ಮಾನವನ ಆಚರಣೆಯಲ್ಲಿವೆ ಧರ್ಮದ ಉಳಿವು ಅಳಿವು ; ರಂಭಾಪುರಿ ಶ್ರೀಗಳು

ಎನ್‌.ಆರ್.ಪುರ: ಮನುಷ್ಯ ಜೀವನ ಪವಿತ್ರ ಪಾವನ. ಅರಿತು ಬಾಳುವುದರಲ್ಲಿ ಬದುಕಿನ ಶ್ರೇಯಸ್ಸಿದೆ. ಧರ್ಮದ ಉಳಿವು ಮತ್ತು ಅಳಿವು ಮನುಷ್ಯನ ಆಚರಣೆಯಲ್ಲಿವೆ ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.

ಅವರು ಗುರುವಾರ ತೆಲಂಗಾಣದ ಕೊಲನಪಾಕ ಸ್ವಯಂಭು ಶ್ರೀ ಸೋಮೇಶ್ವರ ಕ್ಷೇತ್ರದಲ್ಲಿ ಜರುಗಿದ ಇಷ್ಟಲಿಂಗ ಮಹಾಪೂಜಾ ಹಾಗೂ ಧರ್ಮ ಜಾಗೃತಿ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡುತ್ತಿದ್ದರು.

ಪ್ರಾಣ ಯೌವನ ಕಾಲ ಒಮ್ಮೆ ಕಳೆದರೆ ಮತ್ತೆಂದೂ ತಿರುಗಿ ಬರಲಾರವು. ಸದ್ವಿದ್ಯೆ, ಉತ್ತಮ ಸಂಬAಧ ಮತ್ತು ಆದರ್ಶ ಸ್ನೇಹ ಯಾವಾಗಲೂ ನಮ್ಮೊಂದಿಗೆ ಇದ್ದರೆ ಬಾಳೆಲ್ಲ ಸುಖಮಯ. ಚಿಂತೆ ಚಿಂತನೆಗೊಂಡಾಗ ಬಾಳು ಉಜ್ವಲಗೊಳ್ಳಲು ಸಾಧ್ಯ. ಮನುಷ್ಯನಲ್ಲಿ ಒಳ್ಳೆಯ ಮತ್ತು ಕೆಟ್ಟ ಗುಣ ಎರಡೂ ಇವೆ. ಒಳ್ಳೆಯವರ ಒಡನಾಟದಲ್ಲಿ ಬಾಳಿದರೆ ಜೀವನ ವಿಕಾಸಗೊಳ್ಳುವುದು. ದುರ್ಜನರ ಒಡನಾಟದಲ್ಲಿ ಬಾಳಿದರೆ ಬದುಕು ಸರ್ವನಾಶಗೊಳ್ಳುತ್ತದೆ. ಶ್ರೀ ಜಗದ್ಗುರು ರೇಣುಕಾಚಾರ್ಯರು ಬೋಧಿಸಿದ ಶಿವಾದ್ವೈತ ಜ್ಞಾನ ಸಂಪತ್ತು ಜೀವನ ವಿಕಾಸಕ್ಕೆ ಮೂಲಾಧಾರವಾಗಿದೆ ಎಂದರು.

ಮೇಹಕರ ಹಿರೇಮಠದ ರಾಜೇಶ್ವರ ಶ್ರೀಗಳು ಮಾತನಾಡಿ ಮನಸ್ಸು ಇದ್ದರೆ ಮಾರ್ಗ ಯಾವಾಗಲೂ ಇದ್ದೇ ಇರುತ್ತದೆ. ಮನುಷ್ಯ ಭೌತಿಕ ಸಂಪತ್ತಿನ ಜೊತೆಗೆ ಆಧ್ಯಾತ್ಮ ಜ್ಞಾನವನ್ನು ಸಂಪಾದಿಸಿ ಜೀವನ ಸಾರ್ಥಕಗೊಳಿಸಬೇಕಾಗಿದೆ ಎಂದರು.

ಮಳಲಿ ಸಂಸ್ಥಾನ ಮಠದ ಡಾ. ನಾಗಭೂಷಣ ಶ್ರೀಗಳು, ಮಂಗಲಗಿ ಮಠದ ಡಾ|| ಸೋಮನಾಥ ಶ್ರೀಗಳು, ತೊಟ್ನಳ್ಳಿ ಡಾ.ತ್ರಿಮೂರ್ತಿ ಶ್ರೀಗಳು, ಲಿಂಗಸುಗೂರು ಮಾಣಿಕ್ಯೇಶ್ವರಿ ಆಶ್ರಮದ ಮಾತಾ ನಂದಿಕೇಶ್ವರಿ ಅಮ್ಮನವರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಸ್ಮರಣಿಕೆಯನ್ನು ಶ್ರೀ ರಂಭಾಪುರಿ ಜಗದ್ಗುರುಗಳು ಬಿಡುಗಡೆ ಮಾಡಿದರು.

