ಶೃಂಗೇರಿ: ಇಲ್ಲಿಯ ಶಾರದಾ ಮಠದಲ್ಲಿ ಶಾರದಾ ದೇವಿಗೆ ಭಾನುವಾರ ಹಂಸವಾಹನ (ಬ್ರಾಹ್ಮೀ) ಅಲಂಕಾರ ಮಾಡಲಾಗಿತ್ತು.
ಶಾರದ ಮಠದಲ್ಲಿ ಶ್ರೀಸೂಕ್ತಜಪ, ಭುವನೇಶ್ವರಿ ಜಪ, ದುರ್ಗಾ ಜಪಗಳ ಬಳಿಕ ಶ್ರೀ ಚಕ್ರಕ್ಕೆ ನವಾಹರಣ ಪೂಜೆ, ಮಧ್ಯಾಹ್ನ 12 ಗಂಟೆಗೆ ಕುಮಾರೀ ಪೂಜೆ, ಸುವಾಸಿನೀ ಪೂಜೆ, ಭಕ್ತಾದಿಗಳಿಂದ ವಿಶೇಷ ಪೂಜೆ ನೆರವೇರಿತು.
ಶಾರದಾ ಮಠದಲ್ಲಿ ಸಂಜೆ 6ಗಂಟೆಗೆ ನಡೆದ ಬೀದಿ ಉತ್ಸವದಲ್ಲಿ ಅಡ್ಡಗದ್ದೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭಕ್ತರು ಉತ್ಸಾಹದಿಂದ ಭಾಗವಹಿಸಿದ್ದರು. ಎನ್.ಆರ್ ಪುರ, ಕೊಪ್ಪ ಮತ್ತು ಶೃಂಗೇರಿ ತಾಲ್ಲೂಕು ಬ್ರಾಹ್ಮಣ ಮಹಾಸಭಾ, ಯುವವಿಪ್ರ ವೇದಿಕೆ, ಕಾವಡಿ ಅಗ್ರಹಾರದ ಉಮಾಮಹೇಶ್ವರ ಸೇವಾ ಸಮಿತಿ, ಹೆಗ್ಗದ್ದೆ ಅನಂತಪದ್ಮನಾಭ ಸೇವಾ ಸಮಿತಿ, ನೇತ್ರವಳ್ಳಿ ದುರ್ಗಾಪರಮೇಶ್ವರಿ ಭಕ್ತ ಮಂಡಳಿ, ಉಳುವೇಬೈಲು ಜೈಶಂಕರ್ ಯುವಕ ಸಂಘ, ಅಡ್ಡಗದ್ದೆ ವಿನಾಯಕ ಯುವಕ ಸಂಘ, ಕೆಳಕೊಪ್ಪ ವಿನಾಯಕ ಸೇವಾ ಸಮಿತಿ, ಕೊಪ್ಪ ಶ್ರೀನಿಕೇತನ ಭಜನಾ ಮಂಡಳಿ, ಹಿಂದೂ ಜಾಗರಣ ವೇದಿಕೆ, ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಘಗಳ ಒಕ್ಕೂಟ, ಪ್ರಕೃತಿ ರೈತ ಮಿತ್ರಕೂಟಗಳು ಬೀದಿ ಉತ್ಸವದಲ್ಲಿ ಪಾಲ್ಗೊಂಡರು.
ಶಾರದಾ ಮಠದ ಚಂದ್ರಶೇಖರ ಭಾರತೀ ಸಭಾಂಗಣದಲ್ಲಿ ಸಂಜೆ 6 ಗಂಟೆಗೆ ಮಾಧುರಿ ಸೀತಾರಾಮನ್, ವೈಷ್ಣವಿ ಸೀತಾರಾಮನ್ ತಂಡದಿಂದ ಗಾಯನ ಕಾರ್ಯಕ್ರಮ ನಡೆಯಿತು.
