಿ ಸರ್ಕಾರ ರಚಿಸಿರುವುದು ನೆನಪಿನಲ್ಲಿವೇ ಎಂದು ಪ್ರಶ್ನಿಸಿದ್ದಾರೆ.


ಕರ್ನಾಟಕ, ಗೋವಾ ಹಾಗೂ ಉತ್ತರ ಪ್ರದೇಶದ ಸೇರಿದಂತೆ ಇನ್ನಿತರೆ ರಾಜ್ಯಗಳಲ್ಲಿ ಆಪರೇಷನ್ ಕಮಲ ದ ಹೆಸರಿನಲ್ಲಿ ಸ್ಥಳೀಯ ಸರ್ಕಾರವನ್ನು ಉರುಳಿಸಿ ಜನಾಭಿಪ್ರಾಯವನ್ನು ಧಿಕ್ಕರಿಸಿ ಅಧಿಕಾರ ನಡೆಸಿದಾಗ ಇವರಿಗೆ ಪಕ್ಷ ದ್ರೋಹವೆನಿಸಿಲ್ಲವೇ ಎಂದ ಅವರು ರಾಜ್ಯದ ಬಿಜೆಪಿ ಮುಖಂಡರುಗಳು ಈ ಹಿಂದಿನ ನಿಲುವುಗಳನ್ನು ಒಮ್ಮೆ ಮೆಲುಕು ಹಾಕಬೇಕಿದೆ ಎಂದು ಹೇಳಿದ್ದಾರೆ.


ಕರ್ನಾಟಕದ ಕಳೆದ ಸರ್ಕಾರದಲ್ಲಿ ಬಿಜೆಪಿ ಕೇವಲ ನೂರು ಸ್ಥಾನವನ್ನು ಗಳಿಸಿಕೊಳ್ಳಲಾಗದೇ ಶಾಸಕರನ್ನು ಆಪರೇಷನ್ ಕಮಲದ ಹೆಸರಿನಲ್ಲಿ ಛಿದ್ರಗೊಳಿಸಿ ರಾಜ್ಯದಲ್ಲಿ ಅಧಿಕಾರ ನಡೆಸಿರುವುದು ಕಣ್ಣಿಗೆ ಕಾಣುವುದಿಲ್ಲ ಎಂದ ಅವರು ಇದೀಗ ಓರ್ವ ಅಡ್ಡ ಮತದಾನ ಮಾಡಿದರೆ ಇವರಿಗೆ ತಾಯಿದ್ರೋಹವೆಸಗಿದಂತೆ ಹೇಳುತ್ತಿರುವುದು ಖಂಡನೀಯ ಎಂದು ತಿಳಿಸಿದ್ದಾರೆ.


ರಾಜ್ಯದಲ್ಲಿ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರುಗಳ ಶ್ರಮದಿಂದ ರಾಜ್ಯಸಭಾದಲ್ಲಿ ಮೂರು ಸ್ಥಾನಗಳನ್ನು ಗಳಿಸಿಕೊಂಡು ಕಾಂಗ್ರೆಸ್ ಮುನ್ನಡೆಯುತ್ತಿರುವುದು ಸಂತಸದ ಸಂಗತಿ. ಹೀಗಾಗಿ ಇದನ್ನು ಸಹಿಸಿಕೊಳ್ಳಲಾಗದ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹತಾಶೆಯಿಂದ ಈ ರೀತಿ ಹೇಳಿಕೆ ನೀಡಲಾಗುತ್ತಿದೆ ಎಂದು ದೂರಿದ್ದಾರೆ.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

15 hours ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

19 hours ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

19 hours ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

21 hours ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

22 hours ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

1 day ago