ಹೈದರಾಬಾದಿನ ವೀರಶೈವ ಸಮಾಜದ ಅಧ್ಯಕ್ಷ ವೀರಮಲ್ಲೇಶ, ಜಂಗಮ ಸಮಾಜದ ಅಧ್ಯಕ್ಷ ವಿಶ್ವಂ, ಅಣ್ಣಾರಾವ ಬಿರಾದಾರ, ಶಿವಶರಣಪ್ಪ ಸೀರಿ, ಗುರುಪಾದಪ್ಪ ಕಿಣಗಿ ಪಾಲ್ಗೊಂಡಿದ್ದರು. ಸಿದ್ಧರಬೆಟ್ಟ ಕ್ಷೇತ್ರದ ವೀರಭದ್ರ ಶ್ರೀಗಳು ನಿರೂಪಿಸಿದರು. ಗಿರಿಯಪ್ಪ ಮುತ್ಯಾ ಅವರು ಅನ್ನದಾಸೋಹ ಸೇವೆ ಸಲ್ಲಿಸಿದರು.

ಪ್ರಾತಃಕಾಲ ಶ್ರೀ ಸೋಮೇಶ್ವರ ಮಹಾಲಿಂಗಕ್ಕೆ ಅಭಿಷೇಕ, ಚಂಡಿಕಾಂಬಾ ದೇವಿಗೆ ಕುಂಕುಮಾರ್ಚನೆ ಜರುಗಿತು. ಲೋಕಕಲ್ಯಾಣಕ್ಕಾಗಿ ಶ್ರೀ ರಂಭಾಪುರಿ ಜಗದ್ಗುರುಗಳು ಇಷ್ಟಲಿಂಗ ಮಹಾಪೂಜೆ ನೆರವೇರಿಸಿ ಶುಭ ಹಾರೈಸಿದರು.

Malnad Times

Recent Posts

Rain Alert | ಮುಂದಿನ 5 ದಿನಗಳ ಕಾಲ ರಾಜ್ಯದಲ್ಲಿ ಭಾರಿ ಮಳೆ ಸಾಧ್ಯತೆ

ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ಸುಳಿಗಾಳಿ ಸೃಷ್ಟಿಯಾಗಿರುವ ಕಾರಣ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಬಿರುಗಾಳಿ…

1 week ago

Shivamogga Loksabha Constituency | ಮತದಾನಕ್ಕೆ ಸಕಲ ಸಿದ್ಧತೆ, ಮತಗಟ್ಟೆ ತಲುಪಿದ ಮತಯಂತ್ರಗಳು

ಶಿವಮೊಗ್ಗ : ಮಂಗಳವಾರ ನಡೆಯುವ ಲೋಕಸಭಾ ಚುನಾವಣೆಗೆ ಸಕಲ ಸಿದ್ದತೆಗಳು ನಡೆದಿದ್ದು, ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳು ಇಂದು ಮತಗಟ್ಟೆಗಳಿಗೆ ಅಗತ್ಯವಾದ…

1 week ago

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವು !

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವು ! ಎನ್.ಆರ್.ಪುರ : ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

1 week ago

ಮತದಾನಕ್ಕೆ ಕೌಂಟ್‌ಡೌನ್ | ಮತಗಟ್ಟೆಗಳಿಗೆ ಮತಯಂತ್ರ ಇತರ ಪರಿಕರಗಳೊಂದಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

ಶಿವಮೊಗ್ಗ :ನಾಳೆ ನಡೆಯಲಿರುವ ಲೋಕಸಭೆ ಚುನಾವಣೆ ಮತದಾನಕ್ಕೆ ಸಕಲ ಸಿದ್ಧತೆ ಪೂರ್ಣಗೊಂಡಿದ್ದು, ಇಂದು ನಿಗದಿಪಡಿಸಲಾದ ಮತಗಟ್ಟೆಗಳಿಗೆ ಅಧಿಕಾರಿಗಳು, ಸಿಬ್ಬಂದಿಗಳು ಮತಯಂತ್ರ…

1 week ago

Arecanut Today Price | ಮೇ 5ರ ಅಡಿಕೆ ರೇಟ್

ತೀರ್ಥಹಳ್ಳಿ: ಮೇ 5 ಭಾನುವಾರ ನಡೆದ ತೀರ್ಥಹಳ್ಳಿ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.

1 week ago

ಕಾಂಗ್ರೆಸ್ ಮೀಸಲಾತಿ ಜಾರಿಗೊಳಿಸಿದ್ದರಿಂದ ಕೆಳ ವರ್ಗದವರಿಗೂ ಸರ್ಕಾರಿ ಉದ್ಯೋಗ ಲಭಿಸಿದೆ ; ಬೇಳೂರು ಗೋಪಾಲಕೃಷ್ಣ

ಹೊಸನಗರ : ಕಾಂಗ್ರೆಸ್ ಪಕ್ಷದೇಶದ ಪ್ರಗತಿಯಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಮೀಸಲಾತಿ ಜಾರಿಗೊಳಿಸಿದ ಪರಿಣಾಮ ಇಂದು ಕೆಳಜಾತಿಯವರು ಸರ್ಕಾರಿ ಉದ್ಯೋಗ…

1 week ago