ಮೂಡಿಗೆರೆ : ನಾಲ್ವರು ಅಪರಿಚಿತ ಯುವಕ ತಂಡವೊಂದು ಮನೆ ಮಾಲಿಕನಿಗೆ ಖಾರದ ಪುಡಿ ಎರಚಿ ಕುತ್ತಿಗೆಗೆ ಲಾಂಗ್ ಇಟ್ಟು ಮನೆಯಲ್ಲಿದ್ದ ಸುಮಾರು 5 ಲಕ್ಷ ನಗದು, 30 ಗ್ರಾಂ ಮಾಂಗಲ್ಯ ಸರವನ್ನ ಹೊತ್ತೊಯ್ದ ಘಟನೆ ತಾಲೂಕಿನ ಮಾಳಿಗನಾಡು ಹೆಬ್ಬಾರಟ್ಟಿ ಗ್ರಾಮದಲ್ಲಿ ಗುರುವಾರ ರಾತ್ರಿ 08 ಗಂಟೆ ಸುಮಾರಿಗೆ ನಡೆದಿದೆ.
ಹೆಬ್ಬಾರಟ್ಟಿ ಅನಂತ ಹೆಬ್ಬಾರ್ ಎಂಬುವರ ಮನೆಯಲ್ಲಿ ದರೋಡೆ ನಡೆದಿದ್ದು ನಾಲ್ವರು ಅಪರಿಚಿತ ಯುವಕರ ತಂಡ ಮನೆಯ ಮೇಲೆ ದಾಳಿ ನಡೆಸಿ ಮನೆ ಮಾಲೀಕನ ಕುತ್ತಿಗೆಗೆ ಹರಿತವಾದ ಲಾಂಗ್ ಇಟ್ಟು ಬೆದರಿಸಿ ಮನೆಯಲ್ಲಿದ್ದ ಸುಮಾರು ಐದು ಲಕ್ಷ ನಗದು ಸೇರಿದಂತೆ ಚಿನ್ನಾಭರಣಗಳನ್ನು ದರೋಡೆ ಮಾಡಿದ್ದಾರೆ.
ಈ ವೇಳೆ ತಡೆಯಲು ಬಂದ ಕಾರ್ಮಿಕ ಮಾಣಿ ಭಟ್ಟ ಎಂಬುವವರ ಕೈಗೆ ಹರಿತವಾದ ಆಯುಧದಿಂದ ಗಂಭೀರ ಹಲ್ಲೆ ಮಾಡಿದ್ದು ಈ ವೇಳೆ ಕಾರ್ಮಿಕ ಬೊಬ್ಬೆ ಹೊಡೆದ ಪರಿಣಾಮ ಅಕ್ಕಪಕ್ಕದ ಜನ ಸೇರುತ್ತಿದ್ದಂತೆ ಮೂವರು ಕಾರಿನಲ್ಲಿ ಪರಾರಿಯಾಗಿದ್ದಾರೆ ಎನ್ನಲಾಗಿದ್ದು ಓರ್ವ ಅರಮನೆ ತಲಗೂರು ಎಂಬ ಗ್ರಾಮದ ಅರಣ್ಯದಲ್ಲಿ ಅವಿತು ಕೂತಿದ್ದ ಎನ್ನಲಾಗಿದ್ದು ಸ್ಥಳೀಯರು ಸೇರಿ ಅರಣ್ಯ ಪ್ರದೇಶದಲ್ಲಿ ಹುಡುಕಾಡಿದಾಗ ಓರ್ವ ಪತ್ತೆಯಾಗಿದ್ದು ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಬಾಳೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…