ಚಿಕ್ಕಮಗಳೂರು: ಮದ್ಯ ಸೇವಿಸಲು ಹಣ ನೀಡಲಿಲ್ಲ ಎಂಬ ಕಾರಣಕ್ಕೆ ಜೀವನಪೂರ್ತಿ ಜೊತೆಯಾಗಿರುವುದಾಗಿ ಹೇಳಿ ತಾಳಿ ಕಟ್ಟಿದ ಪತ್ನಿಯನ್ನೇ ಥಳಿಸಿ ಕೊಲೆ ಮಾಡಿದ್ದ ಆರೋಪಿಗೆ ಚಿಕ್ಕಮಗಳೂರು ಜಿಲ್ಲಾ ನ್ಯಾಯಾಲಯ ಜೀವಾವಧಿ ಸಜೆ ಮತ್ತು ದಂಡ ವಿಧಿಸಿ ತೀರ್ಪು ನೀಡಿದೆ.
ಕಡೂರ ತಾಲ್ಲೂಕಿನ ಪಂಚನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಬಿ . ಕಾವಲುಹಟ್ಟಿಯ ಶೇಖರಪ್ಪ ಶಿಕ್ಷೆಗೆ ಗುರಿಯಾದ ಆರೋಪಿ. ಮದ್ಯ ಸೇವಿಸಲು ಹಣ ಕೊಡುವಂತೆ 2021ರ ಜುಲೈ 8ರಂದು ತನ್ನ ಪತ್ನಿ ಗೀತಾಳಿಗೆ ಪೀಡಿಸಿದ್ದನು. ಹಣ ನೀಡಲು ಆಕೆ ನಿರಾಕರಿಸಿದ್ದರಿಂದ ಜಗಳವಾಗಿ ಮಕ್ಕಳ ಮಧ್ಯಸ್ಥಿಕೆಯಲ್ಲಿ ಸಮಾಧಾನಪಡಿಸಲಾಗಿತ್ತು. ಸಂಜೆ ಮಕ್ಕಳಿಲ್ಲದ ವೇಳೆ ಮತ್ತೆ ಪತ್ನಿಯೊಂದಿಗೆ ಜಗಳ ತೆಗೆದ ಶೇಖರಪ್ಪ, ಕೋಲಿನಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಿ ಪರಾರಿಯಾಗಿದ್ದನು. ರಾತ್ರಿ ವಾಹನದ ವ್ಯವಸ್ಥೆ ಇಲ್ಲದ್ದರಿಂದ ಮರುದಿನ ಆಸ್ಪತ್ರೆಗೆ ಕರೆದೊಯ್ಯಲು ನಿರ್ಧರಿಸಿ ಗೀತಾಳನ್ನು ಮನೆಯಲ್ಲೇ ಮಲಗಿಸಲಾಗಿತ್ತು. ಬೆಳಗ್ಗೆ ಆಸ್ಪತ್ರೆಗೆ ಕರೆದೊಯ್ಯಲು ಏಳಿಸುವ ವೇಳೆಗಾಗಲೇ ಆಕೆ ಮೃತಪಟ್ಟಿದ್ದರು.
ಪಂಚನಹಳ್ಳಿ ಪೊಲೀಸರು ಶೇಖರಪ್ಪ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಆರೋಪ ಸಾಬೀತಾದ ಹಿನ್ನೆಲೆಯಲ್ಲಿ 2ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಬಿ.ಸಿ.ಭಾನುಮತಿ ಶೇಖರಪ್ಪನಿಗೆ ಅವರು ಜೀವಾವಧಿ ಸಜೆ ಮತ್ತು 10 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಅಭಿಯೋಜಕಿ ಭಾವನ ವಾದ ಮಂಡಿಸಿದ್ದರು.
