ಚಿಕ್ಕಮಗಳೂರು: ಲೋಕಸಭಾ ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ವಿವಾಹಕ್ಕೆಂದು ಮಾಡಿಸಿದ ತಾಳಿ ಸರ ಸೇರಿದಂತೆ ಸುಮಾರು 500 ಗ್ರಾಂ ರಷ್ಟು ಚಿನ್ನಾಭರಣ ಜಪ್ತಿ ಆಗಿದ್ದು, ಸಾರ್ವಜನಿಕರು ಮಾದರಿ ನೀತಿ ಸಂಹಿತೆ ಬಗ್ಗೆ ಇನ್ನೂ ತಲೆ ಕೆಡಿಸಿಕೊಳ್ಳದಿರುವುದು ಜನರಲ್ಲಿ ಜಾಗೃತಿಯ ಕೊರತೆ ಎದ್ದು ಕಾಣುತ್ತಿದೆ.
ದೇಶದಲ್ಲಿ ಲೋಕಸಭೆ ಚುನಾವಣೆ ಘೋಷಣೆಯಾಗಿ ಆರು ದಿನಗಳು ಕಳೆದಿವೆ. ಆದರೆ ರಾಜಕಾರಣಿಗಳಿಗೆ ಇದರ ಬಿಸಿ ತಟ್ಟಿದೆ ಹೊರತು ಜನರು ಈ ಬಗ್ಗೆ ತಲೆ ಕೆಡಿಸಕೊಂಡಿಲ್ಲ. ನೀತಿ ಸಂಹಿತೆ ಜಾರಿಯಾಗಿದೆ ಎಂದು ಆಡಳಿತ ಶಾಹಿ ಬೊಬ್ಬೆ ಬಡಿದುಕೊಂಡರು ಜನರು ಏಕೋ ಕ್ಯಾರೆ ಎನ್ನುತ್ತಿಲ್ಲ. ಜಿಲ್ಲೆಯ ಗಡಿ ಭಾಗದಲ್ಲಿನ ಚೆಕ್ ಪೋಸ್ಟ್ ಗಳಲ್ಲಿ ಸೀಜ್ ಮಾಡಲಾಗುತ್ತಿರುವ ಹಣ ಚಿನ್ನ ಸೀರೆ ಕಾಟಾಚಾರಕ್ಕೆ ಎಂಬಂತಾಗಿದೆ. ಮಗಳ ಮದುವೆಗೆಂದು ಅರ್ಧ ಕೆ.ಜಿ ಚಿನ್ನಾಭರಣ ಬೆಂಗಳೂರುನಲ್ಲಿ ಮಾಡಿಸಿ ಸರ್ಕಾರಿ ಬಸ್ ನಲ್ಲಿ ಕಳಿಸಿದ ತಪ್ಪಿಗೆ ಪೋಲಿಸರು ಜಪ್ತಿ ಮಾಡಿರುವ ಘಟನೆ ವರದಿಯಾಗಿದೆ.
ನಗರದ ಹೊರವಲಯದನಲ್ಲಿನ ಮಾಗಡಿ ಚೆಕ್ ಪೋಸ್ಟ್ ನಲ್ಲಿ ಬೆಂಗಳೂರಿಂದ ಕಡೂರಿಗೆ ಬರುತ್ತಿದ್ದ ಕೆ.ಎಸ್ ಆರ್.ಟಿ.ಸಿ ಬಸ್ ತಡೆದು ತಪಾಸಣೆ ನಡೆಸಿದ ವೇಳೆ ಅರ್ಧ ಕೆ.ಜಿ ತೂಕದ ಚಿನ್ನಾಭರಣ ಸಿಕ್ಕಿಬಿದ್ದಿದೆ. ಕಡೂರಿನ ವ್ಯಕ್ತಿಯೊಬ್ಬ ತನ್ನ ಮಗಳ ಮದುವೆಗೆ ಮಾಡಿಸಿದ ಚಿನ್ನ ಬೆಂಗಳೂರಿಂದ ಬಸ್ ಕಂಡಕ್ಟರ್ ಕೈಗೆ ಕೊಟ್ಟು ಇದೀಗ ಪೇಚಿಗೆ ಸಿಲುಕುವಂತಾಗಿದೆ.
ಬರೋಬ್ಬರಿ 13 ಲಕ್ಷದ 20 ಸಾವಿರ ಮೌಲ್ಯದ ನೆಕ್ಲೆಸ್, ತಾಳಿ ಸೇರಿದಂತೆ ಚಿನ್ನ ಆಭರಣವನ್ನು ಪೋಲಿಸರು ವಶಕ್ಕೆ ಪಡೆದಿದ್ದು, ಬಸ್ ಚಾಲಕ ಪ್ರಕಾಶ ನಿರ್ವಾಹಕ ರಾಜೇಂದ್ರರವರನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…