ಬೈಕ್ ಮತ್ತು ಸರ್ಕಾರಿ ಬಸ್ ನಡುವೆ ಭೀಕರ ಅಪಘಾತ, ಸ್ಥಳದಲ್ಲೇ ಇಬ್ಬರು ಸಾವು ; ಬಸ್ ಬಿಟ್ಟು ಚಾಲಕ ಪರಾರಿ

0 43

ಚಿಕ್ಕಮಗಳೂರು : ಕೆ.ಎಸ್.ಆರ್.ಟಿ.ಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ನಗರದ ಎಪಿಎಂಸಿ ಬಳಿ ಬುಧವಾರ ವರದಿಯಾಗಿದೆ.

ಮೃತರನ್ನು ನಗರದ ದಂಟರಮಕ್ಕಿ ನಿವಾಸಿ ಶ್ರೀಧರ್ (28) ಮತ್ತು ಹಿರೇಮಗಳೂರು ನಿವಾಸಿ ದಯಾನಂದ್ (30) ಎಂದು ಗುರುತಿಸಲಾಗಿದೆ.

ಅಪಘಾತದ ತೀವ್ರತೆಗೆ ಬಸ್ಸಿನ ಮುಂಭಾಗಕ್ಕೆ ಹಾನಿಯಾಗಿದ್ದು, ಬೈಕ್ ಸಂಪೂರ್ಣ ಜಖಂಗೊಂಡಿದೆ ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Leave A Reply

Your email address will not be published.

error: Content is protected !!