ದುಷ್ಕರ್ಮಿಗಳ ಗುಂಡೇಟಿಗೆ ಕಡವೆ ಬಲಿ:
ಚಾರ್ಮಾಡಿ ಘಾಟ್ನ ಭಾಗದಲ್ಲಿ ಮಲಯಮಾರುತ ಬಳಿಯ ಹೆದ್ದಾರಿ ಬದಿಯ ಚರಂಡಿಯಲ್ಲಿ ಸುಮಾರು ಮೂರು ವರ್ಷದ ಕಡವೆ ಮೃತದೇಹ ಪತ್ತೆಯಾಗಿದೆ.ಶಿಕಾರಿ ಮಾಡುವರ ಗುಂಡಿಗೆ ಕಡವೆ ಬಲಿಯಾಗಿರುವ ಸಾಧ್ಯತೆಯಿದ್ದು ಕಿವಿ, ತೊಡೆ, ಹೊಟ್ಟೆ ಭಾಗದಲ್ಲಿ ಗುಂಡು ತಗುಲಿರುವ ಗುರುತುಗಳಿವೆ.ಸ್ಥಳಕ್ಕೆ ಅರಣ್ಯಾಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಟ್ಟಿಗೆಹಾರ ಮಂಗಳೂರು ರಾಷ್ಟ್ರೀಯ ಹೆದ್ದಾರಿ ಮಾರ್ಗವಾಗಿ ಪ್ರಯಾಣಿಸುವ ವಾಹನ ಚಾಲಕರು ಕಡವೆ ಮೃತದೇಗ ಕಂಡು ಕೊಟ್ಟಿಗೆಹಾರ ಅರಣ್ಯ ಇಲಾಖೆಯ ಚೆಕ್ ಪೋಸ್ಟ್ ಗೆ ಮಾಹಿತಿ ನೀಡಿದ್ದರು.
ಚಿಕ್ಕಮಗಳೂರು : ಕರ್ನಾಟಕ ವಿಧಾನ ಪರಿಷತ್ತಿನ ನೈರುತ್ಯ ಪದವೀಧರರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರಗಳಿಗೆ ಜೂನ್ 03 ರಂದು…
ರಿಪ್ಪನ್ಪೇಟೆ: ಇಂದು ಬೆಳಗ್ಗೆ ದರಗೆಲೆ ತರಲು ಕಾಡಿಗೆ ತೆರಳಿದ್ದ ರೈತ ತಿಮ್ಮಪ್ಬ ಎಂಬ ರೈತ ಆನೆ ದಾಳಿಗೆ ಬಲಿಯಾಗಿದ್ದು ಮೃತ…
ಹೊಸನಗರ : ಮೇ 03 ಶುಕ್ರವಾರ ನಡೆದ ಹೊಸನಗರ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.
ರಿಪ್ಪನ್ಪೇಟೆ: ಭಕ್ತರು ಭಕ್ತಿಯಿಂದ ಪ್ರಾರ್ಥಿಸಿದರೆ ದೇವರು ನಮ್ಮ ಹೃದಯಗಳಲ್ಲಿ ನೆಲೆಸುತ್ತಾನೆ. ಶ್ರದ್ದಾಭಕ್ತಿಯಿಂದ ಭಗವಂತನ ನಾಮಸ್ಮರಣೆ ಮಾಡಿದರೆ ಶಾಂತಿ ನೆಮ್ಮದಿ ಕರುಣಿಸುತ್ತಾನೆಂದು…
ರಿಪ್ಪನ್ಪೇಟೆ : ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಿನ್ನಲೆಯಲ್ಲಿ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿ ನಿಮಿತ್ತ ಮೇ…
ಹೊಸನಗರ: ತಾಲ್ಲೂಕಿನ ವಾರಂಬಳ್ಳಿಯ ಗ್ರಾಮಸ್ಥರು ತಮ್ಮ ಗ್ರಾಮದಲ್ಲಿ ಮೊಬೈಲ್ ಟವರ್ ನಿರ್ಮಾಣಕ್ಕೆ ಮನವಿ ಮಾಡಿಕೊಂಡಿದ್ದು ಈವರೆಗೂ ಬೇಡಿಕೆ ಈಡೇರದೆ ಚುನಾವಣೆ…