ಶಾರದಾ ಮಠದ ಕಿರಿಯ ಸ್ವಾಮೀಜಿಗಳಾದ ವಿಧುಶೇಖರಭಾರತೀ ಸ್ವಾಮೀಜಿ ಅವರು ವಜ್ರದ ಕಿರೀಟ, ಚಿನ್ನದ ಆಭರಣಗಳನ್ನು ಧರಿಸಿ ಸಿಂಹಾಸನದಲ್ಲಿ ಕುಳಿತು ದರ್ಬಾರ್ ನಡೆಸಿದರು. ಸಿಂಹಾಸನದಲ್ಲಿ ಇರುವ ಶಾರದೆಯ ಉತ್ಸವ ಮೂರ್ತಿಯನ್ನು ಬಂಗಾರದ ರಥದಲ್ಲಿ ಇಡಲಾಯಿತು. ವೇದ, ವಾದ್ಯ ಘೋಷಗಳೊಂದಿಗೆ ಶಾರದಾ ದೇವಸ್ಥಾನದ ಒಳಪ್ರಾಂಗಣದಲ್ಲಿ ಮೂರು ಸುತ್ತು ಉತ್ಸವ ನೆರವೇರಿತು.
ಸಪ್ತಶತಿ ಪಾರಾಯಣದ ಅಧ್ಯಯನ, ಅಮ್ಮನವರಿಗೆ ಮಂಗಳಾರತಿ, ನಾಲ್ಕು ವೇದಗಳ ಪಾರಾಯಣ, ಪಂಚಾಂಗ ಶ್ರವಣ, ಸಂಗೀತ ಸೇವೆ ನೆರವೇರಿತು. ಪ್ರಸಾದ ವಿನಿಯೋಗದ ಬಳಿಕ ದರ್ಬಾರು ಮುಕ್ತಾಯಗೊಂಡಿತು
ರಿಪ್ಪನ್ಪೇಟೆ: ಕಳೆದ ವಿಧಾನಸಭಾ ಚುನಾವಣೆಯ ವೇಳೆ ನಮ್ಮ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಮನೆಗೆ ತಲುಪಿಸುವಾಗ ಬಿಜೆಪಿಯವರು ಗ್ಯಾರಂಟಿ…
ಶಿವಮೊಗ್ಗ: ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿಯ ಪರ ಮತಯಾಚಿಸಿದ ಪ್ರಧಾನಿ ಮೋದಿ ಅವರು ಈ ದೇಶದ ಹೆಣ್ಣುಮಕ್ಕಳ ಕ್ಷಮೆ ಕೇಳಬೇಕು ಎಂದು…
ರಿಪ್ಪನ್ಪೇಟೆ: ಇತಿಹಾಸ ಪ್ರಸಿದ್ದ ಶ್ರೀಸಿದ್ದಿವಿನಾಯಕ ಸ್ವಾಮಿಯ ಪ್ರಥಮ ವರ್ಷದ ಶ್ರೀಮನ್ಮಹಾರಥೋತ್ಸವ ಸಂಭ್ರಮ ಸಡಗರದೊಂದಿಗೆ ವಿಜೃಂಭಣೆಯಿಂದ ಇಂದು ಜರುಗಿತು. ಮಧ್ಯಾಹ್ನ 12:30…
ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ನಗರದಲ್ಲಿ ಮತಯಾಚನೆ ನಡೆಸಿದರು. ನಗರದ ಶಾಹಿ ಗಾರ್ಮೆಂಟ್ಸ್, ಟೊಯೋಟಾ…
ಶಿಕಾರಿಪುರ: ಪಕ್ಷೇತರ ಅಭ್ಯರ್ಥಿಯಾಗಿರುವ ಕೆ.ಎಸ್.ಈಶ್ವರಪ್ಪ ಅವರ ಶಿಕಾರಿಪುರದ ಚುನಾವಣಾ ಕಚೇರಿ ಮುಂದೆ ವಾಮಾಚಾರ ನಡೆದಿರುವುದು ಬೆಳಕಿಗೆ ಬಂದಿದ್ದು ಈ ಕುರಿತು ಈಶ್ವರಪ್ಪ…
ಹೊಸನಗರ : ಈ ಬಾರಿಯ ಚುನಾವಣೆ ಭಾಗ್ಯ ಗ್ಯಾರಂಟಿಗಳ ಮೂಲಕ ಜನರನ್ನು ಸೆಳೆಯುವ ಚುನಾವಣೆಯಲ್ಲ, ಹಾಡು ಡ್ಯಾನ್ಸ್ ಮೂಲಕ ಲೋಕಸಭೆಗೆ…