ಮುಳ್ಳಯ್ಯನಗಿರಿಯಲ್ಲಿ ಭಾರಿ ಕಾಡ್ಗಿಚ್ಚು, ನೂರಾರು ಎಕರೆ ಸಸ್ಯ ಸಂಪತ್ತು ಸುಟ್ಟು ಭಸ್ಮ

0 356

ಚಿಕ್ಕಮಗಳೂರು : ಚಂದ್ರದ್ರೋಣ ಪರ್ವತಗಳ ಸಾಲಿನ ಮುಳ್ಳಯ್ಯನಗಿರಿಯ ಸೀತಾಳಯ್ಯನಗಿರಿ ಸಮೀಪ ಇಂದು ಭಾರೀ ಬೆಂಕಿ ಕಾಣಿಸಿಕೊಂಡಿದ್ದು ದಟ್ಟ ಹೊಗೆ ಆವರಿಸಿದ್ದು, ನೂರಾರು ಎಕರೆ ಪ್ರದೇಶದಲ್ಲಿದ್ದ ಅಪರೂಪದ ಸಸ್ಯ ಸಂಪತ್ತು ಸುಟ್ಟು ಭಸ್ಮವಾಗಿದೆ.

ಸೀತಾಳಯ್ಯನಗಿರಿ ಸಮೀಪದ ಗೋಮಾಳದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಗುಡ್ಡ ಹೊತ್ತಿ ಉರಿದಿದೆ. ಗೋಮಾಳದ ಸುತ್ತಲಿನ ಜಾಗದಲ್ಲಿ ಬೆಂಕಿ ಅವರಿಸಿದ್ದು, ಅರಣ್ಯ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ಸಮರೋಪಾದಿಯಲ್ಲಿ ತೊಡಗಿಸಿಕೊಂಡಿದ್ದಾರೆ.

ಕೆಲ ಪ್ರದೇಶಕ್ಕೆ ಅಗ್ನಿಶಾಮಕ ದಳಕ್ಕೆ ಹೋಗಲು ಸಾಧ್ಯವಾಗುತ್ತಿಲ್ಲ, ಅರಣ್ಯ ಇಲಾಖೆಯ ಸಿಬ್ಬಂದಿಗಳು ಕಾರ್ಯಾಚರಣೆ ಮುಂದುವರಿಸಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ.

Leave A Reply

Your email address will not be published.

error: Content is protected !!